Homeಮುಖಪುಟಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ

- Advertisement -
- Advertisement -

ಲವ್ ಜಿಹಾದ್ ಅನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಧರ್ಮವನ್ನು ರಾಜಕೀಯ ಸಾಧನವಾಗಿ ಬಳಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಭಾರತಿಯ ಜನತಾ ಪಾರ್ಟಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಕುರಿತು ಚರ್ಚೆಗಳಾಗುತ್ತಿವೆ. ಕರ್ನಾಟಕ, ಉತ್ತರಪ್ರದೇಶ, ಮಧ್ಯಪ್ರದೇಶ, ಹರಿಯಾಣ ರಾಜ್ಯಗಳು ಈ ಕುರಿತು ಅನೇಕ ಹೇಳಿಕೆ ನೀಡಿವೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ತಮ್ಮ ಬೆಂಬಲ ನೆಲೆಯನ್ನು ಬಲಪಡಿಸಲು ಧರ್ಮವನ್ನು ರಾಜಕೀಯ ಸಾಧನವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಳಸಿಕೊಳ್ಳುತ್ತಿದೆ ಎಂದು ನುಸ್ರತ್ ಆರೋಪಿಸಿದ್ದಾರೆ.

‘ಲವ್ ಮತ್ತು ಜಿಹಾದ್’ ಎಂಬ ಸಂಬಂಧವಿಲ್ಲದ ಎರಡು ಪ್ರತ್ಯೇಕ ವಿಷಯಗಳನ್ನು ಒಂದು ಮಾಡಿ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

“ಪ್ರೀತಿ” ಮತ್ತು “ಜಿಹಾದ್” ಎರಡು ವಿಭಿನ್ನ ವಿಷಯಗಳು, ಅವು ಎಂದಿಗೂ ಪರಸ್ಪರ ಕೈಜೋಡಿಸುವುದಿಲ್ಲ. ಯಾರು ಯಾರೊಂದಿಗೆ ಇರಬೇಕೆಂದು ಬಯಸುತ್ತಾರೆ ಎಂಬುದು ವ್ಯಕ್ತಿಯ ವೈಯಕ್ತಿಕ ಆಯ್ಕೆಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

“ಪ್ರೀತಿ ತುಂಬಾ ವೈಯಕ್ತಿಕ. ಪ್ರೀತಿ ಮತ್ತು ಜಿಹಾದ್ ಪರಸ್ಪರ ಕೈಜೋಡಿಸುವುದಿಲ್ಲ. ಬಿಜೆಪಿಗರು ಚುನಾವಣೆಗೆ ಸ್ವಲ್ಪ ದಿನ ಇರುವ ಮೊದಲು ಈ ರೀತಿಯ ವಿಷಯಗಳೊಂದಿಗೆ ಬರುತ್ತಾರೆ. ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ” ಎಂದು ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ.

ಬಂಗಾಳಿ ನಟಿ, ರಾಜಕಾರಣಿ ನುಸ್ರತ್ ಜಹಾನ್ ಉದ್ಯಮಿ ನಿಖಿಲ್ ಜೈನ್ ಎಂಬುವವರನ್ನು ವಿವಾಹವಾಗಿದ್ದಾರೆ.

ಇದಕ್ಕೂ ಮೊದಲು, ನುಸ್ರತ್ ಜಹಾನ್, ಬಂಗಾಳಿಗರ ಅತಿದೊಡ್ಡ ಹಬ್ಬವಾದ ದುರ್ಗಾ ಪೂಜೆಯ ಉತ್ಸವಗಳಲ್ಲಿ ಭಾಗವಹಿಸಿದ್ದಕ್ಕಾಗಿ ಇಸ್ಲಾಮಿಕ್ ಮೂಲಭೂತವಾದಿಗಳಿಂದ, ಇಸ್ಲಾಂ ಧರ್ಮಕ್ಕೆ ‘ಅಪಖ್ಯಾತಿ ತಂದಿದ್ದಾರೆ’ ಎಂದು ತೀವ್ರ ದಾಳಿಗೆ ಒಳಗಾಗಿದ್ದರು.

ಇತ್ತ ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಸರ್ಕಾರ ಜಾರಿಗೆ ತರಲು ಹೊರಟ ಲವ್ ಜಿಹಾದ್ ಕಾನೂನಿನ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ್ದು, ವ್ಯಕ್ತಿ ಸ್ವಾತಂತ್ಯ್ರವನ್ನು ಸರ್ಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ ಹಾಗೂ ಮತಾಂತರದ ವಿರುದ್ಧದ ಕಾನೂನು ತಪ್ಪಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.


ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...