Homeಅಂತರಾಷ್ಟ್ರೀಯಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ಡೆಲ್ಲಿ ಕ್ರೈಂ ವೆಬ್​ ಸೀರಿಸ್​, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆಧರಿಸಿದ ಕಥೆಯನ್ನು ಹೊಂದಿದೆ

- Advertisement -
- Advertisement -

ನೆಟ್​​ಫ್ಲಿಕ್ಸ್​ನ ’ಡೆಲ್ಲಿ ಕ್ರೈಂ’ ಭಾರತೀಯ ವೆಬ್ ಸರಣಿ 48 ನೇ ಇಂಟರ್​​ನ್ಯಾಷನಲ್ ಎಮ್ಮಿ ಅವಾರ್ಡ್​-2020ನ ಬೆಸ್ಟ್ ಡ್ರಾಮಾ ಸೀರಿಸ್ ಪ್ರಶಸ್ತಿ ಮುಡಿಗೆರಿಸಿಕೊಂಡಿದೆ. ಟಿವಿ ಶೋಗಳಿಗೆ ನೀಡಲಾಗುವ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.

ಡೆಲ್ಲಿ ಕ್ರೈಂ ವೆಬ್​ ಸೀರಿಸ್​, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆಧರಿಸಿದ ಕಥೆಯನ್ನು ಹೊಂದಿದೆ. ಶೆಫಾಲಿ ಶಾ ಪೊಲೀಸ್ ಉಪ ಆಯುಕ್ತರ ಪಾತ್ರವನ್ನು ನಿರ್ವಹಿಸಿದ್ದು, ಅಪರಾಧಿಗಳನ್ನು ಹುಡುಕುವ ರೋಚಕ ಸನ್ನಿವೇಶಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಡೆಲ್ಲಿ ಕ್ರೈಂ ನಿರ್ದೇಶಕ ರಿಚೀ ಮೆಹ್ತಾ ಈ ಪ್ರಶಸ್ತಿಯನ್ನು ’ಮಹಿಳೆಯರಿಗೆ’ ಅರ್ಪಿಸಿದ್ದಾರೆ. “ನಾನು ಈ ಪ್ರಶಸ್ತಿಯನ್ನು ಎಲ್ಲಾ ಮಹಿಳೆಯರಿಗೆ ಅರ್ಪಿಸುತ್ತೇನೆ. ಅನೇಕ ಮಹಿಳೆಯರು ಪುರುಷರು ತಮ್ಮ ಮೇಲೆ ಮಾಡುವ ದೌರ್ಜನ್ಯದ ವಿರುದ್ಧ ನಿಲ್ಲುವುದರ ಜೊತೆಗೆ, ಆ ಸಮಸ್ಯೆಯನ್ನು ಪರಿಹರಿಸುವ ಕಾರ್ಯವನ್ನು ಮಾಡುತ್ತಾರೆ. ಅಂತಿಮವಾಗಿ, ಈ ಪ್ರಶಸ್ತಿ ದಣಿವರಿಯದ ಆ ತಾಯಿ ಮತ್ತು ಅವರ ಮಗಳಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

 

ಅಂತರಾಷ್ಟ್ರೀಯ ಎಮ್ಮಿ ಪ್ರಶಸ್ತಿ ಪಡೆದ ಸಂಭ್ರಮವನ್ನು ಅನೇಕ ನಟ, ನಟಿಯರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ವೆಬ್ ಸೀರಿಸ್‌ನಲ್ಲಿ ಪೋಲೀಸ್ ಪಾತ್ರವನ್ನು ನಿರ್ವಹಿಸಿದ ಶೆಫಾಲಿ ಷಾ, ಪ್ರಶಸ್ತಿ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದು, ‘ಓ ಮೈ ಗಾಡ್’ ಎಂದು ಕೋಟ್ ಮಾಡಿದ್ದಾರೆ.

 

View this post on Instagram

 

A post shared by Shefali Shah (@shefalishahofficial)

ಶೆಫಾಲಿ ಷಾ ಪೋಸ್ಟ್‌ಗೆ ನಟ ಹೃತಿಕ್ ರೋಷನ್ ವಾವ್, ವಾವ್, ವಾವ್ ಎಂದು ಕಾಮೆಂಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಡೆಲ್ಲಿ ಕ್ರೈಂಗೆ ಎಮ್ಮಿ ಪ್ರಶಸ್ತಿ ಒಲಿದುಬಂದಿರುವುದಕ್ಕೆ ಬಾಲಿವುಡ್​ನ ಅನೇಕ ತಾರೆಯರು ಹರ್ಷ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಭಾರತವು ಅತ್ಯುತ್ತಮ ನಟ ವಿಭಾಗದಲ್ಲಿ ಮೇಡ್ ಇನ್ ಹೆವನ್ ನಟ ಅರ್ಜುನ್ ಮಾಥುರ್ ಮತ್ತು ಅತ್ಯುತ್ತಮ ಕಾಮಿಡಿ ಸೀರೀಸ್​ ವಿಭಾಗದಲ್ಲಿ ಅಮೇಜಾನ್​ ಪ್ರೈಂನ ಫೋರ್​ ಮೋರ್ ಶಾಟ್ಸ್​ ಪ್ಲೀಸ್​ ವೆಬ್ ಸೀರಿಸ್  ನಾಮನಿರ್ದೇಶನ ಮಾಡಲಾಗಿತ್ತು.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ನ್ಯೂಯಾರ್ಕ್ ನಗರದ ಖಾಲಿ ರಂಗಮಂದಿರದಿಂದ ನಟ ರಿಚರ್ಡ್ ಕೈಂಡ್ ಈ ಅಂತರಾಷ್ಟ್ರೀಯ ಎಮ್ಮಿ ಪ್ರಶಸ್ತಿ ಕಾರ್ಯಕ್ರಮ ನಡೆಸಿಕೊಟ್ಟರು.


ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...