Homeಮುಖಪುಟ'ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ' - ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ

- Advertisement -
- Advertisement -

ಕೊರೊನ ಸೋಂಕಿನಿಂದ ಮಕ್ಕಳನ್ನು ದೂರವಿಡಲು ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಹಲವು ತಿಂಗಳುಗಳಿಂದಲೂ ಎಲ್ಲಾ ಹಂತದ ಮಕ್ಕಳಿಗೂ ಆನ್‌ಲೈನ್‌ನಲ್ಲಿ ಪಾಠ ಪ್ರವಚನ ಮಾಡಲಾಗುತ್ತಿದೆ. ಇದು ಪರಿಣಾಮಕಾರಿಯಾಗಿ ಮಕ್ಕಳಿಗೆ ತಲುಪುತ್ತಿದೆಯೇ? ಆನ್‌ಲೈನ್‌ ಪಾಠವನ್ನು ಮಕ್ಕಳು ಗ್ರಹಿಸುತ್ತಿದ್ದಾರೆಯೇ ಎಂಬ ಗೊಂದಲಕ್ಕೆ ಸರ್ಕಾರ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ನೇರ ಕಲಿಕೆಯ ಮಕ್ಕಳಿಗೇ ಪಾಠ ಅರ್ಥವಾಗುವುದಿಲ್ಲ. ಇನ್ನು ಆನ್‌ಲೈನ್‌ ಶಿಕ್ಷಣ ಹೇಗೆ ಅರ್ಥವಾದೀತು! ಹಾಗಾಗಿಯೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಇಒ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಹಲವು ಮನವಿಗಳನ್ನು ಸಲ್ಲಿಸಿ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಆಗ್ರಹಿಸಿವೆ.

ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಹಂತದವರೆಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳು ಭಾಗಿಯಾದರೂ ಅವರ ಗೊಂದಲಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಆನ್‌ಲೈನ್‌ನಲ್ಲಿ ಪಾಠ ಹೇಗೆ ಮಾಡಬೇಕೆಂಬ ಬಗ್ಗೆ ತರಬೇತಿ ಪಡೆದಿಲ್ಲ. ಹಾಗಾಗಿ ಮಕ್ಕಳಿಗೆ ವಿಷಯ ಅರ್ಥ ಮಾಡಿಸುವುದು ಕಷ್ಟವೇ ಆಗಿದೆ.  ಶಿಕ್ಷಕ ವರ್ಗವೂ ಇದನ್ನು ಅಲ್ಲಗೆಳೆಯುತ್ತಿಲ್ಲ. ವಿದ್ಯಾರ್ಥಿಗಳಿಂದ “ಪಾಠ ಅರ್ಥವಾಗುತ್ತಿಲ್ಲ, ನಮಗೆ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತಿಲ್ಲ, ಹೆಚ್ಚು ಹೊತ್ತು ಕೇಳಲು ಆಗುತ್ತಿಲ್ಲ” ಎನ್ನುವ ದೂರು ಸಾಮಾನ್ಯ.

ಇದನ್ನೂ ಓದಿ: ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಆನ್‌ಲೈನ್‌ ಶಿಕ್ಷಣ ನೀಡಬೇಕೇ ಅಥವಾ ಆಫ್‌ಲೈನ್ ಶಿಕ್ಷಣ ಕೊಡಬೇಕೇ ಎಂಬ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ. ಆ ಗೊಂದಲವನ್ನು ಮಕ್ಕಳ ಮೇಲೆ ಮತ್ತು ಶಿಕ್ಷಕ ವೃಂದದ ಮೇಲೆಯೂ ವರ್ಗಾಯಿಸಿದೆ. ಆದ್ದರಿಂದ ಗೊಂದಲದ ಸನ್ನಿವೇಶವೇ ಮುಂದುವರಿದಿದೆ. ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಿಬ್ಬರೂ ಕೂಡ ಸ್ಪಷ್ಟ ತೀರ್ಮಾನಗಳನ್ನು ಕೈಗೊಳ್ಳಲು ಇದುವರೆಗೆ ಸಾಧ್ಯವಾಗಿಲ್ಲ. ದೊಡ್ಡದೊಡ್ಡ ಶಿಕ್ಷಣ ಸಂಸ್ಥೆಗಳ ಮಾಲಿಕರು ಮನೆಪಾಠವನ್ನು ಬೆಂಬಲಿಸುವ ಶಿಕ್ಷಣ ತಜ್ಞರಿಂದ ಸಲಹೆಗಳನ್ನು ಕೇಳುತ್ತಿದ್ದು, ಬಹುತ್ವವನ್ನು ಪ್ರತಿಪಾದಿಸುವ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳನ್ನು ನಿರ್ಲಕ್ಷಿಸಿರುವುದೇ ಈ ಗೊಂದಲಕ್ಕೆ ಕಾರಣ ಎನ್ನಲಾಗುತ್ತಿದೆ.

ಗೊಂದಲ ಸನ್ನಿವೇಶವನ್ನೇ ಬಂಡವಾಳ ಮಾಡಿಕೊಂಡಿರುವ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮಕ್ಕಳಿಂದ ಮೊದಲ ಕಂತಿನ ಹಣವನ್ನು ಕಟ್ಟಿಸಿಕೊಂಡಿವೆ. ಈಗ ಎರಡನೇ ಕಂತಿನ ಹಣವನ್ನು ನೀಡುವಂತೆ ಮಕ್ಕಳ ಪೋಷಕರ ಮೇಲೆ ಒತ್ತಡ ಹೇರುತ್ತಿವೆ. ಎರಡನೇ ಕಂತಿನ ಹಣ ನೀಡಿಲ್ಲದ ಮಕ್ಕಳಿಗೆ (ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಂತದ) ಆನ್‌ಲೈನ್‌ ಪಾಠದ ವಿಡಿಯೋಗಳನ್ನು ಹಾಕುವುದನ್ನು ನಿಲ್ಲಿಸಿದೆ. “ಹಣ ಕಟ್ಟಿ, ಪಾಠದ ವಿಡಿಯೋಗಳನ್ನು ಹಾಕುತ್ತೇವೆ” ಎಂದು ಮುಖ್ಯಶಿಕ್ಷಕರು ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಮೆಸೇಜ್ ಹಾಕಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪವೂ ವ್ಯಾಪಕವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರ ಮೇಲೆ ಶುಲ್ಕದ ಹಣಕ್ಕಾಗಿ ಒತ್ತಡ ಹೇರುತ್ತಿದ್ದರೆ, ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಶಿಕ್ಷಣವನ್ನೇ ನಿಲ್ಲಿಸಿಬಿಡುವಂತೆ ಬಿಇಒ ಮತ್ತು ಡಿಡಿಪಿಐಗಳನ್ನು ಆಗ್ರಹಿಸಿವೆ. ಆನ್‌ಲೈನ್‌ ಶಿಕ್ಷಣ ಮಕ್ಕಳಿಗೆ ಅರ್ಥವಾಗುವುದಿಲ್ಲ. ಹಾಗಾಗಿ ಅದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ. ಫಲಿತಾಂಶದಲ್ಲಿ ಕಡಿಮೆಯಾದರೆ ಯಾರು ಹೊಣೆ? ಕಡಿಮೆ ಫಲಿತಾಂಶ ಬಂದರೆ ಅಂತಹ ಶಾಲೆಗಳನ್ನು ಮುಚ್ಚುವ ಭೀತಿಯೂ ಇದೆ.

ಕೋವಿಡ್ ಅವಧಿಯಲ್ಲಿ ಆನ್‌ಲೈನ್‌ ಶಿಕ್ಷಣ ಪಡೆಯುವ ಮಕ್ಕಳು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕಡಿಮೆ ಅಂಕಗಳನ್ನು ಪಡೆಯುವ ಸಾಧ್ಯತೆ ಇದೆ. ಪಿಯುಸಿ ನಂತರದ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ಕೋರ್ಸ್‌ಗಳಿಗೆ ಹೋಗಲು ತಡೆದಂತೆ ಆಗುತ್ತದೆ. ಕಡಿಮೆ ಅಂಕ ಗಳಿಸಿದವರ ಮುಂದಿನ ಭವಿಷ್ಯ ಮಂಕಾಗಲಿದೆ. ವಿದ್ಯಾರ್ಥಿಗೆ ಮುಂದಿನ ಆಯ್ಕೆ ಇಲ್ಲದಂತಾಗಿ ಶಿಕ್ಷಣವನ್ನು ಮೊಟುಕುಗೊಳಿಸಬೇಕಾದಂತಹ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಕೇವಲ ಪ್ರತಿಷ್ಠಗಾಗಿ ಆನ್‌ಲೈನ್‌ ಶಿಕ್ಷಣದ ಮೂಲಕ ಪಾಠ ಮಾಡಿದರೆ ಅದು ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿದಂತೆಯೇ ಆಗುತ್ತದೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಶಿಕ್ಷಣ ಅಧಿಕಾರಿಗಳಿಗೆ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ ಹನುಮಂತರಾಯಪ್ಪ.

ಇದನ್ನೂ ಓದಿ: ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಮಾತು ದೂರವೇ ಉಳಿದಿದೆ. ನೆಟ್‌ವರ್ಕ್ ಮತ್ತು ಸಿಗ್ನಲ್ ಸಿಗದೇ ಇರುವ ಸಮಸ್ಯೆಯಿಂದ ಪಾಠ ಕೇಳಲು ಆಗುವುದಿಲ್ಲ. ನಗರ ಪ್ರದೇಶದ ಕೆಲವೇ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅನುಕೂಲವಾಗಬಹುದು. ಆದರೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವ ಮಂದಿ ಕಡಿಮೆ. ಗ್ರಾಮೀಣ ಬಡ ವಿದ್ಯಾರ್ಥಿಗಳು ನೇರ ತರಗತಿಗಳಿಗೆ ಬರಬೇಕೆಂದರೆ ಬಸ್ ವ್ಯವಸ್ಥೆಯೂ ಇಲ್ಲ. ಇದು ಆ ವಿದ್ಯಾರ್ಥಿಗಳು ಉಭಯ ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಆನ್‌ಲೈನ್‌ ವ್ಯವಸ್ಥೆ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಭ್ಯವಾದರೆ ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳು ಶಿಕ್ಷಣದಿಂದ ದೂರವೇ ಉಳಿಯುವಂತೆ ಮಾಡಿದೆ.

ಸರ್ಕಾರಿ ಶಾಲಾ ಕಾಲೇಜುಗಳ ಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಬಹುತೇಕ ಮಕ್ಕಳು ಬಡ-ಮಧ್ಯಮ ವರ್ಗದ ಕುಟುಂಬದವರಾಗಿದ್ದು 4ಜಿ ಯಂತಹ ಮೊಬೈಲ್ ಖರೀದಿ ಮಾಡಲು ಶಕ್ತವಾಗಿಲ್ಲ. ಮೊಬೈಲ್ ಇದ್ದವರು ನೆಟ್‌ವೆರ್ಕ್ ಸಿಗದೆ ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಒಂದು ಕಡೆಯಾದರೆ ಮಧ್ಯಮ ವರ್ಗದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಸಹಾಯಕತೆಯಿಂದ ಏನೂ ತೋಚದಂತಹ ಸ್ಥಿತಿಗೆ ತಲುಪಿವೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕೆಯ ನಡುವೆ ಭಾರೀ ಕಂದಕ ನಿರ್ಮಾಣವಾಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಜ್ಞಾನಿಕ ಶಿಕ್ಷಣ ನೀಡುವತ್ತ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಆನ್ಲೈನ್ ಶಿಕ್ಷಣವನ್ನು ನಿಲ್ಲಿಸಿ…!!!
    ಈ ಆನ್ಲೈನ್ ತರಗತಿಯಿಂದಾಗಿ ಅನೇಕ ಮಕ್ಕಳು ದುರಭ್ಯಾಸ ಗಳಿಗೆ ಬಲಿಯಾಗುತ್ತಿದ್ದಾರೆ.! ಹಾಗೂ ಆನ್ಲೈನ್ ನಲ್ಲಿ ಪಾಠ ಕೇಳುವುದಕ್ಕಿಂತ ಅನ್ಯರ ಜೊತೆಗೆ ಚಾಟಿಂಗ್ ಮಾಡುವುದೇ ಹೆಚ್ಚು…!
    ಆನ್ಲೈನ್ ಶಿಕ್ಷಣ ವ್ಯವಸ್ಥೆ ಯಿಂದಾಗಿ ಮಕ್ಕಳು ಹಾಳಾಗುತ್ತಿದ್ದಾರೆ, ಆನ್ಲೈನ್ ಶಿಕ್ಷಣ ದಿಂದ ಯಾವುದೇ ಪ್ರಯೋಜನ ಇಲ್ಲ, ನಿಜವಾಗಿಯೂ ನಮ್ಮ ರಾಜ್ಯದ ಈಗಿನ ಶಿಕ್ಷಣ ನೀತಿಯೇ ಮಕ್ಕಳನ್ನು ಹಾಳು ಮಾಡುತ್ತಿದೆ…!!!
    (ಆನ್ಲೈನ್ ಶಿಕ್ಷಣ ಸರಿ ಅನಿಸುವುದೇ ಆದರೆ ನನ್ನ ನಂಬರ್ ಗೆ ಕರೆ ಮಾಡಿ 8496092478)
    :- ಅನಿಲ್ ಕುಮಾರ್,
    ಹಂಗಳ ಗ್ರಾಮ, ಗುಂಡ್ಲುಪೇಟೆ ತಾಲೂಕು

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...