ಕೇಂದ್ರದ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನೂರಾರು ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗಾಗಿ ಸಾವಿರಾರು ರೈತರು ದೆಹಲಿಗೆ ತೆರಳುತ್ತಿದ್ದರು. ಆದರೆ ಅವರನ್ನು ಗಡಿಯಲ್ಲಿಯೇ ತಡೆಯಲಾಯಿತು. ಇದರಿಂದ ಉದ್ರೇಕಗೊಂಡ ರೈತರು ಬ್ಯಾರಿಕೇಡ್ಗಳನ್ನು ನದಿಗೆ ಎಸೆದು ಮುನ್ನುಗ್ಗಿದರು.
ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ರೈತರ ಮೇಲೆ ಅಶ್ರುವಾಯು ಮತ್ತು ಜಲಾನಿಲ ದಾಳಿ ಮಾಡಿದ್ದಾರೆ. ಆದರೂ ರೈತರು ತಮ್ಮ ನಿಲುವಿನಿಂದ ಹಿಂದೆ ಸರಿಯಲು ಒಪ್ಪಲಿಲ್ಲ.

ಇದನ್ನೂ ಓದಿ: ವಿವಾದಾತ್ಮಕ ಕೃಷಿ ಕಾನೂನು: ರೈತರನ್ನು 2 ನೇ ಸುತ್ತಿನ ಚರ್ಚೆಗೆ ಆಹ್ವಾನಿಸಿದ ಕೇಂದ್ರ!
ಇಂದು ದೇಶದಾದ್ಯಂತ ರೈತ-ಕಾರ್ಮಿಕ ಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಇದನ್ನು ಎದುರಿಸಲಾಗದೇ ಹರಿಯಾಣ ಸರ್ಕಾರ ತನ್ನೆಲ್ಲಾ ಗಡಿಗಳನ್ನು ಸೀಲ್ ಮಾಡಿಕೊಂಡಿದ್ದು, ರೈತರು ದೆಹಲಿಗೆ ತೆರಳದಂತೆ ತಡೆಯುತ್ತಿದೆ. ಮಧ್ಯಪ್ರದೇಶದಿಂದ ದೆಹಲಿಗೆ ರೈತರೊಂದಿಗೆ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನೂ ಸಹ ಬಂಧಿಸಲಾಗಿದೆ.
ಇದನ್ನೂ ಓದಿ: ಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ…
ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ್, ರಾಜಸ್ಥಾನ, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳಿಂದ ಸಾವಿರಾರು ರೈತರು ಕಾರ್ಮಿಕರು ಟ್ರ್ಯಾಕ್ಟರ್ ಮೂಲಕ, ಕಾಲ್ನಡಿಗೆಯ ಮೂಲಕ ಮತ್ತು ವಿವಿಧ ವಾಹನಗಳ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಇವರನ್ನು ತಡೆಯುವ ಸಲುವಾಗಿ ಹರಿಯಾಣ ಮತ್ತು ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸ್ ಪಡೆಯನ್ನು ನೇಮಿಸಲಾಗಿದೆ. ದೆಹಲಿಯ ಗುರುಗ್ರಾಂ ಮತ್ತು ಫರೀದಾಬಾದ್ ಗಡಿಗಳಿಗೆ ಸೀಲ್ ಹಾಕಲಾಗಿದೆ. ಕೊರೊನಾ ಸೋಂಕಿನ ಹೆಚ್ಚಳದ ಕಾರಣ ನೀಡಿ ರಾಜಧಾನಿಯಲ್ಲಿ ಯಾವುದೆ ರ್ಯಾಲಿಗಳು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶದ ಮೇರೆಗೆ ಪಂಜಾಬ್ ಮತ್ತು ಹರಿಯಾಣ ಗಡಿಯನ್ನು 2 ದಿನಗಳವರೆಗೆ ಸೀಲ್ ಮಾಡಲಾಗಿದೆ. ನಿನ್ನೆ ರಾತ್ರಿ ಮೆರವಣಿಗೆ ಹೊರಟಿದ್ದ ರೈತರ ಮೇಲೆ ಜಲಫಿರಂಗಿಯನ್ನು ಬಳಸಿ ಅವರನ್ನು ತಡೆಯಲು ಪ್ರಯತ್ನಿಸಿದರು. ಆದರೂ ರೈತರು ತಮ್ಮ ಪ್ರತಿಭಟನೆ ಕೈಬಿಡಲಿಲ್ಲ.
ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!


