Homeಅಂತರಾಷ್ಟ್ರೀಯಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ಡೆಲ್ಲಿ ಕ್ರೈಂ ವೆಬ್​ ಸೀರಿಸ್​, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆಧರಿಸಿದ ಕಥೆಯನ್ನು ಹೊಂದಿದೆ

- Advertisement -
- Advertisement -

ನೆಟ್​​ಫ್ಲಿಕ್ಸ್​ನ ’ಡೆಲ್ಲಿ ಕ್ರೈಂ’ ಭಾರತೀಯ ವೆಬ್ ಸರಣಿ 48 ನೇ ಇಂಟರ್​​ನ್ಯಾಷನಲ್ ಎಮ್ಮಿ ಅವಾರ್ಡ್​-2020ನ ಬೆಸ್ಟ್ ಡ್ರಾಮಾ ಸೀರಿಸ್ ಪ್ರಶಸ್ತಿ ಮುಡಿಗೆರಿಸಿಕೊಂಡಿದೆ. ಟಿವಿ ಶೋಗಳಿಗೆ ನೀಡಲಾಗುವ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.

ಡೆಲ್ಲಿ ಕ್ರೈಂ ವೆಬ್​ ಸೀರಿಸ್​, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆಧರಿಸಿದ ಕಥೆಯನ್ನು ಹೊಂದಿದೆ. ಶೆಫಾಲಿ ಶಾ ಪೊಲೀಸ್ ಉಪ ಆಯುಕ್ತರ ಪಾತ್ರವನ್ನು ನಿರ್ವಹಿಸಿದ್ದು, ಅಪರಾಧಿಗಳನ್ನು ಹುಡುಕುವ ರೋಚಕ ಸನ್ನಿವೇಶಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಡೆಲ್ಲಿ ಕ್ರೈಂ ನಿರ್ದೇಶಕ ರಿಚೀ ಮೆಹ್ತಾ ಈ ಪ್ರಶಸ್ತಿಯನ್ನು ’ಮಹಿಳೆಯರಿಗೆ’ ಅರ್ಪಿಸಿದ್ದಾರೆ. “ನಾನು ಈ ಪ್ರಶಸ್ತಿಯನ್ನು ಎಲ್ಲಾ ಮಹಿಳೆಯರಿಗೆ ಅರ್ಪಿಸುತ್ತೇನೆ. ಅನೇಕ ಮಹಿಳೆಯರು ಪುರುಷರು ತಮ್ಮ ಮೇಲೆ ಮಾಡುವ ದೌರ್ಜನ್ಯದ ವಿರುದ್ಧ ನಿಲ್ಲುವುದರ ಜೊತೆಗೆ, ಆ ಸಮಸ್ಯೆಯನ್ನು ಪರಿಹರಿಸುವ ಕಾರ್ಯವನ್ನು ಮಾಡುತ್ತಾರೆ. ಅಂತಿಮವಾಗಿ, ಈ ಪ್ರಶಸ್ತಿ ದಣಿವರಿಯದ ಆ ತಾಯಿ ಮತ್ತು ಅವರ ಮಗಳಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

 

ಅಂತರಾಷ್ಟ್ರೀಯ ಎಮ್ಮಿ ಪ್ರಶಸ್ತಿ ಪಡೆದ ಸಂಭ್ರಮವನ್ನು ಅನೇಕ ನಟ, ನಟಿಯರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ವೆಬ್ ಸೀರಿಸ್‌ನಲ್ಲಿ ಪೋಲೀಸ್ ಪಾತ್ರವನ್ನು ನಿರ್ವಹಿಸಿದ ಶೆಫಾಲಿ ಷಾ, ಪ್ರಶಸ್ತಿ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದು, ‘ಓ ಮೈ ಗಾಡ್’ ಎಂದು ಕೋಟ್ ಮಾಡಿದ್ದಾರೆ.

 

View this post on Instagram

 

A post shared by Shefali Shah (@shefalishahofficial)

ಶೆಫಾಲಿ ಷಾ ಪೋಸ್ಟ್‌ಗೆ ನಟ ಹೃತಿಕ್ ರೋಷನ್ ವಾವ್, ವಾವ್, ವಾವ್ ಎಂದು ಕಾಮೆಂಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಡೆಲ್ಲಿ ಕ್ರೈಂಗೆ ಎಮ್ಮಿ ಪ್ರಶಸ್ತಿ ಒಲಿದುಬಂದಿರುವುದಕ್ಕೆ ಬಾಲಿವುಡ್​ನ ಅನೇಕ ತಾರೆಯರು ಹರ್ಷ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಭಾರತವು ಅತ್ಯುತ್ತಮ ನಟ ವಿಭಾಗದಲ್ಲಿ ಮೇಡ್ ಇನ್ ಹೆವನ್ ನಟ ಅರ್ಜುನ್ ಮಾಥುರ್ ಮತ್ತು ಅತ್ಯುತ್ತಮ ಕಾಮಿಡಿ ಸೀರೀಸ್​ ವಿಭಾಗದಲ್ಲಿ ಅಮೇಜಾನ್​ ಪ್ರೈಂನ ಫೋರ್​ ಮೋರ್ ಶಾಟ್ಸ್​ ಪ್ಲೀಸ್​ ವೆಬ್ ಸೀರಿಸ್  ನಾಮನಿರ್ದೇಶನ ಮಾಡಲಾಗಿತ್ತು.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ನ್ಯೂಯಾರ್ಕ್ ನಗರದ ಖಾಲಿ ರಂಗಮಂದಿರದಿಂದ ನಟ ರಿಚರ್ಡ್ ಕೈಂಡ್ ಈ ಅಂತರಾಷ್ಟ್ರೀಯ ಎಮ್ಮಿ ಪ್ರಶಸ್ತಿ ಕಾರ್ಯಕ್ರಮ ನಡೆಸಿಕೊಟ್ಟರು.


ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...