Homeನ್ಯಾಯ ಪಥತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

ತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

- Advertisement -
- Advertisement -

| ಸಂಪಾದಕೀಯ |

ಕೇಂದ್ರ ಸರ್ಕಾರ ತಾನು ಆಡಳಿತ ನಡೆಸಿದ 5 ವರ್ಷಗಳಲ್ಲಿ ಸುಪ್ರೀಂ ಕೋರ್ಟ್, ಆರ್‍ಬಿಐ, ಸಿ.ಬಿ.ಐ, ದತ್ತಾಂಶ ಸಂಸ್ಥೆಗಳು ಸೇರಿದಂತೆ ಆಡಳಿತದ ಎಲ್ಲಾ ಸಾಂಸ್ಥಿಕ ಆಯಾಮಗಳನ್ನು ಹದಗೆಡಿಸಿರುವುದು ಪ್ರಜ್ಞಾವಂತರಿಗೆ ಗೊತ್ತೇ ಇದೆ. ಸರ್ಕಾರದ ಅನಧಿಕೃತ ಸಂಸ್ಥೆಗಳ ಮೂಲಕ ದೇಶದ ಜನ ಏನು ತಿನ್ನಬೇಕು, ಯಾವ ರೀತಿಯ ಬಟ್ಟೆ ಹಾಕಬೇಕು ಎನ್ನುವ ಫರ್ಮಾನು ಸಹ ಹೊರಡಿಸಲಾಯಿತು. ಈಗ ಅದೇ ಸರ್ಕಾರ ತನ್ನ ಕೊನೆಯ ದಿನಗಳಲ್ಲಿ ದೇಶದ ಮಕ್ಕಳು ಏನು ಕಲಿಯಬೇಕು ಏನು ಬಿಡಬೇಕು ಎಂದು ನಿರ್ಧರಿಸಲು ಮುಂದಾಗಿರುವುದು ಪ್ರಜಾಪ್ರಭುತ್ವ ಘೋರ ಅಣಕವಾಗಿದೆ.

ಭಾರತ ಬಹುತ್ವ ದೇಶ. ಈ ವೈವಿಧ್ಯತೆಯೇ ಅದರ ಜೀವಾಳ. ಈ ವೈವಿಧ್ಯತೆಯೂ ದೇಶದ ಎಲ್ಲಾ ರಂಗಗಳಲ್ಲೂ ಕಂಡಿಬಂದಿದ್ದು ಸಹಜವಾಗಿಯೇ ಮಕ್ಕಳ ಕಲಿಕೆಯಲ್ಲಿಯೂ ಸೇರಿಕೊಂಡಿದೆ. ಭಾರತದ ಪಠ್ಯಪುಸ್ತಕಗಳು ಸಮಗ್ರತೆಯಿಂದ ಕೂಡಿದ್ದು ಇಡೀ ದೇಶದ ಸಂಸ್ಕೃತಿ ಆಚಾರ ವಿಚಾರ ಜನಾಂಗಗಳ ಕುರಿತ ಮಾಹಿತಿಗಳನ್ನು ಒಳಗೊಂಡಿರಬೇಕೆನ್ನುವುದು ಸಂವಿಧಾನದ ಆಶಯ ಮಾತ್ರವಲ್ಲ ಮಕ್ಕಳ ಕಲಿಕೆಯ ದೃಷ್ಟಿಯಿಂದ, ಅವರ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಅನಿವಾರ್ಯವೆಂದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಾವಿನ್ನು ನಮ್ಮ ಪಠ್ಯಪುಸ್ತಕಗಳಲ್ಲಿ ಒಳಗೊಳ್ಳಬೇಕಿರುವ ಸಾವಿರಾರು ಅಂಶಗಳಿದ್ದರೂ ಆ ಕಡೆ ಹೆಜ್ಜೆ ಇಟ್ಟೆದ್ದೆವು. ಆದರೆ ಈ ಸರ್ಕಾರ ಅದರಿಂದ ಹಿಂದೆ ಬರುವ ಸೂಚನೆಗಳನ್ನು ನೀಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ.

ಮೂರು ದಿನ ಹಿಂದೆಯಷ್ಟೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಪ್ರಕಾಶ್ ಜಾವೇಡ್‍ಕರ್‍ ರವರ ನಿರ್ದೇಶನದ ಮೇರೆಗೆ ಮಕ್ಕಳ ಕಲಿಕೆಯ ಹೊರೆ ಕಡಿಮೆ ಮಾಡುವ ನೆಪಹೊಡ್ಡಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಭೇತಿ ಮಂಡಳಿಯು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಭಾರೀ ಬದಲಾವಣೆಗಳನ್ನು ತಂದಿದೆ. ಭಾರತ ಮತ್ತು ಸಮಕಾಲೀನ ಜಗತ್ತು-1 ಎಂಬ ಪಠ್ಯಪುಸ್ತಕದಲ್ಲಿ 70 ಪುಟಗಳನ್ನು ಕೈಬಿಟ್ಟಿದೆ. ಆದರೆ ಅದರಲ್ಲಿ ಕೇರಳದ ಟ್ರಾವೆಂಕೂರ್‍ನಲ್ಲಿ ಕೆಳ ಜಾತಿಯವರಾಗಿ ಪರಿಗಣಿಸುವ ನಾಡಾರ್ ಮಹಿಳೆಯರು ಎದೆಭಾಗವನ್ನು ಬಟ್ಟೆಯಿಂದ ಮುಚ್ಚಿಕೊಳ್ಳುವುದಕ್ಕಾಗಿ ನಡೆಸಿದ ಹೋರಾಟದ ಕಥನ ಸೇರಿದಂತೆ ಮಹತ್ವದ ಮೂರು ಪಾಠಗಳನ್ನು ತೆಗೆದಿರುವುದು ಕೇವಲ ಹೊರೆ ಕಡಿಮೆ ಮಾಡುವುದಕ್ಕಾಗಿ ಎಂದರೆ ನಂಬಲು ಸಾಧ್ಯವೇ?

ಮುಂದುವರಿದು ಇತಿಹಾಸ ಮತ್ತು ಕ್ರೀಡೆ ಎಂಬ ಅಧ್ಯಾಯದಲ್ಲಿ ಭಾರತದಲ್ಲಿ ಕ್ರಿಕೆಟ್ ಆಟವೆಂಬುದು ಕೆಲವೇ ಜಾತಿ, ಪ್ರದೇಶ ಮತ್ತು ಸಮುದಾಯದೊಂದಿಗೆ ಮಾತ್ರ ಬೆಸೆದುಕೊಂಡಿದೆ ಎಂಬುದರ ವಿಮರ್ಶಾತ್ಮಕ ಪಠ್ಯವನ್ನು ಸಹ ಕೈಬಿಡಲಾಗಿದೆ. ಹಾಗಯೇ ಗ್ರಾಮೀಣ ಜನರು ಮತ್ತು ರೈತರು ಎಂಬ ಅಧ್ಯಾಯದಡಿ ಬಂಡವಾಳಶಾಹಿ ಮತ್ತು ವಸಾಹತುಶಾಹಿ ಆಳ್ವಿಕೆಗಳು ಗ್ರಾಮೀಣ ಜನರ ಮೇಲೆ ಅದರಲ್ಲೂ ರೈತರ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಇದ್ದ ಅಧ್ಯಾಯವೂ ಹೊರೆಯ ಕಾರಣಕ್ಕೆ ಕಾಣೆಯಾಗಿದೆ. ಕೈಬಿಟ್ಟಿರುವ ಮೂರು ಪಠ್ಯಗಳು ಸಹ ದೇಶದ ತಳಸಮುದಾಯಗಳ ಕಥನವಾಗಿದ್ದು ಅವರಿಗಾಗುತ್ತಿರುವ ಅನ್ಯಾಯ ಮತ್ತು ಸಮಾಜವನ್ನು ವಿಮರ್ಶಾತ್ಮಕ ನೋಡಲು ಸಾಧ್ಯವಾಗುವಂತವೇ ಆಗಿರುವುದರಿಂದ ಇದು ಉದ್ದೇಶಪೂರ್ವಕ ಕೃತ್ಯ ಎಂಬುದು ಸ್ಪಷ್ಟವಾಗುತ್ತದೆ.

ಈ ಪ್ರಕ್ರಿಯೆ 2016ರಿಂದಲೂ ಚಾಲ್ತಿಯಲ್ಲಿದ್ದು ಈ ಪಠ್ಯಗಳ ಕುರಿತು ಪರೀಕ್ಷೆಗಳಲ್ಲಿ ಪ್ರಶ್ನೆ ಕೇಳಬಾರದೆಂದು ಆಗಲೇ ಸುತ್ತೋಲೆ ಹೊರಡಿಸಿತ್ತು. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡದೇ ಕೇವಲ ಇತಿಹಾಸ (ಸಾಮಾಜಿಕ ವಿಜ್ಞಾನ)ದ ಪಠ್ಯಪುಸ್ತಕಗಳಲ್ಲಿ ಮಾತ್ರ ಪಠ್ಯಗಳನ್ನು ಕಡಿತ ಮಾಡಿದೆ ಎಂದರೆ ಆಳುವ ಸರ್ಕಾರದ ಹುನ್ನಾರ ಅರ್ಥವಾಗದೇ ಇರುವುದಿಲ್ಲ. ಇದೇ ಸಂದರ್ಭದಲ್ಲಿ ಹೊರೆ ಕಡಿಮೆ ಮಾಡುವ ಉದ್ದೇಶ ಅಂತ ಬಾಯಲ್ಲಿ ಹೇಳುತ್ತಿದ್ದು ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ ಹಿಂದಿ ಕವನವನ್ನು ಇದೇ ಎನ್‍ಸಿಇಆರ್‍ಟಿ ಪಠ್ಯದಲ್ಲಿ ಸೇರ್ಪಡೆ ಮಾಡಿದೆ.

ಮಕ್ಕಳು ಏನನ್ನು ಕಲಿಯಬೇಕು, ಪಠ್ಯ ಯಾವುದಿರಬೇಕೆಂಬುದನ್ನು ಹಾಗೂ ಎಷ್ಟಿರಬೇಕೆಂಬುದನ್ನು ನಿರ್ಧರಿಸಬೇಕಿರುವುದು ಶಿಕ್ಷಣ ತಜ್ಞರು, ಮಕ್ಕಳ ತಜ್ಞರು. ಆಳುವ ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ಶಿಕ್ಷಣದಂತಹ ಕ್ಷೇತ್ರಗಳಲ್ಲಿ ಮೂಗು ತೂರಿಸುವುದು ಪ್ರಜಾತಂತ್ರ ವಿರೋಧಿಯಾದುದು. ಆದರೆ ಬಲಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಂತೆಲ್ಲಾ ಶಿಕ್ಷಣದ ಕೇಸರಿಕರಣಕ್ಕೆ ನೇರವಾಗಿ ಕೈಹಾಕುತ್ತಾ ಎಳೆಯ ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪ್ರಯತ್ನ ಮಾಡುತ್ತಿವೆ. ಇನ್ನೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ತಮಗೆ ಮನಸ್ಸಿಗೆ ಬಂದುದ್ದನ್ನು ಪಠ್ಯಪುಸ್ತಕಗಳಲ್ಲಿ ತರಲು ಹೊರಟರೆ ಶಿಕ್ಷಣದ ಉದ್ದೇಶವೇ ಬೀದಿಪಾಲಾಗುತ್ತದೆ.

ಈ ಹಿಂದೆಯೂ 2009ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಬೇಕು ಎಂಬ ಸುತ್ತೋಲೆ ಹೊರಡಿಸಿತ್ತು. ಆಗ ಕರ್ನಾಟಕದ ಪ್ರಜ್ಞಾವಂತರಿಂದ ವ್ಯಾಪಕ ವಿರೋಧ ಬಂದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಿಲುವಿನಿಂದ ಹಿಂದೆ ಸರಿದಿತ್ತು. ತದನಂತರ ಸಂಸ್ಕøತ ಭಾಷೆಯನ್ನು ಕಡ್ಡಾಯ ಮಾಡುತ್ತೇವೆಂದು ಒಂದಷ್ಟು ದಿನ ಪ್ರಚಾರ ಮಾಡಿದರು. ಈಗ ವೇದ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತೇವೆಂದು ಗುಲ್ಲೆಬ್ಬಿಸುತ್ತಿದ್ದಾರೆ. ಇಡೀ ಪ್ರಪಂಚವೇ ಆಧುನಿಕ, ವೈಜ್ಞಾನಿಕ ಶಿಕ್ಷಣ ಪಡೆದು ಅಭಿವೃದ್ದಿ ಪಥದಲ್ಲಿ ಮುನ್ನುಗ್ಗುತ್ತಿದ್ದರೆ ಭಾರತ ಮಾತ್ರ ಮತಾಂಧರ ಕೈಗೆ ಸಿಕ್ಕಿ ಹಿಮ್ಮುಖವಾಗಿ ಚಲಿಸುವ ದುಸ್ಥಿಗೆ ತಲುಪಿದೆ.

ಶಿಕ್ಷಣದ ಮೂಲಭೂತ ಉದ್ದೇಶ ಮಾನವೀಯವಾದ, ಪ್ರಜಾತಾಂತ್ರಿಕವಾದ, ಎಲ್ಲಾ ಜನರೂ ಸಮಾನರಾದ, ಬಹು ವೈವಿಧ್ಯತೆಯನ್ನು ಗೌರವಿಸುವ, ಸೃಜನಶೀಲತೆ, ಜ್ಞಾನ ಹಾಗೂ ನೆಮ್ಮದಿಯನ್ನು ಹೆಚ್ಚಿಸುತ್ತಾ ಹೋಗುವ ಸಮಾಜವನ್ನು ನಿರ್ಮಿಸುವುದಾಗಿದೆ. ಅದರ ಈಡೇರಿಕೆಗೆ ಎಲ್ಲಾ ಜಾತಿ ಧರ್ಮದ ಮಕ್ಕಳು ಸಹ ಒಂದೇ ಶಾಲೆಯಲ್ಲಿ ಕಲಿಯುವ ಸಮಾನ ಶಾಲಾ ವ್ಯವಸ್ಥೆಯ ಅಗತ್ಯವಿದೆ. ಆಗ ಮಾತ್ರ ಭಾರತದ ಮಕ್ಕಳು ಯಾವುದೇ ಹೇರಿಕೆ ಇಲ್ಲದೇ ಮುಕ್ತವಾಗಿ ಕಲಿಯುವ ವಾತವರಣ ನಿರ್ಮಾಣವಾಗುತ್ತದೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಲಪಂಥೀಯ ಸರ್ಕಾರದ ಅರ್ಥಹೀನ ಕ್ರಮಗಳನ್ನು ವಿರೊಧಿಸುತ್ತಲೇ ಜನಪರ ಕಲಿಕಾ ವಿಧನಕ್ಕಾಗಿ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....