Homeಮುಖಪುಟಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ನನಗೆ ಸಂಚಾರ ಮಾಡುವ ಕಷ್ಟಕ್ಕಿಂತ ನವಜಾತ ಶಿಶುಗಳು, ಗರ್ಭಿಣಿಯರು ಮತ್ತುಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ ಎಂದು ರೇಲು ವಾಸವೆ ತಿಳಿಸುತ್ತಾರೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಜನರಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ, ಮಹಾರಾಷ್ಟ್ರದ ನಂದೂರ್‌ಬಾರ್‌ನ ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ಪ್ರತಿದಿನ 18 ಕಿಲೋಮೀಟರ್ ಸಂಚರಿಸಿ ಕುಗ್ರಾಮಗಳಿಗೆ, ಬುಡಕಟ್ಟು ಹಳ್ಳಿಗಳಿಗೆ ತೆರಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಆರು ವರ್ಷದೊಳಗಿನ ಬುಡಕಟ್ಟು ಮಕ್ಕಳಿಗೆ ಸಹಾಯ ಮಾಡಲು ಮತ್ತು ಗರ್ಭಿಣಿಯರು, ಬಾಣಂತಿ ತಾಯಂದಿರನ್ನು ನೋಡಲು, ಅವರಿಗೆ ಸರಿಯಾದ ವೈದ್ಯಕೀಯ ಆರೈಕೆ ಮತ್ತು ತಿಳುವಳಿಕೆ ನೀಡಲು ಪ್ರತಿ ದಿನ ರೇಲು ವಾಸವೆ ನದಿಯನ್ನು ದಾಟಿ ಬುಡಕಟ್ಟು ಗ್ರಾಮಗಳಿಗೆ ತೆರಳುತ್ತಾರೆ.

ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ನಾಸಿಕ್‌ಗೆ ಸೇರಿದವರಾಗಿದ್ದು, ಕಳೆದ ಏಪ್ರಿಲ್‌ನಿಂದ ಬುಡಕಟ್ಟು ಗ್ರಾಮಗಳ ನವಜಾತ ಶಿಶುಗಳನ್ನು ಭೇಟಿ ಮಾಡಲು ಪ್ರಾರಂಭಿಸಿದರು. ಜೊತೆಗೆ ಅಲಿಗಟ್ ಮತ್ತು ದಾದರ್‌ನ ಕುಗ್ರಾಮಗಳಲ್ಲಿ ಗರ್ಭಿಣಿ ಮತ್ತು ಬಾಣಂತಿ ತಾಯಂದಿರನ್ನು ನೋಡಿಕೊಳ್ಳಲು ಪ್ರಾರಂಭಿಸಿದರು.

ಇದನ್ನೂ ಓದಿ: ಅಮೆರಿಕ: ಜೋ ಬಿಡೆನ್ ಪತ್ನಿಯ ನೀತಿ ನಿರ್ದೇಶಕಿಯಾಗಿ ಭಾರತೀಯ ಮೂಲದ ಮಾಲಾ ಅಡಿಗಾ ಆಯ್ಕೆ!

ಅಂಗನವಾಡಿ ಕಾರ್ಯಕರ್ತೆಯಾಗಿರುವ ಅವರು ನವಜಾತ ಶಿಶುಗಳು, ಅವರ ತಾಯಂದಿರ ತೂಕ, ಆರೋಗ್ಯ ಮತ್ತು ಸರಿಯಾದ ಬೆಳವಣಿಗೆಯನ್ನು ಪರಿಶೀಲಿಸುತ್ತಲೇ ಇರಬೇಕು. ಹಾಗಾಗಿ ಅವರು ಲಾಕ್‌ಡೌನ್‌ ಲೆಕ್ಕಿಸದೇ ಕೆಲಸ ಮಾಡಿದ್ದಾರೆ.

’ಪ್ರತಿದಿನ ನದಿಯಲ್ಲಿ ಹುಟ್ಟು ಹಾಕಿ ಸಂಚಾರ ಮಾಡುವುದು ಸುಲಭವಲ್ಲ. ಸಂಜೆ ಮನೆಗೆ ಹಿಂದಿರುಗುವ ಹೊತ್ತಿಗೆ ನನ್ನ ಕೈ ನೋವು ಬಂದಿರುತ್ತದೆ. ಆದರೆ ನನಗೆ ಆ ಚಿಂತೆ ಇಲ್ಲ. ಮುಖ್ಯವಾಗಿ ನವಜಾತ ಶಿಶುಗಳು ಮತ್ತು ಗರ್ಭಿಣಿಯರು ಮತ್ತು ಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ’ ಎನ್ನುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗ ಸುಧಾರಿಸುವವರೆಗೆ ನಾನು ಈ ಕುಗ್ರಾಮಗಳಿಗೆ ಭೇಟಿ ನೀಡುತ್ತೇನೆ “ಎಂದು ರೇಲು ವಾಸವೆ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

Image
PC: ANI

ಕೊರೊನಾದಂತಹ ಸಂಕಷ್ಟಕರ ಸಮಯದಲ್ಲಿ ಅವರು ಮಾಡಿದ, ಮಾಡುತ್ತಿರುವ ಸೇವೆಗಾಗಿ ಕುಗ್ರಾಮಗಳ ಬುಡಕಟ್ಟು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈಕೆಯ ಸೇವೆ ಕುರಿತು ಮುಖ್ಯಮಂತ್ರಿಗಳ ಕಚೇರಿ ಮತ್ತು ನಂದೂರ್‌ಬಾರ್‌ನ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕರಿಗೂ ವಿಚಾರ ತಲುಪಿದ್ದು, ಇಂತಹ ಅಮೂಲ್ಯ ಸೇವೆ ಸಲ್ಲಿಸುತ್ತಿರುವುದಕ್ಕಾಗಿ ಮುಖ್ಯಮಂತ್ರಿಗಳ ಪರವಾಗಿ ಅವರು ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ: ಸೋಂಕಿತರನ್ನು ಗುಣಪಡಿಸುವಲ್ಲಿ ಫಿಜರ್ ಲಸಿಕೆ ಶೇಕಡ 95 ರಷ್ಟು ಪರಿಣಾಮಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....