Homeಮುಖಪುಟ'ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ' - ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ

- Advertisement -
- Advertisement -

ಕೊರೊನ ಸೋಂಕಿನಿಂದ ಮಕ್ಕಳನ್ನು ದೂರವಿಡಲು ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಹಲವು ತಿಂಗಳುಗಳಿಂದಲೂ ಎಲ್ಲಾ ಹಂತದ ಮಕ್ಕಳಿಗೂ ಆನ್‌ಲೈನ್‌ನಲ್ಲಿ ಪಾಠ ಪ್ರವಚನ ಮಾಡಲಾಗುತ್ತಿದೆ. ಇದು ಪರಿಣಾಮಕಾರಿಯಾಗಿ ಮಕ್ಕಳಿಗೆ ತಲುಪುತ್ತಿದೆಯೇ? ಆನ್‌ಲೈನ್‌ ಪಾಠವನ್ನು ಮಕ್ಕಳು ಗ್ರಹಿಸುತ್ತಿದ್ದಾರೆಯೇ ಎಂಬ ಗೊಂದಲಕ್ಕೆ ಸರ್ಕಾರ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ನೇರ ಕಲಿಕೆಯ ಮಕ್ಕಳಿಗೇ ಪಾಠ ಅರ್ಥವಾಗುವುದಿಲ್ಲ. ಇನ್ನು ಆನ್‌ಲೈನ್‌ ಶಿಕ್ಷಣ ಹೇಗೆ ಅರ್ಥವಾದೀತು! ಹಾಗಾಗಿಯೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಇಒ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಹಲವು ಮನವಿಗಳನ್ನು ಸಲ್ಲಿಸಿ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಆಗ್ರಹಿಸಿವೆ.

ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಹಂತದವರೆಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳು ಭಾಗಿಯಾದರೂ ಅವರ ಗೊಂದಲಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಆನ್‌ಲೈನ್‌ನಲ್ಲಿ ಪಾಠ ಹೇಗೆ ಮಾಡಬೇಕೆಂಬ ಬಗ್ಗೆ ತರಬೇತಿ ಪಡೆದಿಲ್ಲ. ಹಾಗಾಗಿ ಮಕ್ಕಳಿಗೆ ವಿಷಯ ಅರ್ಥ ಮಾಡಿಸುವುದು ಕಷ್ಟವೇ ಆಗಿದೆ.  ಶಿಕ್ಷಕ ವರ್ಗವೂ ಇದನ್ನು ಅಲ್ಲಗೆಳೆಯುತ್ತಿಲ್ಲ. ವಿದ್ಯಾರ್ಥಿಗಳಿಂದ “ಪಾಠ ಅರ್ಥವಾಗುತ್ತಿಲ್ಲ, ನಮಗೆ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತಿಲ್ಲ, ಹೆಚ್ಚು ಹೊತ್ತು ಕೇಳಲು ಆಗುತ್ತಿಲ್ಲ” ಎನ್ನುವ ದೂರು ಸಾಮಾನ್ಯ.

ಇದನ್ನೂ ಓದಿ: ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಆನ್‌ಲೈನ್‌ ಶಿಕ್ಷಣ ನೀಡಬೇಕೇ ಅಥವಾ ಆಫ್‌ಲೈನ್ ಶಿಕ್ಷಣ ಕೊಡಬೇಕೇ ಎಂಬ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ. ಆ ಗೊಂದಲವನ್ನು ಮಕ್ಕಳ ಮೇಲೆ ಮತ್ತು ಶಿಕ್ಷಕ ವೃಂದದ ಮೇಲೆಯೂ ವರ್ಗಾಯಿಸಿದೆ. ಆದ್ದರಿಂದ ಗೊಂದಲದ ಸನ್ನಿವೇಶವೇ ಮುಂದುವರಿದಿದೆ. ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಿಬ್ಬರೂ ಕೂಡ ಸ್ಪಷ್ಟ ತೀರ್ಮಾನಗಳನ್ನು ಕೈಗೊಳ್ಳಲು ಇದುವರೆಗೆ ಸಾಧ್ಯವಾಗಿಲ್ಲ. ದೊಡ್ಡದೊಡ್ಡ ಶಿಕ್ಷಣ ಸಂಸ್ಥೆಗಳ ಮಾಲಿಕರು ಮನೆಪಾಠವನ್ನು ಬೆಂಬಲಿಸುವ ಶಿಕ್ಷಣ ತಜ್ಞರಿಂದ ಸಲಹೆಗಳನ್ನು ಕೇಳುತ್ತಿದ್ದು, ಬಹುತ್ವವನ್ನು ಪ್ರತಿಪಾದಿಸುವ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳನ್ನು ನಿರ್ಲಕ್ಷಿಸಿರುವುದೇ ಈ ಗೊಂದಲಕ್ಕೆ ಕಾರಣ ಎನ್ನಲಾಗುತ್ತಿದೆ.

ಗೊಂದಲ ಸನ್ನಿವೇಶವನ್ನೇ ಬಂಡವಾಳ ಮಾಡಿಕೊಂಡಿರುವ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮಕ್ಕಳಿಂದ ಮೊದಲ ಕಂತಿನ ಹಣವನ್ನು ಕಟ್ಟಿಸಿಕೊಂಡಿವೆ. ಈಗ ಎರಡನೇ ಕಂತಿನ ಹಣವನ್ನು ನೀಡುವಂತೆ ಮಕ್ಕಳ ಪೋಷಕರ ಮೇಲೆ ಒತ್ತಡ ಹೇರುತ್ತಿವೆ. ಎರಡನೇ ಕಂತಿನ ಹಣ ನೀಡಿಲ್ಲದ ಮಕ್ಕಳಿಗೆ (ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಂತದ) ಆನ್‌ಲೈನ್‌ ಪಾಠದ ವಿಡಿಯೋಗಳನ್ನು ಹಾಕುವುದನ್ನು ನಿಲ್ಲಿಸಿದೆ. “ಹಣ ಕಟ್ಟಿ, ಪಾಠದ ವಿಡಿಯೋಗಳನ್ನು ಹಾಕುತ್ತೇವೆ” ಎಂದು ಮುಖ್ಯಶಿಕ್ಷಕರು ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಮೆಸೇಜ್ ಹಾಕಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪವೂ ವ್ಯಾಪಕವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರ ಮೇಲೆ ಶುಲ್ಕದ ಹಣಕ್ಕಾಗಿ ಒತ್ತಡ ಹೇರುತ್ತಿದ್ದರೆ, ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಶಿಕ್ಷಣವನ್ನೇ ನಿಲ್ಲಿಸಿಬಿಡುವಂತೆ ಬಿಇಒ ಮತ್ತು ಡಿಡಿಪಿಐಗಳನ್ನು ಆಗ್ರಹಿಸಿವೆ. ಆನ್‌ಲೈನ್‌ ಶಿಕ್ಷಣ ಮಕ್ಕಳಿಗೆ ಅರ್ಥವಾಗುವುದಿಲ್ಲ. ಹಾಗಾಗಿ ಅದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ. ಫಲಿತಾಂಶದಲ್ಲಿ ಕಡಿಮೆಯಾದರೆ ಯಾರು ಹೊಣೆ? ಕಡಿಮೆ ಫಲಿತಾಂಶ ಬಂದರೆ ಅಂತಹ ಶಾಲೆಗಳನ್ನು ಮುಚ್ಚುವ ಭೀತಿಯೂ ಇದೆ.

ಕೋವಿಡ್ ಅವಧಿಯಲ್ಲಿ ಆನ್‌ಲೈನ್‌ ಶಿಕ್ಷಣ ಪಡೆಯುವ ಮಕ್ಕಳು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕಡಿಮೆ ಅಂಕಗಳನ್ನು ಪಡೆಯುವ ಸಾಧ್ಯತೆ ಇದೆ. ಪಿಯುಸಿ ನಂತರದ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ಕೋರ್ಸ್‌ಗಳಿಗೆ ಹೋಗಲು ತಡೆದಂತೆ ಆಗುತ್ತದೆ. ಕಡಿಮೆ ಅಂಕ ಗಳಿಸಿದವರ ಮುಂದಿನ ಭವಿಷ್ಯ ಮಂಕಾಗಲಿದೆ. ವಿದ್ಯಾರ್ಥಿಗೆ ಮುಂದಿನ ಆಯ್ಕೆ ಇಲ್ಲದಂತಾಗಿ ಶಿಕ್ಷಣವನ್ನು ಮೊಟುಕುಗೊಳಿಸಬೇಕಾದಂತಹ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಕೇವಲ ಪ್ರತಿಷ್ಠಗಾಗಿ ಆನ್‌ಲೈನ್‌ ಶಿಕ್ಷಣದ ಮೂಲಕ ಪಾಠ ಮಾಡಿದರೆ ಅದು ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿದಂತೆಯೇ ಆಗುತ್ತದೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಶಿಕ್ಷಣ ಅಧಿಕಾರಿಗಳಿಗೆ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ ಹನುಮಂತರಾಯಪ್ಪ.

ಇದನ್ನೂ ಓದಿ: ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಮಾತು ದೂರವೇ ಉಳಿದಿದೆ. ನೆಟ್‌ವರ್ಕ್ ಮತ್ತು ಸಿಗ್ನಲ್ ಸಿಗದೇ ಇರುವ ಸಮಸ್ಯೆಯಿಂದ ಪಾಠ ಕೇಳಲು ಆಗುವುದಿಲ್ಲ. ನಗರ ಪ್ರದೇಶದ ಕೆಲವೇ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅನುಕೂಲವಾಗಬಹುದು. ಆದರೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವ ಮಂದಿ ಕಡಿಮೆ. ಗ್ರಾಮೀಣ ಬಡ ವಿದ್ಯಾರ್ಥಿಗಳು ನೇರ ತರಗತಿಗಳಿಗೆ ಬರಬೇಕೆಂದರೆ ಬಸ್ ವ್ಯವಸ್ಥೆಯೂ ಇಲ್ಲ. ಇದು ಆ ವಿದ್ಯಾರ್ಥಿಗಳು ಉಭಯ ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಆನ್‌ಲೈನ್‌ ವ್ಯವಸ್ಥೆ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಭ್ಯವಾದರೆ ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳು ಶಿಕ್ಷಣದಿಂದ ದೂರವೇ ಉಳಿಯುವಂತೆ ಮಾಡಿದೆ.

ಸರ್ಕಾರಿ ಶಾಲಾ ಕಾಲೇಜುಗಳ ಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಬಹುತೇಕ ಮಕ್ಕಳು ಬಡ-ಮಧ್ಯಮ ವರ್ಗದ ಕುಟುಂಬದವರಾಗಿದ್ದು 4ಜಿ ಯಂತಹ ಮೊಬೈಲ್ ಖರೀದಿ ಮಾಡಲು ಶಕ್ತವಾಗಿಲ್ಲ. ಮೊಬೈಲ್ ಇದ್ದವರು ನೆಟ್‌ವೆರ್ಕ್ ಸಿಗದೆ ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಒಂದು ಕಡೆಯಾದರೆ ಮಧ್ಯಮ ವರ್ಗದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಸಹಾಯಕತೆಯಿಂದ ಏನೂ ತೋಚದಂತಹ ಸ್ಥಿತಿಗೆ ತಲುಪಿವೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕೆಯ ನಡುವೆ ಭಾರೀ ಕಂದಕ ನಿರ್ಮಾಣವಾಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಜ್ಞಾನಿಕ ಶಿಕ್ಷಣ ನೀಡುವತ್ತ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಆನ್ಲೈನ್ ಶಿಕ್ಷಣವನ್ನು ನಿಲ್ಲಿಸಿ…!!!
    ಈ ಆನ್ಲೈನ್ ತರಗತಿಯಿಂದಾಗಿ ಅನೇಕ ಮಕ್ಕಳು ದುರಭ್ಯಾಸ ಗಳಿಗೆ ಬಲಿಯಾಗುತ್ತಿದ್ದಾರೆ.! ಹಾಗೂ ಆನ್ಲೈನ್ ನಲ್ಲಿ ಪಾಠ ಕೇಳುವುದಕ್ಕಿಂತ ಅನ್ಯರ ಜೊತೆಗೆ ಚಾಟಿಂಗ್ ಮಾಡುವುದೇ ಹೆಚ್ಚು…!
    ಆನ್ಲೈನ್ ಶಿಕ್ಷಣ ವ್ಯವಸ್ಥೆ ಯಿಂದಾಗಿ ಮಕ್ಕಳು ಹಾಳಾಗುತ್ತಿದ್ದಾರೆ, ಆನ್ಲೈನ್ ಶಿಕ್ಷಣ ದಿಂದ ಯಾವುದೇ ಪ್ರಯೋಜನ ಇಲ್ಲ, ನಿಜವಾಗಿಯೂ ನಮ್ಮ ರಾಜ್ಯದ ಈಗಿನ ಶಿಕ್ಷಣ ನೀತಿಯೇ ಮಕ್ಕಳನ್ನು ಹಾಳು ಮಾಡುತ್ತಿದೆ…!!!
    (ಆನ್ಲೈನ್ ಶಿಕ್ಷಣ ಸರಿ ಅನಿಸುವುದೇ ಆದರೆ ನನ್ನ ನಂಬರ್ ಗೆ ಕರೆ ಮಾಡಿ 8496092478)
    :- ಅನಿಲ್ ಕುಮಾರ್,
    ಹಂಗಳ ಗ್ರಾಮ, ಗುಂಡ್ಲುಪೇಟೆ ತಾಲೂಕು

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...