Homeಮುಖಪುಟಭಾರತದಿಂದ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ಮಲಯಾಳಂ ಚಿತ್ರ 'ಜಲ್ಲಿಕಟ್ಟು'

ಭಾರತದಿಂದ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’

ಹರೀಶ್ ಎಂಬುವವರ "ಮಾವೋಯಿಸ್ಟ್" ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ಲಿಜೋ ಜೋಸ್ ಪೆಲ್ಲಿಸ್ಸೆರಿ ಅತ್ಯುತ್ತಮ ನಿರ್ದೇಶಕ ಪ್ರಶ್ತಿಯನ್ನೂ ಗೆದ್ದಿದ್ದರು.

- Advertisement -
- Advertisement -

ಕಳೆದ ವರ್ಷ ಬಿಡುಗಡೆಯಾಗಿ ಅತ್ಯುತ್ತಮ ವಿಮರ್ಶೆಗೆ ಒಳಗಾಗಿದ್ದ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ ಪ್ರಖ್ಯಾತ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದರು. ಆಂತೋಣಿ ವರ್ಗೀಸ್ ಮತ್ತು ಚೆಂಬನ್ ವಿನೋದ್ ಜೋಸ್ ಮತ್ತಿತರರು ಅಭಿನಯಿಸಿರುವ ಚಿತ್ರವು ವಿಮರ್ಶಕರ ನಡುವೆಯೂ ಮೆಚ್ಚುಗೆ ಗಳಿಸಿತ್ತು.

ಭಾರತದ ಸುಮಾರು 27 ಭಾಷೆಗಳ ಚಿತ್ರಗಳ ಪೈಕಿ ಜಲ್ಲಿಕಟ್ಟು ಚಿತ್ರವನ್ನು ಆಯ್ಕೆ ಮಾಡಲಾಗಿದೆ ಎಂದು ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾ ಹೇಳಿದೆ. ‘ದಿ ಡಿಸಿಪ್ಲಿನ್’, ‘ಶಕುಂತಲಾ ದೇವಿ’, ‘ಶಿಕಾರ’, ‘ಛಾಪಕ್’, ‘ಏಕೆ V/s ಏಕೆ’, ‘ಭೋಂಸ್ಲೆ’, ‘ಛಾಲಾಂಗ್’, ‘ಚೆಕ್ ಪೋಸ್ಟ್’ ಮುಂತಾದ ಸಿನಿಮಾಗಳ ಮಧ್ಯೆ ‘ಜಲ್ಲಿಕಟ್ಟು’ ಆಯ್ಕೆಯಾಗಿದೆ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಗುಡ್ಡಗಾಡು ಪ್ರದೇಶದ ಒಂದು ಹಳ್ಳಿಯ ಕಸಾಯಿಖಾನೆಯಿಂದ ತಪ್ಪಿಸಿಕೊಳ್ಳುವ ಒಂದು ಎಮ್ಮೆಯನ್ನು ಅ ಊರಿನ ಜನರು ಪತ್ತೆ ಹಚ್ಚುವುದರ ಸುತ್ತ ಈ ಚಿತ್ರದ ಕಥೆಯು ಹೆಣೆದುಕೊಂಡಿದೆ. ತಪ್ಪಿಸಿಕೊಂಡ ಎಮ್ಮೆಯನ್ನು ಹೇಗಾದರೂ ಹಿಡಿಯಲೇ ಬೇಕು ಎಂದು ಊರಿನ ಗಂಡಸರೆಲ್ಲಾ ಒಟ್ಟಾಗಿ ಮಾಡುವ ಸಾಹಸಗಳನ್ನು ತೋರಿಸುವುದರ ಮೂಲಕ ಮನುಷ್ಯನೊಳಗಿರುವ ಮೃಗೀಯ ಗುಣದ ಪರಿಚಯ ಮಾಡಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು.

ಹರೀಶ್ ಎಂಬುವವರ “ಮಾವೋಯಿಸ್ಟ್” ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರ ಟೊರೆಂಟೋ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ಲಿಜೋ ಜೋಸ್ ಪೆಲ್ಲಿಸ್ಸೆರಿ ಅತ್ಯುತ್ತಮ ನಿರ್ದೇಶಕ ಪ್ರಶ್ತಿಯನ್ನೂ ಗೆದ್ದಿದ್ದರು.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

“ಮಾನವೀಯತೆ ಕುರಿತು ಈ ಸಿನಿಮಾವಿದೆ. ಕೆಲವೊಮ್ಮೆ ಮನುಷ್ಯ ಮೃಗಗಳಿಗಿಂತ ಕ್ರೂರನಾಗುತ್ತಾನೆ. ಈ ಚಿತ್ರದ ಉದ್ದೇಶ, ಕ್ಯಾಮರಾ ಕೆಲಸ, ನಿರ್ದೇಶನ ಎಲ್ಲವೂ ಚೆನ್ನಾಗಿದೆ. ಹೀಗಾಗಿ ನಾವು ಈ ಸಿನಿಮಾ ಆಯ್ಕೆ ಮಾಡಿದ್ದೇವೆ’ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾದ ಚೇರ್‌ಮನ್ ರಾಹುಲ್ ರಾವೇಲ್ ತಿಳಿಸಿದ್ದಾರೆ.

ಫೆಬ್ರವರಿ 28ರಂದು ನಡೆಯಬೇಕಿದ್ದ 93ನೇ ಆಸ್ಕರ್ ಪ್ರಶಸ್ತಿ ಸಮಾರಂಭ, ಕೊರೊನಾದಿಂದಾಗಿ 2021 ಏಪ್ರಿಲ್ 25 ರಂದು ನಡೆಯಲಿದೆ


ಇದನ್ನೂ ಓದಿ: ನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...