Homeಮುಖಪುಟಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

’ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ’ ಎಂದು ಚಿಂತಕರು ಆರೋಪಿಸಿದ್ದಾರೆ.

- Advertisement -
- Advertisement -

ದೇಶದಾದ್ಯಂತ ಪ್ರತಿ ತಿಂಗಳು ಚುನಾವಣೆಗಳು ನಡೆಯುತ್ತಿರುವುದರಿಂದ ಸಮಯ, ಹಣ ಎರಡು ವ್ಯರ್ಥವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ. ಹಾಗಾಗಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಭಾರತದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 80ನೇ ಅಖಿಲ ಭಾರತ ಅಧ್ಯಕ್ಷರ ಸಮ್ಮೇಳನ ಉದ್ದೇಶಿಸಿ ಮಾತನಾಡುವ ವೇಳೆ, 26/11 ಮುಂಬೈ ದಾಳಿಯ ಸಂತ್ರಸ್ತರಿಗೆ ಗೌರವ ಸಲ್ಲಿಸಿದರು. ಜೊತೆಗೆ ಹೊಸ ನೀತಿ ಮತ್ತು ಹೊಸ ಪ್ರಕ್ರಿಯೆಯೊಂದಿಗೆ ಭಾರತ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ, “ಪ್ರತಿ ಕೆಲವು ತಿಂಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತವೆ, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವುದು ಅತ್ಯಗತ್ಯ”ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ ಒಂದು ಚುನಾವಣೆ’ ಎನ್ನುವ ಅಪಾಯಕಾರಿ ರಣತಂತ್ರ

ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಮಾಡುವುದು ಉತ್ತಮ, ಪ್ರತ್ಯೇಕ ಮತದಾರರ ಪಟ್ಟಿಗಳಿಂದ ಸಂಪನ್ಮೂಲಗಳ ವ್ಯರ್ಥ ಎಂದು ಪ್ರಧಾನಿ ಸೂಚಿಸಿದ್ದಾರೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಚಿಂತನೆ ಬಗ್ಗೆ ತಿಳಿಸಿದ್ದರು.

ಪ್ರಧಾನ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) “ಒಂದು ರಾಷ್ಟ್ರ, ಒಂದು ಚುನಾವಣೆ” ಬಗ್ಗೆ ಮಾತನಾಡುತ್ತಿವೆ. ಅದು ಒಂದೇ ರೀತಿಯ ಸಂಪನ್ಮೂಲಗಳನ್ನು ಎಲ್ಲರಿಗೂ ನೀಡುವುದು ಮತ್ತು ಯಾವಾಗಲೂ ಚುನಾವಣಾ ವಿಚಾರಗಳಲ್ಲಿ ಸರ್ಕಾರಗಳು ತೊಡಗಿಕೊಳ್ಳುವ ಬದಲು ಆಡಳಿತಕ್ಕೆ ಹೆಚ್ಚಿನ ಸಮಯ ನೀಡುಲಾಗುತ್ತದೆ ಎಂದು ವಾದಿಸಿವೆ.

ಪ್ರತಿಪಕ್ಷಗಳು ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿವೆ, ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕ, ಇದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನದ ವಿರುದ್ಧ ಮತ್ತು ಅಪ್ರಾಯೋಗಿಕ ಎಂದು ವಾದಿಸಿದ್ದವು. ’ಈ ಯೋಜನೆ ಮೂಲಕ ಸಂಸತ್ತಿನ ಪ್ರಜಾಪ್ರಭುತ್ವವನ್ನು ಬದಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಪಿಎಂ ಆರೋಪಿಸಿತ್ತು.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ!

ನಮ್ಮ ಸಂವಿಧಾನ ಭಾರತ ಎಂಬ ಗಣರಾಜ್ಯಕ್ಕೆ ಕೊಡುವ ಸಾರ್ವಭೌಮತೆಯನ್ನು ಪ್ರತಿ ರಾಜ್ಯಕ್ಕೂ ನೀಡಿದೆ. ಆದುದರಿಂದ ಪ್ರತಿ ರಾಜ್ಯವು ವಿಶಿಷ್ಟ. ಪ್ರತಿ ರಾಜ್ಯದ ಅನನ್ಯತೆಯಂತೆ ಪ್ರತಿ ರಾಜ್ಯದ ಸಮಸ್ಯೆಗಳು ಬೇರೆ ಬೇರೆ. ಆ ಅನನ್ಯತೆ ಕಾಯ್ದುಕೊಳ್ಳುವುದು ಮತ್ತು ನಮಗೆ ಹತ್ತಿರವಾದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಬೇಕು, ಅಂತಾದಕ್ಕೆ ಒತ್ತುನೀಡುವ ಜನಪ್ರತಿನಿಧಿಗಳನ್ನು, ಅಂತಹ ಪಕ್ಷಗಳನ್ನು ಆಯ್ಕೆ ಮಾಡುವ ಮತ್ತು ಬೇಕಿದ್ದಲ್ಲಿ ಬದಲಿಸುವ ಅವಕಾಶ ರಾಜ್ಯಕ್ಕೆ ರಾಜ್ಯದ ಜನತೆಗೆ ಇರಬೇಕು, ಮತ್ತು ಆ ಕೆಲಸಕ್ಕೆ ಅಗತ್ಯವಾದ ಸಮಯ ಮತ್ತು ಕಾಲವೂ ಅಗತ್ಯ. ಇದನ್ನು ಕಸಿಯುವ ಹುನ್ನಾರವೇ ಒಂದು ದೇಶ – ಒಂದು ಚುನಾವಣೆಯ ರಣತಂತ್ರ. –  ಗುರುಪ್ರಸಾದ್ ಡಿ.ಎನ್ 

ಈಗ ಮತ್ತೆ ಪ್ರಧಾನ ಮಂತ್ರಿ ಮೋದಿ ’ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ತಮ್ಮ ಹಳೆಯ ಯೋಜನೆಯನ್ನು ಮುಂಡಿಟ್ಟುಕೊಂಡು ಬಂದಿದ್ದಾರೆ. ದೇಶದ ಸಂಪತ್ತು, ಸಮಯ ಉಳಿಸಲು ಈ ಯೋಜನೆ ಮುಖ್ಯ ಎನ್ನುತ್ತಿದ್ದಾರೆ. ಆದರೆ, ಇದು ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ ಎಂದು ಚಿಂತಕರು ಆರೋಪಿಸಿದ್ದಾರೆ.

ಅಧ್ಯಕ್ಷೀಯ ಮಾದರಿಯ ಎರಡು ನಾಯಕರ ನಡುವಿನ ಮಹಾಸಮರ ಎಂಬಂತೆ ಬಿಂಬಿಸುವಂತಹ ಚುನಾವಣಾ ಮಾದರಿಯನ್ನು ರಾಜ್ಯ ಸರ್ಕಾರಗಳ ಚುನಾವಣೆಯ ಜೊತೆಗೆ ತಳುಕು ಹಾಕುವ ಈ ರಣತಂತ್ರ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ:  ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...