Homeಕರ್ನಾಟಕಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

- Advertisement -
- Advertisement -

ಹರಿಗೆ ಎಂದು ಗುಡಿಯನೊಂದು
ಕಟ್ಟುತ್ತಿರುವೆಯಾ?
ದೀನಗಿಂತ ದೇವ ಬಡವನೆಂದು ಬಗೆದೆಯಾ?

ಎಂದು ಹಾಡಿದ ಅಂಕೋಲೆಯ “ಚುಟುಕು ಬ್ರಹ್ಮ” ದಿನಕರ ದೇಸಾಯಿಯವರ ಮಾತೃಭಾಷೆ ಕೊಂಕಣಿ! ರೈತ-ಕಾರ್ಮಿಕ ಹೋರಾಟ ಕಟ್ಟಿದ ದೇಸಾಯಿ ಕನ್ನಡ ಕಟ್ಟುವ ಕೈಂಕರ್ಯದಲ್ಲೂ ಹಿಂದಿರಲಿಲ್ಲ. ವಿಭಿನ್ನ ಜನ-ಜಾತಿ ಮತ್ತು ವಿವಿಧ ಭಾಷೆಯ ಉತ್ತರ ಕನ್ನಡದ ಮಣ್ಣಿನ ಸೊಗಡು-ಕಸುವುಗಳೇ ಅಂಥದ್ದು. ವಿಭಿನ್ನ ಭಾಷೆ-ಸಂಸ್ಕೃತಿಗಳಿದ್ದರೂ ಕನ್ನಡ ನಾಡು, ನುಡಿಯ ಜೊತೆಗೆ ಬಾಂಧವ್ಯ ಉಳಿಸಿಕೊಂಡೇ ಬಂದಿದೆ ಉತ್ತರ ಕನ್ನಡ.

ಮಲೆನಾಡು, ಕರಾವಳಿ, ಅರೆಬಯಲುಸೀಮೆಯಂಥ ವಿಶಿಷ್ಟ ಭೌಗೋಳಿಕ ಪರಿಸರದ ಈ ಜಿಲ್ಲೆಯ ಹಲವು ಕೊಂಕಣಿ ಮತ್ತು ಮರಾಠಿಗರು ಕನ್ನಡ ಸಾಹಿತ್ಯ, ಸಂಗೀತ, ಸಿನಿಮಾ, ರಂಗಭೂಮಿ, ರಾಜಕೀಯ, ಸಾಮಾಜಿಕ, ಮಾಹಿತಿ ತಂತ್ರಜ್ಞಾನ ಮುಂತಾದ ಕ್ಷೇತ್ರಗಳಿಗೆ ಎಂದೆಂದೂ ಅಳಿಸಲಾಗದ ದೊಡ್ಡ ಕೊಡುಗೆಗಳನ್ನೇ ಕೊಟ್ಟಿದ್ದಾರೆ. ಜಿಲ್ಲೆಗೊಂದು ನಿಜ ನಾಯಕತ್ವ ನೀಡಿದ್ದ ದಿನಕರ ದೇಸಾಯಿ ಲೋಕಸಭಾ ಸದಸ್ಯರೂ ಆಗಿದ್ದರು. ತ್ರಿಭಾಷಾ ಸಾಹಿತಿಯಾಗಿದ್ದ ಈ ಗೇಣಿದಾರರ-ಕೂಲಿಕಾರರ ಗೆಣೆಗಾರ ಲಲಿತ ಸಾಹಿತ್ಯ ಮತ್ತು ವೈಚಾರಿಕ ಬರಹಗಳಿಂದ ಪ್ರಸಿದ್ಧಿ ಪಡೆದಿದ್ದರು. ಜನರಲ್ಲಿ ತಿಳಿವು ಅರಿವು ಮೂಡಿಸಲೆಂದು “ಜನಸೇವಕ” ಎಂಬ ಪತ್ರಿಕೆ ಹೊರತರುತ್ತಿದ್ದ ದೇಸಾಯಿ ಹತ್ತಾರು ಹೈಸ್ಕೂಲು, ಕಾಲೇಜು ತೆರೆದು ಹಳ್ಳಿಗಾಡಿನಲ್ಲಿ ವಿದ್ಯಾಪ್ರಸಾರದ ಅಭೂತಪೂರ್ವ ಸಾಹಸ-ಸಾಧನೆ ಮಾಡಿದ್ದರು.

ಕನ್ನಡ, ಮರಾಠಿ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಸಾಹಿತ್ಯ ರಚಿಸಿರುವ ಗೋಕರ್ಣದ ಡಾ. ಗೌರೀಶ್ ಕಾಯ್ಕಿಣಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದರು. ಮೂರ್ತಿಭಂಜಕ ಪ್ರವೃತ್ತಿಯ ಕೊಂಕಣಿ ಮನೆಮಾತಾಗಿರುವ ಕಾಯ್ಕಿಣಿ ಅವರು ಮುಂದಿನ ತತ್ವಜ್ಞಾನವೆಂದರೆ ವಿಜ್ಞಾನ ಎನ್ನುತ್ತಿದ್ದರು. ಹರಿತ ವೈಚಾರಿಕ ಸಾಹಿತ್ಯದಿಂದ ಖ್ಯಾತಿ ಪಡೆದಿದ್ದ ಕಾಯ್ಕಿಣಿ ಪತ್ರಿಕೋದ್ಯಮಿಯೂ ಆಗಿದ್ದರು. ಮೆದು ಮಾತು-ಮೆಲುದನಿಯ ಕಥೆಗಾರ ಜಯಂತ್ ಕಾಯ್ಕಿಣಿ ಗೌರೀಶ್ ಕಾಯ್ಕಿಣಿಯವರ ಪುತ್ರ. ಕನ್ನಡಿಗರ ಅಚ್ಚುಮೆಚ್ಚಿನ ಸಾಹಿತಿ ಜಯಂತ್ 2006ರ ಬಳಿಕ ಸಿನಿಮಾ ಸಾಹಿತ್ಯದ ಮೂಲಕ ತಮ್ಮ ಪ್ರತಿಭೆಯ ಮತ್ತೊಂದು ಆಯಾಮವನ್ನು ತೆರೆದಿಟ್ಟಿದ್ದಾರೆ.

ಕಾಯ್ಕಿಣಿಗಳಂತೆ ಗೋಕರ್ಣ ಹತ್ತಿರದ ಹನೇಹಳ್ಳಿಯ ಖ್ಯಾತ ಕಥೆಗಾರ, ಕಾದಂಬರಿಕಾರ ಯಶವಂತ ಚಿತ್ತಾಲರೂ ಕೊಂಕಣಿ ಆಡುಮಾತಿನವರು. ‘ಶಿಕಾರಿ’ ಕಾದಂಬರಿಯಿಂದ ಕನ್ನಡ ಸಾರಸ್ವತ ಲೋಕದಲ್ಲಿ ಅಚ್ಚಳಿಯದ ಛಾಪು ಮೂಡಿಸಿರುವ ಚಿತ್ತಾಲರ ಅಣ್ಣ ಗಂಗಾಧರ ಚಿತ್ತಾಲರು ಕವಿಯಾಗಿ ಗುರುತಿಸಿಕೊಂಡವರು. ಗೋಕರ್ಣಕ್ಕೆ ಹತ್ತಿರವೇ ಇರುವ ಬಂಕಿಕೊಡ್ಲದ ಅರವಿಂದ ನಾಡಕರ್ಣಿ ಮತ್ತು ಸುಂದರ ನಾಡಕರ್ಣಿ ಸೋದರರು ಹಲವು ಕನ್ನಡಕವನ ಸಂಕಲನ ಪ್ರಕಟಿಸಿದ್ದಾರೆ. ಇವರೂ ಕೊಂಕಣಿ ಭಾಷೆಯ ಸಾರಸ್ವತ ಕುಟುಂಬದ ರೇ.ದಾಮೋದರ ಚಿತ್ತಾಲರೂ ಕನ್ನಡ ಸಾಹಿತ್ಯ ಕ್ಷೇತ್ರದ ಗಮನ ಸೆಳೆದ ಬರಹಗಾರರು.

ಕನ್ನಡ ಕಾದಂಬರಿ ಲೋಕಕ್ಕೆ ನವ್ಯಮಾರ್ಗ ತಂದ ಶಾಂತಿನಾಥ ದೇಸಾಯಿ ಹಳಿಯಾಳದವರು. ಸಣ್ಣಕತೆ, ಪ್ರಬಂಧ, ವಿಮರ್ಶೆ…ಮುಂತಾದ ಪ್ರಕಾರಗಳಲ್ಲಿ ಪ್ರಯೋಗಶೀಲತೆ ಅಳವಡಿಸಿ ನಾಲ್ಕು ದಶಕಗಳ ಕಾಲ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ಬರಹಗಾರನೆಂದು ಖ್ಯಾತರಾಗಿದ್ದ ದೇಸಾಯಿ ಕೊಂಕಣಿಗರು. ಕೊಂಕಣಿ ಮಾತಾಡುವ ಕುಟುಂಬದ ಉತ್ತರಕನ್ನಡಿಗ ವಿವೇಕ್ ಶಾನ್‍ಭಾಗ್ ಕನ್ನಡದ ಪ್ರಮುಖ ಕತೆಗಾರ, ಕಾದಂಬರಿಕಾರ ಮತ್ತು ನಾಟಕಕಾರರಲ್ಲಿ ಒಬ್ಬರು.

1950-60ರ ದಶಕದಲ್ಲಿ ಕನ್ನಡ ಸಿನಿಮಾರಂಗದಲ್ಲಿ ಮನೋಜ್ಞ ಅಭಿನಯದಿಂದ ಪ್ರಖ್ಯಾತರಾಗಿದ್ದ ಅಭಿನೇತ್ರಿಯರಾದ ಮೈನಾವತಿ ಮತ್ತು ಪಂಡರಿಬಾಯಿ ಮೂಲ ಭಟ್ಕಳ. ಕೊಂಕಣಿ ಮನೆಮಾತಿನ ಈ ಸಹೋದರಿಯರ ತಂದೆ ರಂಗರಾವ್ ಹರಿಕಥೆ, ಸಂಗೀತ, ಸಾಹಿತ್ಯ, ಅಭಿನಯದಲ್ಲಿ ಪರಿಣಿತರಾಗಿದ್ದರು. ಮೈನಾವತಿ ಸರಿಸುಮಾರು ನೂರು ಚಿತ್ರಗಳಲ್ಲಿ ನಟಿಸಿದ್ದರೆ, ಪಂಡರಿಬಾಯಿ ಕನ್ನಡ ಸಿನಿಮಾಗಳ ಮೊದಲ ಯಶಸ್ವೀ ತಾರೆ. ಡಾ. ರಾಜ್‍ಕುಮಾರ್ ಅವರಿಗೆ ನಾಯಕಿಯಾಗಿ ಮಿಂಚಿದ ಪಂಡರಿಬಾಯಿ ಆನಂತರ ಕನ್ನಡ ಚಿತ್ರರಂಗದ “ಅಮ್ಮ”ನೆಂದೇ ಹೆಸರಾಗಿದ್ದರು.

ಕುಮಟಾದ ಮಲ್ಲಾಪುರ ಗ್ರಾಮದ ಸಾರಸ್ವತ ಕೊಂಕಣಿ ಕುಟುಂಬದ ಅನಂತ್‍ನಾಗ್ ಮತ್ತು ಶಂಕರ್‌ನಾಗ್ ಇವತ್ತಿಗೂ ಕನ್ನಡ ಸಿನಿಮಾ ಲೋಕದಲ್ಲಿ ಮಾಂತ್ರಿಕ ಹೆಸರು. ಅನನ್ಯ ಪ್ರತಿಭೆಯ ಈ ಸಹೋದರರ ನಟನಾಕೌಶಲ್ಯ ಕನ್ನಡ ಸಿನಿಮಾರಂಗದಲ್ಲಿ ಸರ್ವಕಾಲಿಕ ದಾಖಲೆ! ಸಿನಿಮಾ ನಟಿ ರಾಧಿಕಾಪಂಡಿತ್ ಭಟ್ಕಳದ ಚಿತ್ರಾಪುರ ಮೂಲದ ಸಾರಸ್ವತ ಕೊಂಕಣಿ. ಉತ್ತರ ಕನ್ನಡದ ಯು.ಎಸ್. ಕೃಷ್ಣರಾವ್ ಮತ್ತವರ ಮಡದಿ ಚಂದ್ರಭಾಗಾದೇವಿ ಶಾಸ್ತ್ರೀಯ ನೃತ್ಯದ ಮೂಲಕ ಹೆಸರು ಮಾಡಿದ್ದಾರೆ. ಕೊಳಲುವಾದಕ ನಿತ್ಯಾನಂದ ಹಳದಿಪುರ್, ಸಂಗೀತಗಾರ ಮೋಹನ್‍ಚಿತ್ರಮನೆ, ತಬಲಾ ವಾದಕ ಆದಿತ್ಯ ಕಲ್ಯಾಣ್‍ಪುರ್, ಸಂಗೀತಗಾರ ಭರತ್ ಬಳವಳ್ಳಿ, ನಟ ವೆಂಕಟರಾವ್ ತಲಗೇರಿ, ಅನುಪಮಾ (ಕಾಯ್ಕಿಣಿ), ದೇಶಪಾಂಡೆ(ಸಂಗೀತ), ಆರ್.ಡಿ ಕಾಮತ್ (ರಂಗಭೂಮಿ) ಲೀನಾ ಚಂದಾವರ್ಕರ್ (ಪ್ರಸಿದ್ಧ ಗಾಯಕಿ), ಅನುರಾಧಾ ಪೋಡ್ವಾಲ್, ಅನುರಾಧಾ ಧಾರೇಶ್ವರ್ (ಹಾಡುಗಾರ್ತಿ) ಕೊಂಕಣಿಗರಾದರೂ ಕನ್ನಡ ಪ್ರತಿಭೆಗಳೆಂದೇ ಗುರುತಿಸಲ್ಪಡುವವರು!

ಸುಮಾರು ಮೂರೂಮುಕ್ಕಾಲು ದಶಕದಿಂದ ಕರ್ನಾಟಕದ ರಾಜಕಾರಣದಲ್ಲಿ ಪ್ರಮುಖ ರಾಜಕಾರಣಿಯಾಗಿರುವ ಹಳಿಯಾಳದ ರಘುನಾಥ್ ವಿಶ್ವನಾಥ್‍ರಾವ್ ದೇಶಪಾಂಡೆ ಕೊಂಕಣಿ ಮನೆ ಮಾತಿನವರು. ಅಧಿಕಾರ ರಾಜಕಾರಣದ ಹಲವು ಆಯಕಟ್ಟಿನ ಸ್ಥಾನದಲ್ಲಿದ್ದ ದೇಶಪಾಂಡೆ ಒಂದು ಸಂದರ್ಭದಲ್ಲಿ ಸಿಎಂ ಮಟೇರಿಯಲ್ ಅನಿಸಿಕೊಂಡವರು! ಸಮಾಜವಾದಿ ದಿನಕರ ದೇಸಾಯಿ ಒಡನಾಡಿ ಅಂಕೋಲೆಯ ದಯಾನಂದ ನಾಡಕರ್ಣಿ ಶಾಸಕರೂ ಆಗಿದ್ದರು. ಕುಮಟೆಯಲ್ಲಿ ವಸಂತಲತಾ ಮಿರ್ಜಾನ್‍ಕರ್ ಶಾಸಕಿಯಾಗಿದ್ದರು. ಇವರಿಬ್ಬರೂ ಸಾರಸ್ವತ ಕೊಂಕಣಿಗರು. ದಟ್ಟ ಕೊಂಕಣಿ ಪ್ರಭಾವದ ಕಾರವಾರದ ಬಿ.ಪಿ. ಕದಮ್ ವಿಧಾನಸಭೆಯ ಉಪಾಧ್ಯಕ್ಷರಾಗಿ, ಸಂಸದರಾಗಿದ್ದ ಕೊಂಕಣಿ ಭಾಷಿಕ. ವಿಧಾನಪರಿಷತ್‍ನ ಸಭಾಪತಿಯಾಗಿದ್ದ ಇದೇ ಕಾರವಾರದ ಎಸ್.ಡಿ. ಗಾಂವ್ಕರ್ ಕೂಡ ಕೊಂಕಣಿ ಮನೆ ಮಾತಿನವರಾಗಿದ್ದರು. ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಲ್ಲೊಬ್ಬರಾಗಿರುವ ನಂದನ್ ನೀಲೇಕಣಿ ಶಿರಸಿ ಮೂಲದ ಸಾರಸ್ವತ ಕೊಂಕಣಿಗರು. ಕಾರಾವಾರದ ಶಾಸಕಿ ರೂಪಾಲಿ ನಾಯ್ಕ್ ಮನೆಮಾತು ಕೊಂಕಣಿ.

ಕನ್ನಡದ ಗಂಧಗಾಳಿಯೇ ಇಲ್ಲದ ಹಲವು ಪ್ರದೇಶವಿರುವ ಉತ್ತರಕನ್ನಡದ ಎರಡನೇ ಪ್ರಮುಖ ವ್ಯಾವಹಾರಿಕ ಭಾಷೆ ಕೊಂಕಣಿ. ಕನ್ನಡಾಂಬೆಯ ತೇರು ಎಳೆಯುವಾಗ ಎಲ್ಲರೂ ಒಂದೇ. ಇದೇ ಉತ್ತರ ಕನ್ನಡದ ಭಾಷಾ ಸಹಿಷ್ಣುತೆ, ಸಾಮರಸ್ಯದ ವೈಶಿಷ್ಟ್ಯ!


ಇದನ್ನೂ ಓದಿ: ತಾತ್ಸಾರ ತೊರೆದು ಸ್ವಾಯತ್ತತೆಗಾಗಿ – ಕರ್ನಾಟಕದ ಹಕ್ಕುಗಳಿಗಾಗಿ ಹೋರಾಟವೇ ರಾಜ್ಯೋತ್ಸವ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...