Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...