Homeಅಂತರಾಷ್ಟ್ರೀಯಅಮೆರಿಕ: ಕೊನೆಗೂ ಅಧಿಕಾರ ಹಸ್ತಾಂತರಕ್ಕೆ ಒ‌ಪ್ಪಿಕೊಂಡ ಡೊನಾಲ್ಡ್ ಟ್ರಂಪ್!

ಅಮೆರಿಕ: ಕೊನೆಗೂ ಅಧಿಕಾರ ಹಸ್ತಾಂತರಕ್ಕೆ ಒ‌ಪ್ಪಿಕೊಂಡ ಡೊನಾಲ್ಡ್ ಟ್ರಂಪ್!

- Advertisement -
- Advertisement -

ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್‌ಗೆ ಆಡಳಿತ ಹಸ್ತಾಂತರಿಸಲು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊನೆಗೂ ಒಪ್ಪಿಕೊಂಡಿದ್ದಾರೆ. ಆದರೆ, ಅವರು ಚುನಾವಣೆಯಲ್ಲಿ ಸೋತಿದ್ದಾರೆ ಎಂದು ಔಪಚಾರಿಕವಾಗಿ ಇನ್ನೂ ಒಪ್ಪಿಕೊಂಡಿಲ್ಲ.

ಚುನಾವಣಾ ಫಲಿತಾಂಶಗಳ ಬಗ್ಗೆ ವಿರೋಧ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದರೂ, ಜೋ ಬೈಡೆನ್ ಅಧಿಕಾರಕ್ಕೇರಲು ಏನು ಮಾಡಬೇಕೋ ಅದನ್ನು ಮಾಡಲು ಸರ್ಕಾರಿ ಸಂಸ್ಥೆಯಾದ ಜನರಲ್ ಸರ್ವೀಸಸ್ ಅಡ್ಮಿನಿಸ್ಟ್ರೇಷನ್ (ಜಿಎಸ್ಎ) ಗೆ ಟ್ರಂಪ್ ಶಿಫಾರಸು ಮಾಡಿದ್ದಾರೆ. ಇದಾಗ್ಯೂ ಅವರ ತಂಡವು ಚುನಾವಣಾ ಫಲಿತಾಂಶಗಳ ವಿರುದ್ಧ ಕಾನೂನು ಹೋರಟದಲ್ಲಿ ತೊಡಗಿದೆ.

ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ಅಧಿಕಾರ ವರ್ಗಾವಣೆ ಮಾಡಲಿರುವ ಜನರಲ್ ಸರ್ವೀಸಸ್ ಅಡ್ಮಿನಿಸ್ಟ್ರೇಷನ್ ಜೋ ಬಿಡೆನ್ ಚುನಾವಣೆಯಲ್ಲಿ ಗೆದ್ದಂತೆ ಕಾಣುತ್ತದೆ ಎಂದು ಹೇಳಿದ್ದಾರಾದರೂ, ಟ್ರಂಪ್ ಅವರಿಂದ ನೇಮಕಗೊಂಡಿರುವ ಅದರ ಕಾರ್ಯನಿರ್ವಾಹಕರು ಜೋ ಬಿಡನ್ ಅವರನ್ನು ಚುನಾವಣಾ ವಿಜೇತರೆಂದು ಇನ್ನೂ ದೃಡಪಡಿಸಿಲ್ಲ.

ಜನರಲ್ ಸರ್ವೀಸಸ್ ಅಡ್ಮಿನಿಸ್ಟ್ರೇಷನ್ ಅಧ್ಯಕ್ಷರು ಅಧಿಕಾರ ವರ್ಗಾವಣೆ ಮಾಡಲು ಸೂಚನೆ ನೀಡಲಾಗಿದೆ ಮತ್ತು ಸಂಸ್ಥೆಯು ಈ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ ಎಂದು ಟ್ರಂಪ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ಅಧ್ಯಕ್ಷರಾಗಿ ಆಯ್ಕೆಯಾದ ಜೋ ಬೈಡೆನ್‌ಗೆ 6.3 ಮಿಲಿಯನ್ ಹಂಚಿಕೆ ಮಾಡಲಾಗಿದೆ ಎಂದು ಜಿಎಸ್ಎ ಕಾರ್ಯನಿರ್ವಾಹಕ ಎಮಿಲಿ ಮರ್ಫಿ ಹೇಳಿದ್ದಾರೆ. ಇತ್ತೀಚೆಗೆ ಮಿಷಿಗನ್ ರಾಜ್ಯದಲ್ಲಿ ಜೋ ಬಿಡೆನ್ ಗೆದ್ದಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಯಿತು. ಇದು ಟ್ರಂಪ್‌ಗೆ ದೊಡ್ಡ ಹೊಡೆತವಾಗಿತ್ತು.

ಈ ತಿಂಗಳ ಆರಂಭದಲ್ಲಿ ಪ್ರಾರಂಭವಾದ ಚುನಾವಣಾ ಎಣಿಕೆಯಲ್ಲಿ ಟ್ರಂಪ್ 232 ಸ್ಥಾನಗಳನ್ನು ಗಳಿಸಿದ್ದು, ಬೈಡೆನ್ ಒಟ್ಟು 306 ಸ್ಥಾನಗಳನ್ನು ಹೊಂದುವ ನಿರೀಕ್ಷೆಯಿದೆ. ಅಧ್ಯಕ್ಷ ಸ್ಥಾನವನ್ನು ಗೆಲ್ಲಲು 270 ಸ್ಥಾನಗಳು ಸಾಕಾಗುತ್ತದೆ. ರಾಷ್ಟ್ರವ್ಯಾಪಿ ಮತಗಳಲ್ಲಿ ಬೈಡೆನ್ ಟ್ರಂಪ್‌ಗಿಂತ 59 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ನಾವು ಟ್ರಂಪ್ ಹುಚ್ಚ ಎನ್ನುವುದಿಲ್ಲ; ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಒಬಾಮ ಯಾರು?- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...