Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...