Homeಮುಖಪುಟರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

- Advertisement -
- Advertisement -

ನಿಮಗಿದು ಗೊತ್ತೇ? ಮೊನ್ನೆಯಷ್ಟೇ ಬಿಜೆಪಿ ಸೇರಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಿಯಲ್ ಎಸ್ಟೇಟ್ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹಾಜರಾಗುವಂತೆ ಕಳೆದ ಡಿಸೆಂಬರ್ ನಲ್ಲಿ ಕೋರ್ಟ್ ವಾರೆಂಟ್ ಹೊರಡಿಸಿತ್ತು.

ರುದ್ರಾ ಬಿಲ್ಡ್ವೆಲ್ ಕಂಪನಿಯ ಪ್ರಾಜೆಕ್ಟ್ ಒಂದರಲ್ಲಿ ನಡೆದ ಮೋಸ ಮತ್ತು ಪಿತೂರಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಗೆ ಈ ಕಂಪನಿಯ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸತತ ಗೈರು ಹಾಜರಾಗಿದ್ದರು. ನಂತರ ಜನವರಿ 24, 2019ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಹೈಕೋರ್ಟ್ ಖಡಕ್ ವಾರ್ನಿಂಗ್ ನೀಡಿತ್ತು. ಆದರೆ ಗಂಭೀರ್ ತಮ್ಮ ಮೇಲಿನ ಪ್ರಕರಣ ಕೈ ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ದೆಹಲಿಯ ಸಾಕೇತ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿತ್ತು.

ದೆಹಲಿಯ ಗಾಜಿಯಾಬಾದ್ ನ ಇಂದಿರಾಪುರಂನಲ್ಲಿ ಶುರುವಾಗಬೇಕಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಪ್ಲ್ಯಾಟ್ ಖರೀದಿಸಲು ಅನೇಕರು ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿದ್ದರು. ಆದರೆ ಕಟ್ಟಡ ನಿರ್ಮಾಣ ಕೆಲಸ ಇನ್ನೂ ಪ್ರಾರಂಭವಾಗಿಲ್ಲ ಎಂದು ಹೂಡಿಕೆದಾರರು 2016ರಲ್ಲಿ ದೂರು ಸಲ್ಲಿಸಿದ್ದರು. ಹೂಡಿಕೆದಾರರನ್ನು ವಂಚಿಸುವ ಸಲುವಾಗಿಯೇ ಈ ಪ್ರಾಜೆಕ್ಟನ್ನು ಆರಂಭಿಸಲಾಗಿತ್ತು ಎಂದು ಈ ದೂರಿನಲ್ಲಿ ಹೇಳಲಾಗಿದ್ದು ಪ್ರಕರಣ ವಿಚಾರಣೆಯ ಹಂತದಲ್ಲಿದೆ.

ಈ ಎಲ್ಲಾ ಕೇಸುಗಳಿಂದ ಬೇಸತ್ತಿರುವ ಗಂಭೀರ್ ಈ ಕಾರಣಕ್ಕಾಗಿಯೇ ಖುಸೆಗೊಳ್ಳಲು ಬಿಜೆಪಿ ಸೇರಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಈ ಹಿಂದೆಯೂ ಹಲವಾರು ಜನ ತಮ್ಮ ಮೇಲಿನ ಕೇಸುಗಳಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರಿದ್ದರು ನಂತರ ಅವರ ಕೇಸುಗಳು ಖುಲಾಸೆಗೊಂಡ ಸಾಕಷ್ಟು ಉದಾಹರಣೆಗಳು ಸಹ ಇವೆ.

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದ ಮುಕುಲ್ ರಾಯ್ ಬಿಜೆಪಿ ಸೇರ್ಪಡೆ

ಈ ಹಿಂದೆಯೂ ಮುಕುಲ್ ರಾಯ್ ಶ್ರದ್ಧಾ ಚಿಟ್ ಫಂಡ್ ಸ್ಕ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ನಂತರ ಅವರು ಬಿಜೆಪಿ ಸೇರಿದ ಕೂಡಲೇ ಹಗರಣ ಮುಕ್ತರಾದರು. ಹಿಮಾಚಲ ಪ್ರದೇಶದ ಅನಿಲ್ ಶರ್ಮಾ ಟಿಲಿಕಾಂ ಹಗರಣದಲ್ಲಿ ಸಿಲುಕಿಕೊಂಡು ಬಿಜೆಪಿ ಸೇರಿ ಬಗೆಹರಿಸಿಕೊಂಡರು. ಇಂತಹ ಹತ್ತಾರು ಉದಾಹರಣೆಗಳ ಸಾಲಿಗೆ ಹೊಸ ಸೇರ್ಪಡೆ ಗೌತಮ್ ಗಂಭೀರತೆ ಆಗಿದ್ದಾರೆ.

ಒಂದು ರಾಜಕೀಯ ಪಕ್ಷಕ್ಕೆ ಆರೋಗ್ಯಕರವೆನಿಸದ `ಕಾಂಗ್ರೆಸ್ ಮುಕ್ತ ಭಾರತ ಮಾಡುವೆ’ ಎಂದು ಹೊರಟ ಬಿಜೆಪಿ ಅದಕ್ಕೋಸ್ಕರ ಆಯ್ದುಕೊಂಡಿದ್ದು ಜನರಿಗೆ ಹತ್ತಿರವಾಗುವ ಜನಪರ ಹಾದಿಯನ್ನಲ್ಲ, ಬದಲಿಗೆ ಕಾಂಗ್ರೆಸಿನ ಹಗರಣವೀರರನ್ನು ತನ್ನತ್ತ ಸೆಳೆದುಕೊಂಡು ಕಾಂಗ್ರೆಸ್ ಅನ್ನು ಶುದ್ಧಗೊಳಿಸಿದ್ದು! ಈ ವಿಚಾರದಲ್ಲಿ ಬಿಜೆಪಿ ಎರಡು ರೀತಿಯಲ್ಲಿ ವ್ಯವಹರಿಸುತ್ತಾ ಬಂದಿದೆ. ಒಂದು, ಹಗರಣದಲ್ಲಿ ಸಿಕ್ಕಿಹಾಕಿಕೊಂಡವರಿಗೆ ತಮ್ಮ ಪಕ್ಷಕ್ಕೆ ಆಹ್ವಾನಿಸಿ ಅವರಿಗೆ ತಮ್ಮ ಪ್ರಭಾವ ಮತ್ತು ಅಧಿಕಾರ ದುರಪಯೋಗ ಬಳಸಿ ಕ್ಲಿನ್ ಚಿಟ್ ನೀಡಲಾಗುತ್ತದೆ. ಒಂದುವೇಳೆ ಅವರು ಪಕ್ಷಕ್ಕೆ ಬರದಿದ್ದರೆ ಅಂಥವರ ಮೇಲೆ ಐ.ಟಿ ದಾಳಿ, ಇ.ಡಿ ದಾಳಿ ರೀತಿಯಲ್ಲಿ ಬೆದರಿಕೆ ಒಡ್ಡಿ, ಸಿಬಿಐ ತನಿಖೆಯ ಗುಮ್ಮನನ್ನು ತೋರಿಸಿ ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಅಪ್ರಜಾತಾಂತ್ರಿಕ ನಡೆ ಎರಡನೆಯದ್ದು.

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ಕರ್ನಾಟಕದ ಎಸ್.ಎಂ ಕೃಷ್ಣರವರು ಸಹ ತೆರಿಗೆ ವಂಚನೆಯ ಬಲೆಯಲ್ಲಿ ಬಂಧಿಯಾಗಿದ್ದ ತಮ್ಮ ಅಳಿಯ ಸಿದ್ಧಾರ್ಥ ಹೆಗ್ಡೆಯನ್ನು ಬಚಾವು ಮಾಡಿಕೊಳ್ಳುವುದಕ್ಕಾಗಿ ಇಳಿ ವಯಸ್ಸಿನಲ್ಲಿ ಬಿಜೆಪಿ ಸೇರಿ ಮೂಲೆಗುಂಪಾದರು ಎಂಬ ಮಾತುಗಳಿವೆ. ಕೊಡಗು ಚಿಕ್ಕಮಗಳೂರು ಬೇನಾಮಿ ಕಾಫಿ ಎಸ್ಟೇಟ್ ಕುರಿತು ಸಿದ್ದಾರ್ಥ ವಿರುದ್ಧ ದೂರುಗಳಿದ್ದವು. ತನಿಖೆ ಭಯಕ್ಕಾಗಿಯೇ ಬಿಜೆಪಿ ಸೇರಿದ್ದರು ಎಂಬ ಮಾತುಗಳು ಚಾಲ್ತಿಯಲ್ಲಿವೆ. ಇನ್ನು ದೇಶ ಬಿಟ್ಟು ಓಡಿಹೋದ ಕಳ್ಳ ಉದ್ಯಮಿಗಳಿಗೆಲ್ಲಾ ನೇರ ಬಿಜೆಪಿಯೇ ಸಹಕರಿಸಿದ್ದಲ್ಲದೇ ಅವರಿಂದ ಹೇರಳವಾಗಿ ಪಾರ್ಟಿ ಫಂಡ್ ಪಡೆಯಿತ್ತಿರುವುದರ ಬಗ್ಗೆ ಬಿಜೆಪಿಯ ಮಿತ್ರ ಶಿವಸೇನೆಯೇ ಆರೋಪ ಮಾಡಿದೆ.

ಅವಕಾಶ ಸಿಕ್ಕಾಗಲೆಲ್ಲಾ ದೆಹಲಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿರುವ ಆಪ್ ಸರ್ಕಾರವನ್ನು ಗಂಭೀರ್ ಟೀಕಿಸಿದ್ದರು. ಕಳೆದ ವರ್ಷ ಗಂಭೀರ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿಬಂದ ಸಂದರ್ಭದಲ್ಲಿ ಅದನ್ನು ಸ್ವತಃ ತಳ್ಳಿಹಾಕಿದ್ದರು. ಆದರೆ ಈಗ ಯಾವುದೇ ಮಾತುಕತೆಗಳಿಲ್ಲದೆ ಇದ್ದಕ್ಕಿದ್ದಂತೆ ಬಿಜೆಪಿ ಸೇರಿ ಕೂತುಹಲಕ್ಕೆ ತೆರೆ ಎಳೆದಿದ್ದಾರೆ.

ಇನ್ನೂ ಅನುಮಾನಗಳಿಗೆ ಎಡೆಮಾಡಿಕೊಡುವ ಕಾರಣವೆಂದರೆ ಗಂಭೀರ್ ಅವರು ತರಾತುರಿಯಲ್ಲಿ ಬಿಜೆಪಿ ಸೇರಿದ್ದರು ಕೂಡ ಈ ಲೋಕಸಭೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ಸ್ಪಷ್ಟನೆಯನ್ನು ನೀಡುತ್ತಿಲ್ಲ. ಈ ಕುರಿತು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ಮುಖಂಡರು ಅಧಿಕಾರಯುತ ಧ್ವನಿಯಲ್ಲಿ ಹೇಳುತ್ತಿರುವುದು ಊಹಾಪೋಹಗಳಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ಗಂಭೀರ್ ಭವಿಷ್ಯ ಏನಾಗಲಿದೆ ಎನ್ನುವುದಕ್ಕಿಂತ ಇಂಥಾ ಅಪ್ರಜಾತಾಂತ್ರಿಕ ನಡೆಗಳಿಂದ ಸ್ವತಃ ಬಿಜೆಪಿಯೇ ತನ್ನ ಭವಿಷ್ಯ ಹಾಳುಮಾಡಿಕೊಂಡಿರುವುದರಿಂದ ಜನ ಗೌತಮ್ ಗಂಭೀರ್ ಬಗ್ಗೆ ಅಷ್ಟು ಗಮನವನ್ನು ಕೊಡುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...