Homeಮುಖಪುಟಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ನನಗೆ ಸಂಚಾರ ಮಾಡುವ ಕಷ್ಟಕ್ಕಿಂತ ನವಜಾತ ಶಿಶುಗಳು, ಗರ್ಭಿಣಿಯರು ಮತ್ತುಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ ಎಂದು ರೇಲು ವಾಸವೆ ತಿಳಿಸುತ್ತಾರೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಜನರಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ, ಮಹಾರಾಷ್ಟ್ರದ ನಂದೂರ್‌ಬಾರ್‌ನ ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ಪ್ರತಿದಿನ 18 ಕಿಲೋಮೀಟರ್ ಸಂಚರಿಸಿ ಕುಗ್ರಾಮಗಳಿಗೆ, ಬುಡಕಟ್ಟು ಹಳ್ಳಿಗಳಿಗೆ ತೆರಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಆರು ವರ್ಷದೊಳಗಿನ ಬುಡಕಟ್ಟು ಮಕ್ಕಳಿಗೆ ಸಹಾಯ ಮಾಡಲು ಮತ್ತು ಗರ್ಭಿಣಿಯರು, ಬಾಣಂತಿ ತಾಯಂದಿರನ್ನು ನೋಡಲು, ಅವರಿಗೆ ಸರಿಯಾದ ವೈದ್ಯಕೀಯ ಆರೈಕೆ ಮತ್ತು ತಿಳುವಳಿಕೆ ನೀಡಲು ಪ್ರತಿ ದಿನ ರೇಲು ವಾಸವೆ ನದಿಯನ್ನು ದಾಟಿ ಬುಡಕಟ್ಟು ಗ್ರಾಮಗಳಿಗೆ ತೆರಳುತ್ತಾರೆ.

ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ನಾಸಿಕ್‌ಗೆ ಸೇರಿದವರಾಗಿದ್ದು, ಕಳೆದ ಏಪ್ರಿಲ್‌ನಿಂದ ಬುಡಕಟ್ಟು ಗ್ರಾಮಗಳ ನವಜಾತ ಶಿಶುಗಳನ್ನು ಭೇಟಿ ಮಾಡಲು ಪ್ರಾರಂಭಿಸಿದರು. ಜೊತೆಗೆ ಅಲಿಗಟ್ ಮತ್ತು ದಾದರ್‌ನ ಕುಗ್ರಾಮಗಳಲ್ಲಿ ಗರ್ಭಿಣಿ ಮತ್ತು ಬಾಣಂತಿ ತಾಯಂದಿರನ್ನು ನೋಡಿಕೊಳ್ಳಲು ಪ್ರಾರಂಭಿಸಿದರು.

ಇದನ್ನೂ ಓದಿ: ಅಮೆರಿಕ: ಜೋ ಬಿಡೆನ್ ಪತ್ನಿಯ ನೀತಿ ನಿರ್ದೇಶಕಿಯಾಗಿ ಭಾರತೀಯ ಮೂಲದ ಮಾಲಾ ಅಡಿಗಾ ಆಯ್ಕೆ!

ಅಂಗನವಾಡಿ ಕಾರ್ಯಕರ್ತೆಯಾಗಿರುವ ಅವರು ನವಜಾತ ಶಿಶುಗಳು, ಅವರ ತಾಯಂದಿರ ತೂಕ, ಆರೋಗ್ಯ ಮತ್ತು ಸರಿಯಾದ ಬೆಳವಣಿಗೆಯನ್ನು ಪರಿಶೀಲಿಸುತ್ತಲೇ ಇರಬೇಕು. ಹಾಗಾಗಿ ಅವರು ಲಾಕ್‌ಡೌನ್‌ ಲೆಕ್ಕಿಸದೇ ಕೆಲಸ ಮಾಡಿದ್ದಾರೆ.

’ಪ್ರತಿದಿನ ನದಿಯಲ್ಲಿ ಹುಟ್ಟು ಹಾಕಿ ಸಂಚಾರ ಮಾಡುವುದು ಸುಲಭವಲ್ಲ. ಸಂಜೆ ಮನೆಗೆ ಹಿಂದಿರುಗುವ ಹೊತ್ತಿಗೆ ನನ್ನ ಕೈ ನೋವು ಬಂದಿರುತ್ತದೆ. ಆದರೆ ನನಗೆ ಆ ಚಿಂತೆ ಇಲ್ಲ. ಮುಖ್ಯವಾಗಿ ನವಜಾತ ಶಿಶುಗಳು ಮತ್ತು ಗರ್ಭಿಣಿಯರು ಮತ್ತು ಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ’ ಎನ್ನುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗ ಸುಧಾರಿಸುವವರೆಗೆ ನಾನು ಈ ಕುಗ್ರಾಮಗಳಿಗೆ ಭೇಟಿ ನೀಡುತ್ತೇನೆ “ಎಂದು ರೇಲು ವಾಸವೆ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

Image
PC: ANI

ಕೊರೊನಾದಂತಹ ಸಂಕಷ್ಟಕರ ಸಮಯದಲ್ಲಿ ಅವರು ಮಾಡಿದ, ಮಾಡುತ್ತಿರುವ ಸೇವೆಗಾಗಿ ಕುಗ್ರಾಮಗಳ ಬುಡಕಟ್ಟು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈಕೆಯ ಸೇವೆ ಕುರಿತು ಮುಖ್ಯಮಂತ್ರಿಗಳ ಕಚೇರಿ ಮತ್ತು ನಂದೂರ್‌ಬಾರ್‌ನ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕರಿಗೂ ವಿಚಾರ ತಲುಪಿದ್ದು, ಇಂತಹ ಅಮೂಲ್ಯ ಸೇವೆ ಸಲ್ಲಿಸುತ್ತಿರುವುದಕ್ಕಾಗಿ ಮುಖ್ಯಮಂತ್ರಿಗಳ ಪರವಾಗಿ ಅವರು ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ: ಸೋಂಕಿತರನ್ನು ಗುಣಪಡಿಸುವಲ್ಲಿ ಫಿಜರ್ ಲಸಿಕೆ ಶೇಕಡ 95 ರಷ್ಟು ಪರಿಣಾಮಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...