Homeಮುಖಪುಟಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ದನಿಯೆತ್ತುತ್ತೇವೆ: ವರದರಾಜೇಂದ್ರ

ಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ದನಿಯೆತ್ತುತ್ತೇವೆ: ವರದರಾಜೇಂದ್ರ

ಮೋದಿ ಸರ್ಕಾರದ ಕೈಗಾರಿಕಾ ಸಂಬಂಧಗಳ ಸಂಹಿತೆಯು ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಇದರಲ್ಲಿ ಮುಷ್ಕರದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಶಿಕ್ಷೆ ಮತ್ತು 50000 ರೂಗಳ ದಂಡ ವಿಧಿಸಬಹುದಾಗಿದೆ.

- Advertisement -
- Advertisement -

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸುವ, ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ ತಿದ್ದುಪಡಿಗಳನ್ನು ತರುತ್ತಿರುವ ಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ನವೆಂಬರ್ 26-27 ರಂದು ದನಿಯೆತ್ತುತ್ತೇವೆ ಎಂದು ಕರ್ನಾಟಕ ಶ್ರಮಿಕ ಶಕ್ತಿಯ ರಾಜ್ಯ ಸಂಚಾಲಕರಾದ ವರದರಾಜೇಂದ್ರ ತಿಳಿಸಿದ್ದಾರೆ.

ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರವು ಕಾರ್ಮಿಕರ ಪರವಾಗಿದ್ದ 44 ಕಾನೂನುಗಳನ್ನು ಕ್ರೋಢಿಕರಿಸಿ ನಾಲ್ಕೂ ಕೋಡ್‌ಗಳಾಗಿ ಮಾಡುತ್ತಿದೆ. ಇವು ಮಾಲೀಕರ ಪರವಾಗಿದ್ದು ಕಾರ್ಮಿಕರ ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ, ಮತ್ತು ಸಂಬಳ ಭದ್ರತೆಯನ್ನು ಇವು ಕಸಿದುಕೊಂಡು ಅನಿರ್ಧಿಷ್ಟ ಅವಧಿಯ ಕೆಲಸಕ್ಕೆ ಅನುಮತಿ ನೀಡುತ್ತಿದೆ” ಎಂದು ಕಿಡಿಕಾರಿದರು.

ವೇತನ ಕೋಡ್ ಎಂಬ ಸಂಹಿತೆಯು ಕಾರ್ಮಿಕರ ವೇತನದ ಖಾತ್ರಿ ಮತ್ತು ಕನಿಷ್ಟ ವೇತನ ಜಾರಿ ಮಾಡುವ ಮಾಲೀಕರ ಜವಾಬ್ದಾರಿಯಿಂದ ತೆಗೆದು, ಬೇಕಾಬಿಟ್ಟಿ ನಡೆಸಿಕೊಳ್ಳಲು ಅವಕಾಶ ನೀಡುತ್ತದೆ. ಸಾಮಾಜಿಕ ಭದ್ರತೆ ಕೋಡ್ ಈಗ ಕಾರ್ಮಿಕರಿಗೆ ಇರುವ ಸಾಮಾಜಿಕ ಭದ್ರತೆಗಳಾದ ಇಎಸ್‌ಐ, ಪಿ.ಎಫ್ ಮತ್ತು ಗ್ರಾಚುಟಿ ಪಾವತಿಸುವ ಮಾಲೀಕರ ಜವಾಬ್ದಾರಿಯನ್ನು ಕಿತ್ತುಹಾಕಿದೆ ಎಂದು ವರದರಾಜೇಂದ್ರ ಹೇಳಿದ್ದಾರೆ.

ಕೈಗಾರಿಕಾ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥತಿಗಳ ಸಂಹಿತೆ ಹೆಸರಿನಲ್ಲಿ ಹಾಲಿ 100 ಕಾರ್ಮಿಕರು ಇರುವ ಕಾರ್ಖಾನೆಯನ್ನು ಮುಚ್ಚಲು ಸರ್ಕಾರದ ಅನುಮತಿ ಬೇಕಿತ್ತು. ಆದರೆ ಈಗ 300ಗಿಂತ ಕಡಿಮೆ ಕಾರ್ಮಿಕರು ಇರುವ ಕಾರ್ಖಾನೆಯನ್ನು ಮುಚ್ಚಲು ಸರ್ಕಾರದ ಅನುಮತಿ ಅಗತ್ಯವಿರುವುದಿಲ್ಲ ಮತ್ತು ಪ್ರಧಾನ ಉದ್ಯೋಗದಾತರಿಗೆ ಗುತ್ತಿಗೆ ಕಾರ್ಮಿಕರ ಕುರಿತು ಯಾವುದೇ ಜವಾಬ್ದಾರಿ ಇರುವುದಿಲ್ಲ ಎಂಬ ತಿದ್ದುಪಡಿ ತರಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮೋದಿ ಸರ್ಕಾರದ ಕೈಗಾರಿಕಾ ಸಂಬಂಧಗಳ ಸಂಹಿತೆಯು ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಇದರಲ್ಲಿ ಮುಷ್ಕರದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಶಿಕ್ಷೆ ಮತ್ತು 50000 ರೂಗಳ ದಂಡ ವಿಧಿಸಬಹುದಾಗಿದೆ. ಕಾರ್ಮಿಕರಲ್ಲದ ವ್ಯಕ್ತಿಯು ಕಾರ್ಮಿಕ ಸಂಘದ ಪದಾಧಿಕಾರಿಯಾಗುವುದನ್ನು ನಿಷೇದಿಸುತ್ತದೆ. ಶತಮಾನಗಳ ಹೋರಾಟದಿಂದ ಕಾರ್ಮಿಕರು 8 ಗಂಟೆಗಳ ಕೆಲಸದ ಅವಧಿ ಹಕ್ಕು ಪಡೆದಿದ್ದುದ್ದನ್ನು ಮೋದಿ ಸರ್ಕಾರ ಒಂದೇ ಏಟಿನಲ್ಲಿ ಮುಗಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹಾಗಾಗಿ ತಿದ್ದುಪಡಿಯ ಮೂಲಕ ತರಲು ಹೊರಟಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಈ ಕೂಡಲೇ ಹಿಂಪಡೆಯಬೇಕು. ಸರ್ಕಾರಿ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಕೈಬಿಟ್ಟು ಬಲಪಡಿಸಲು ಕ್ರಮವಹಿಸಬೇಕು. ಎಲ್ಲಾ ರೀತಿಯ ಗುತ್ತಿಗೆ ಕಾರ್ಮಿಕ ಪದ್ದತಿಯನ್ನು ನಿಷೇದಿಸಬೇಕು. ರೈತ ವಿರೋಧಿಯಾಗಿರುವ ಕೃಷಿ ಮಸೂದೆಗಳನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್ 26-27 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಮ್ಮ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ಜನಶಕ್ತಿಯ ಪದಾಧಿಕಾರಿಗಳಾದ ಪೂರ್ಣಿಮಾ, ಸಿದ್ದರಾಜು, ಪುಟ್ಟಸ್ವಾಮಿ, ಈಶ್ವರಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...