ಹೈದರಾಬಾದ್ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಉಸ್ಮಾನಿಯಾ ವಿವಿ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 447 ರ ಅಡಿಯಲ್ಲಿ ಕ್ರಿಮಿನಲ್ ಅತಿಕ್ರಮಣ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ
ಮುನ್ಸಿಪಾಲಿಟಿ ಚುನಾವಣೆಯ ಪ್ರಯುಕ್ತ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ಮಂಗಳವಾರ ಹೈದರಾಬಾದ್ಗೆ ಆಗಮಿಸಿದ್ದ ತೇಜಸ್ವಿ ಸೂರ್ಯ ಎನ್ಸಿಸಿ ಗೇಟ್ ಬಳಿ ಅಡೆತಡೆಗಳನ್ನು ಮುರಿದು ತಮ್ಮ ಬೆಂಬಲಿಗರೊಂದಿಗೆ ವಿಶ್ವವಿದ್ಯಾಲಯದ ಆವರಣಕ್ಕೆ ಪ್ರವೇಶಿಸಿದ್ದರು. ನಂತರ ಅವರು ಆರ್ಟ್ಸ್ ಕಾಲೇಜಿನಲ್ಲಿ ಭಾಷಣ ಮಾಡಿದರು.
ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!
ಉಸ್ಮಾನಿಯಾ ವಿವಿಯ ರಿಜಿಸ್ಟ್ರಾರ್ ಡಾ.ಚ.ಗೋಪಾಲ್ ರೆಡ್ಡಿ, “ಈವೆಂಟ್ ನಡೆಸಲು ಯಾವುದೇ ಅನುಮತಿ ಇರಲಿಲ್ಲ. ಇಂತಹ ರಾಜಕೀಯ ಘಟನೆಗಳನ್ನು ವಿಶ್ವವಿದ್ಯಾಲಯದಲ್ಲಿ ಅನುಮತಿಸಲಾಗುವುದಿಲ್ಲ. ಉಪಕುಲಪತಿಗಳ ನಿರ್ದೇಶನದ ಮೇರೆಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ” ಎಂದು ಹೇಳಿದರು.
ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ
“2017 ರಲ್ಲಿ ವಿವಿ ಆಡಳಿತವು ಕ್ಯಾಂಪಸ್ನಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿಷೇಧಿಸಿತ್ತು. ಶಿಕ್ಷಣತಜ್ಞರಿಗೆ ಸಂಬಂಧವಿಲ್ಲದ ಚಟುವಟಿಕೆಗಳನ್ನು ಕ್ಯಾಂಪಸ್ನಲ್ಲಿ ಅನುಮತಿಸಲಾಗುವುದಿಲ್ಲ” ಎಂದು ಹೇಳಿದರು.
ಇದನ್ನೂ ಓದಿ: ಮಾಸ್ಕ್ ಧರಿಸದ ಕಾರಣ 250 ರೂ ದಂಡ ಕಟ್ಟಿದ ಸಂಸದ ತೇಜಸ್ವಿ ಸೂರ್ಯ!


