Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...