HomeUncategorizedಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

- Advertisement -
- Advertisement -

ಹೊಸದಾಗಿ ನಿರ್ಮಿಸಲಾಗುತ್ತಿರುವ ಸಂಸತ್ ಭವನಕ್ಕೆ ಡಿಸೆಂಬರ್‌ 10ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಮತ್ತು ಭೀಮ್ ರಾವ್ ಅಂಬೇಡ್ಕರ್ ಸೇರಿದಂತೆ ಸುಮಾರು ಐದು ಪ್ರತಿಮೆಗಳನ್ನು ನಿರ್ಮಾಣ ಕಾರ್ಯದಿಂದಾಗಿ ತಾತ್ಕಾಲಿಕವಾಗಿ ಸ್ಥಳಾಂತರಿಸುವ ಸಾಧ್ಯತೆಯಿದೆ. ಯೋಜನೆ ಪೂರ್ಣಗೊಂಡ ನಂತರ ಹೊಸ ಸಂಸತ್ ಭವನ ಆವರಣದ ಪ್ರಮುಖ ತಾಣಗಳಲ್ಲಿ ಈ ಪುತ್ಥಳಿಗಳನ್ನು ಮರು ಸ್ಥಾಪಿಸಲಾಗುತ್ತದೆ ಎಂದು ಹೇಳಲಾಗಿದೆ.

ಹೊಸ ಸಂಸತ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ದಿನಾಂಕ ಡಿಸೆಂಬರ್ 10ರ ಆಸುಪಾಸಿನಲ್ಲಿ ನಿಗದಿಯಾಗುವ ಸೂಚನೆಗಳಿದ್ದರೂ, ಪ್ರಧಾನಿ ಮೋದಿಯವರ ಲಭ್ಯತೆ ಆಧರಿಸಿ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ಹೊಸ ಕಟ್ಟಡವನ್ನು ಈಗಿರುವ ಕಟ್ಟಡದ ಸಮೀಪದಲ್ಲಿ ಹೊಸಕಟ್ಟಡ ನಿರ್ಮಿಸಲಾಗುವುದು ಮತ್ತು ನಿರ್ಮಾಣ ಕಾರ್ಯಗಳು ಪ್ರಾರಂಭವಾದಾಗಿನಿಂದ 21 ತಿಂಗಳಲ್ಲಿ ಪೂರ್ಣಗೊಳಿಸುವ ನಿರೀಕ್ಷೆಯಿದೆ.

ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಯೋಜನೆಯ ಪ್ರಕಾರ, ಎಲ್ಲಾ ಸಂಸದರಿಗೆ ಪ್ರತ್ಯೇಕ ಕಚೇರಿಗಳನ್ನು ಹೊಂದಿರುವ ಹೊಸ ಸಂಸತ್ತಿನ ಕಟ್ಟಡವು ಇತ್ತೀಚಿನ ಡಿಜಿಟಲ್ ಸಂಪರ್ಕಸಾಧನಗಳನ್ನು ಹೊಂದಲಿದೆ. ಭವ್ಯವಾದ ಸಂವಿಧಾನ ಭವನ, ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿರಲಿದೆ.

ಈಗಿರುವ ಸಂಸತ್ ಭವನಕ್ಕೆ ಫೆಬ್ರವರಿ 12, 1921 ರಂದು ಅಡಿಪಾಯ ಹಾಕಲಾಗಿತ್ತು. ಭವನ ನಿರ್ಮಾಣಕ್ಕೆ 83 ಲಕ್ಷ ರೂಪಾಯಿ ವೆಚ್ಚವಾಗಿತ್ತು, ಸಂಸತ್ ಭವನ ಪೂರ್ಣಗೊಳ್ಳಲು ಆರು ವರ್ಷಗಳನ್ನು ತೆಗೆದುಕೊಂಡಿತು.  ಜನವರಿ 18, 1927 ರಂದು ಅಂದಿನ ಭಾರತದ ಗವರ್ನರ್ ಜನರಲ್ ಲಾರ್ಡ್ ಇರ್ವಿನ್ ಉದ್ಘಾಟನೆ ಮಾಡಿದ್ದರು. ಈಗಿನ ಸೆಂಟ್ರಲ್ ವಿಸ್ತಾಗೆ 861 ಕೋಟಿ ರೂ ವೆಚ್ಚ ಮಾಡುವ ಅಗತ್ಯವಿದೆಯೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.


ಇದನ್ನೂ ಓದಿ: ನವೆಂಬರ್ 26-27 ಸಾರ್ವತ್ರಿಕ ಮುಷ್ಕರ: ಕೇಂದ್ರ ಮೊಂಡುತನ ಬಿಟ್ಟು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...