Homeಕರ್ನಾಟಕಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ಇತ್ತಿಚೆಗೆ,  ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನಲ್ಲಿ ದೇವಸ್ಥಾನದಲ್ಲಿ ಚುಂಬನದ ದೃಶ್ಯವಿದೆ ಎಂಬ ಕಾರಣಕ್ಕೆ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಎನ್ನಲಾಗಿತ್ತು

- Advertisement -
- Advertisement -

ಬೆಂಗಳೂರಿನ ಉತ್ತರದ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ದೇವಾಲಯದ ಬಳಿ ಆಟವಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅರ್ಚಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಅರ್ಚಕನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಗಟನೆ ನಡೆದಿದ್ದು, ಅತ್ಯಾಚಾರ ಎಸಗಿರುವ ಆರೋಪಿ 62 ವರ್ಷದ ಅರ್ಚಕ ವೆಂಕಟರಮಣಪ್ಪನನ್ನು ದೇವನಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅರ್ಚಕ ವೆಂಕಟರಮಣಪ್ಪ ತನ್ನ ಪತ್ನಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ವಾಸಿಸುತ್ತಿದ್ದಾರೆ. ಅವರ ಇಬ್ಬರು ಹೆಣ್ಣುಮಕ್ಕಳನ್ನು ದೇವಾಲಯದ ಅರ್ಚಕರಿಗೆ ಕೊಟ್ಟು ಮದುವೆ ಮಾಡಲಾಗಿದೆ. ಅದರಲ್ಲಿ ಒಬ್ಬ ಮಗಳು ದೇವನಹಳ್ಳಿಯಲ್ಲಿ ಮತ್ತು ಇನ್ನೊಬ್ಬರು ಯಲಹಂಕದಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

ಆರೋಪಿ ವೆಂಕಟರಮಣಪ್ಪ ಅವರ ಅಳಿಯ, ಚೌಡೇಶ್ವರಿ ದೇವಸ್ಥಾನದ ಅರ್ಚಕರಾಗಿದ್ದು, ಘಟನೆ ನಡೆದಾಗ ನಗರದಿಂದ ಹೊರಗೆ ಹೋಗಿದ್ದರು. ಹೀಗಾಗಿ ಆರೋಪಿ ವೆಂಕಟರಮಣಪ್ಪ ಚೌಡೇಶ್ವರಿ ದೇವಸ್ಥಾನದ ಅರ್ಚಕರಾಗಿ ದಿನನಿತ್ಯದ ಆಚರಣೆಗಳನ್ನು ನಡೆಸುತ್ತಿದ್ದರು.

ಕಳೆದ ಮಂಗಳವಾರ ಸಂಜೆ 4.30ರ ಸುಮಾರಿಗೆ ದೇವಸ್ಥಾನದ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು  ವೆಂಕಟರಮಣಪ್ಪ ಸಿಹಿತಿಂಡಿಗಳನ್ನು ನೀಡುವ ನೆಪದಲ್ಲಿ ತಮ್ಮ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಸಿ.ಕೆ. ಬಾಬಾ ತಿಳಿಸಿದ್ದಾರೆ ಎಂದು ಡೆಕನ್ ಹೆರಾಲ್ಡ್ ವರದಿ ಮಾಡಿದೆ.

ಮಗಳು ಮನೆಗೆ ಹಿಂತಿಗದನ್ನು ಕಂಡು ಪೋಷಕರು ವಿಚಾರಿಸಿದಾಗ, ಹೂ ಮಾರುವ ಮಹಿಳೆ, ಬಾಲಕಿ ಅರ್ಚಕರ ಮನೆಗೆ ಹೊಗುವುದನ್ನು ನೋಡಿದ್ದನ್ನು ತಿಳಿಸಿದ್ದಾರೆ. ಅಲ್ಲಿ ಹೋಗಿ ನೋಡಿದಾಗ ಬಾಲಕಿ ಅಳುವ ಧ್ವನಿ ಕೇಳಿಸಿದೆ. ನಂತರ ಜನಸಮೂಹ ಗುಂಪುಗೂಡು, ಪೊಲೀಸರನ್ನು ಕರೆಸಿ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಬಾಲಕಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಪೋಲಿಸರು ವಿವರಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಹೂ ಮಾರಾಟಗಾರರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ವೆಂಕಟರಮಣಪ್ಪ ಅವರನ್ನು ಬಂಧಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತಿಚೆಗೆ,  ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನಲ್ಲಿ ದೇವಸ್ಥಾನದಲ್ಲಿ ಚುಂಬನದ ದೃಶ್ಯವಿದೆ ಎಂಬ ಕಾರಣಕ್ಕೆ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಎನ್ನಲಾಗಿತ್ತು. ಆದರೆ ದೇವಾಲಯಗಳಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳಿಗೆ ಯಾರು ತಲೆಕೆಡಿಸಿಕೊಳ್ಳುವುದಿಲ್ಲ, ಅಂತಹ ಘಟನೆಗಳ ಬಗ್ಗೆ ಯಾರು ತುಟಿ ಬಿಚ್ಚುವುದಿಲ್ಲ. ಸರ್ಕಾರ ಕೂಡ ಇಂತಹ ಪ್ರರಕರಣಗಳ ಬಗ್ಗೆ ಗಮನ ಹರಿಸುವುದಿಲ್ಲ ಸಾಮಾಜಿಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...