Homeಮುಖಪುಟವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಬಿಎಸ್‌ಎಫ್ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂ ಕೋರ್ಟ್‌ ಮೋರೆ ಹೋಗಿದ್ದರು.

- Advertisement -
- Advertisement -

2019 ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಬಿಎಸ್‌ಎಫ್ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂ ಕೋರ್ಟ್‌ ಮೋರೆ ಹೋಗಿದ್ದರು. ಅಲ್ಲಿಯೂ ಇವರ ಮನವಿಯ ಅರ್ಜಿಯನ್ನು ತಿರಸ್ಕರಿಸಿಲಾಗಿದೆ.

ಈ ಪ್ರಕರಣದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಇದನ್ನೂ ಓದಿ: ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ತೇಜ್ ಬಹದ್ದೂರ್ ಅವರ ನಾಮಪತ್ರಗಳನ್ನು ಕಳೆದ ವರ್ಷ ಮೇ 1 ರಂದು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದರು.

ಇದನ್ನೂ ಓದಿ: ತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

ಸೇನೆಯಲ್ಲಿ ಆಹಾರ ಸರಿಯಾಗಿ ಒದಗಿಸುತ್ತಿಲ್ಲ ಎಂಬ ಕಾರಣಕ್ಕೆ ವೀಡಿಯೋ ಮಾಡಿದ್ದ ತೇಜ್ ಬಹದ್ದೂರ್ ಅವರನ್ನು 2017 ರಲ್ಲಿ ಸೇನೆಯಿಂದ ವಜಾಗೊಳಿಸಲಾಗಿತ್ತು. ನಂತರ ಅವರು ನರೇಂದ್ರ ಮೋದಿಯವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಚುನಾವಣಾ ಅಧಿಕಾರಿಗಳು ಇವರ ನಾಮಪತ್ರವನ್ನು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ನಾಮಪತ್ರ ತಿರಸ್ಕಾರದ ನಿರ್ಧಾರವನ್ನು ಎತ್ತಿಹಿಡಿಯಲಾಗಿತ್ತು.

ಇದನ್ನೂ ಓದಿ: Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

ಅರ್ಜಿದಾರರು ಈ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು ನಂತರ ಎಸ್‌ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು ಎಂದು ಬಹದ್ದೂರ್ ಪರ ವಕೀಲರು ಉನ್ನತ ನ್ಯಾಯಾಲಯದ ಮುಂದೆ ವಾದಿಸಿದ್ದರು.

ಇದನ್ನೂ ಓದಿ: ಮೋದಿ ವಿರುದ್ಧ ಸ್ಪರ್ಧಿಸಲು ತೇಜ್ ಬಹದ್ದೂರ್ ಯಾದವ್‍ಗೆ ಟಿಕೆಟ್ ನೀಡಿದ ಸಮಾಜವಾದಿ ಪಕ್ಷ

ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ ವಕೀಲರು, “ಬಹದ್ದೂರ್ ಅವರ ನಾಮಪತ್ರವನ್ನು ಬಾಹ್ಯ ಕಾರಣಗಳಿಗಾಗಿ ತಿರಸ್ಕರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ನಾಮಪತ್ರವನ್ನು ತಿರಸ್ಕರಿಸಿದ ಚುನಾವಣಾ ಅಧಿಕಾರಿಗಳು, “ತೇಜ್ ಬಹದ್ದೂರ್ ಅವರನ್ನು ಭ್ರಷ್ಟಾಚಾರ/ರಾಜ್ಯ ದ್ರೋಹ ಎಸಗಿದ್ದಕ್ಕಾಗಿ ವಜಾಗೊಳಿಸಿಲ್ಲ ಎಂದು ನೀಡುವ ಪ್ರಮಾಣ ಪತ್ರವನ್ನು ನಾಮಪತ್ರದೊಟ್ಟಿಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರಲಿಲ್ಲ” ಎಂದು ಹೇಳಿದ್ದರು.


ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...