Homeಮುಖಪುಟಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

ಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ'

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ನಾಯಕರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸತತ ಚುನಾವಣಾ ಪ್ರಚಾರ ನಡೆಸುತ್ತಿರುವ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್‌ ಹೈದರಾಬಾದ್‌ನಲ್ಲಿ ’ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ್ದಾರೆ.

ಹೈದರಾಬಾದ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿ ಒಳನುಸುಳುವವರ ಮೇಲೆ ’ಸರ್ಜಿಕಲ್ ಸ್ಟ್ರೈಕ್’ ಮಾಡುವುದಾಗಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಬೆದರಿಕೆ ಹಾಕಿದ್ದಾರೆ.  ನಗರದಲ್ಲಿ ವಾಸಿಸುವ ಅಕ್ರಮ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳರು ಮತ್ತು ರೋಹಿಂಗ್ಯಾಗಳನ್ನು ಒಳನುಸುಳುಕೋರರು ಎಂದು  ಉಲ್ಲೇಖಿಸಲಾಗಿದೆ.

“ಅಕ್ರಮ ಒಳನುಸುಳುಕೋರರ ಮತಗಳನ್ನು ಬಳಸಿಕೊಂಡು ನೀವು ಚುನಾವಣೆಯಲ್ಲಿ ಗೆಲ್ಲಲು ಬಯಸುತ್ತೀರಿ. ಅದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೈದರಾಬಾದ್‌ನ ಮೇಯರ್‌ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಅವರೆಲ್ಲರನ್ನೂ ಹೊರಹಾಕುತ್ತೇವೆ” ಎಂದು ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಾದ್ಯಂತದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಗೆ “ಸರ್ಜಿಕಲ್ ಸ್ಟ್ರೈಕ್” ಎಂಬ ಹೆಸರು ನೀಡಲಾಗಿದೆ. ಈ ಪದವನ್ನು ಹೈದರಾಬಾದ್ ಜನರಿಗೆ ಅನ್ವಯಿಸಿ ಮಾತನಾಡಿರುವ ಸಂಸದ ಬಂಡಿ ಸಂಜಯ್ ಕುಮಾರ್ ಮಾತಿಗೆ ರಾಜ್ಯದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

’ಕೇವಲ ಮತಗಳ ಸಲುವಾಗಿ, ಬಿಜೆಪಿ ಹೈದರಾಬಾದಿಗರ ಜೀವವನ್ನು ತೆಗೆಯುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಿದೆ. “ಹೈದರಾಬಾದ್ ಪಾಕಿಸ್ತಾನದಲ್ಲಿದೆಯೇ? ನೀವು ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿದ್ದೀರಾ? ಚುನಾವಣೇ ಗೆಲ್ಲುವ ಸಲುವಾಗಿ ಹೈದರಾಬಾದ್‌ನಲ್ಲಿ ಬೆಂಕಿ ಹಚ್ಚಲು ಬಯಸುತ್ತೀರಾ..? ಎಂದು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್ ಆಕ್ರೋಶ ಹೊರಹಾಕಿದ್ದಾರೆ.

’ನಮಗೆ ಬಡತನ, ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್‌ಗಳು ಬೇಕು, ಹೈದರಾಬಾದಿಗಳ ವಿರುದ್ಧವಲ್ಲ’ ಎಂದು ಸಚಿವ ಕೆ.ಟಿ.ರಾಮರಾವ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ತಿರುಗೇಟು ನೀಡಿದ್ದಾರೆ. ಹೇಳಿದ್ದಾರೆ.

ಬಿಜೆಪಿ ನಾಯಕನ ಹೇಳಿಕೆಯನ್ನು ಅಪಹಾಸ್ಯ ಮಾಡಿದ ಎಐಎಂಐಎಂ ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, “ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಿಯರ ವಿರುದ್ಧ ಏಕೆ ಯಾವುದೇ ಸರ್ಜಿಕಲ್ ಸ್ಟ್ರೈಕ್‌ಗಳು ನಡೆಸಿಲ್ಲ” ಎಂದು ಪ್ರಶ್ನಿಸಿದ್ದಾರೆ. “ನೀವು ಯಾರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ? ಚೀನಾದ ಪಡೆ ಪಿಎಲ್‌ಎ ಲಡಾಖ್‌ನಲ್ಲಿ 970 ಚದರ ಕಿ.ಮೀ ಆಕ್ರಮಿಸಿಕೊಂಡಿದೆ. ಆದರೂ ಅವರು ಚೀನಾದ ಹೆಸರನ್ನು ಸಹ ತೆಗೆದುಕೊಳ್ಳುವುದಿಲ್ಲ” ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

“ಹೈದರಾಬಾದ್‌ನಲ್ಲಿ ಎಷ್ಟು ಪಾಕಿಸ್ತಾನಿಗಳು ಅಥವಾ ರೋಹಿಂಗ್ಯಾಗಳು ಇದ್ದಾರೆ ಎಂದು ನಮಗೆ ತಿಳಿಸಿ. ಇನ್ನೊಂದು ವಿಷಯ ನೆನಪಿಡಿ, ಹೈದರಾಬಾದ್‌ನಲ್ಲಿರುವವರು ಹಿಂದೂ, ಮುಸ್ಲಿಂ, ದಲಿತ, ಸಿಖ್, ಕ್ರಿಶ್ಚಿಯನ್ ಎಲ್ಲಾ ಧರ್ಮದವರು, ಎಲ್ಲರೂ ಭಾರತೀಯರು. ನಾವು ಪಾಕಿಸ್ತಾನಿಯರನ್ನು ಇಲ್ಲಿಗೆ ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.

ಜಿನ್ನಾ

ರಾಜ್ಯದ ಅಭಿವೃದ್ಧಿ ಅಥವಾ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಜೆಪಿ ಬಯಸುವುದಿಲ್ಲ, “ಬಿಜೆಪಿಯವರು ಬಿರುಕುಗಳನ್ನು ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಓವೈಸಿ ಆರೋಪಿಸಿದ್ದಾರೆ. ಓವೈಸಿಯವರನ್ನು ಸಂಸದ ತೇಜಸ್ವಿ ಸೂರ್ಯ, ಜಿನ್ನಾ ಅವತಾರ ಎಂದು ಕರೆದಿದ್ದರು.

ವಿಶ್ವ ಪ್ರಸಿದ್ಧ ಸಾಫ್ಟ್‌ವೇರ್ ಕೇಂದ್ರವಾದ ಹೈದರಾಬಾದ್ ಅನ್ನು ಭಾಗ್ಯನಗರವನ್ನಾಗಿ ಮಾಡಲು ಬಿಜೆಪಿ ಬಯಸಿದೆ. ಹೈದರಾಬಾದ್ ನಮ್ಮ ಗುರುತು, ನಮ್ಮ ಸಂಸ್ಕೃತಿ. ಅವರು ಎಲ್ಲವನ್ನೂ ಬದಲಾಯಿಸಲು ಬಯಸುತ್ತಾರೆ. ಆದರೆ ಹಾಗೆ ಮಾಡಲು ನಾವು ಬಿಡುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.


ಇದನ್ನೂ ಓದಿ: ‌ಓವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...