Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...