Homeಮುಖಪುಟಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

’ಪಶ್ಚಿಮ ಬಂಗಾಳದಲ್ಲಿ ಹೊರಗಿನವರಿಗೆ ಸ್ಥಾನವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಬಂದು ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರಿಗೆ ಸ್ವಾಗತವಿಲ್ಲ’

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ-ತೃಣಮೂಲ ಕಾಂಗ್ರೆಸ್ ಆರೋಪ -ಪ್ರತ್ಯಾರೋಪಗಳಲ್ಲಿ ಮುಳುಗಿವೆ. ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು “ಗಲಭೆ ಪೀಡಿತ ಗುಜರಾತ್” ಆಗಿ ಪರಿವರ್ತಿಸಲು ಎಂದಿಗೂ ಅನುಮತಿಸುವುದಿಲ್ಲ’ ಎಂದಿದ್ದಾರೆ.

ಬಿಜೆಪಿ ಹೊರಗಿನವರ ಪಕ್ಷವಾಗಿದ್ದು, ಅದಕ್ಕೆ ರಾಜ್ಯದಲ್ಲಿ ಸ್ಥಾನವಿಲ್ಲ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು “ಗಲಭೆ ಪೀಡಿತ ಗುಜರಾತ್” ಆಗಿ ಪರಿವರ್ತಿಸಲು ಎಂದಿಗೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.

ದೇಶದ ಗಡಿಯಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ. ಆದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆಯಲ್ಲಿ ಏಕೆ ನಿರತರಾಗಿದ್ದಾರೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ತಮ್ಮ ವೃತ್ತಿಜೀವನದಲ್ಲಿ ಇಂತಹ “ಗೃಹ ಸಚಿವರನ್ನು” ನೋಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

“ಪಶ್ಚಿಮ ಬಂಗಾಳದಲ್ಲಿ ಹೊರಗಿನವರಿಗೆ ಸ್ಥಾನವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಬಂದು ರಾಜ್ಯದ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರಿಗೆ ರಾಜ್ಯದಲ್ಲಿ ಸ್ವಾಗತವಿಲ್ಲ” ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.

ಬಿಜೆಪಿ ಇತ್ತೀಚೆಗೆ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ, ರಾಜ್ಯವನ್ನು ಐದು ಸಾಂಸ್ಥಿಕ ವಲಯಗಳಾಗಿ ವಿಂಗಡಿಸಿ ಕೇಂದ್ರ ನಾಯಕರಿಗೆ ವಲಯಗಳ ಉಸ್ತುವಾರಿ ವಹಿಸಿದೆ. “ಬಿಜೆಪಿ ಅವರು ಪಶ್ಚಿಮ ಬಂಗಾಳವನ್ನು ಗುಜರಾತ್ ಆಗಿ ಪರಿವರ್ತಿಸುವುದಾಗಿ ಹೇಳುತ್ತಿದ್ದಾರೆ. ನಮ್ಮ ಬಂಗಾಳವನ್ನು ಗುಜರಾತ್ ನಂತಹ ಗಲಭೆ ಪೀಡಿತ ಸ್ಥಳವನ್ನಾಗಿ ಮಾಡಲು ಅವರು ಏಕೆ ಬಯಸುತ್ತಾರೆ..? ನಮಗೆ ಗಲಭೆಗಳು ಬೇಡ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಿನ್ನೆ ಕೂಡ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ “ಸುಳ್ಳಿನ ಕಸ” ಮತ್ತು “ರಾಷ್ಟ್ರದ ಅತಿದೊಡ್ಡ ಶಾಪ” ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ನನ್ನನ್ನು ಬಂಧಿಸಲು ಧೈರ್ಯಮಾಡಿದರು ಕೂಡ, ಜೈಲಿನಿಂದಲೇ ಮುಂದಿನ ಚುನಾವಣೆಯನ್ನು ಎದುರಿಸಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ‘ ಎಂದು ಸವಾಲು ಹಾಕಿದ್ದರು.

ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ ಎಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿ ರ್‍ಯಾಲಿಯಲ್ಲೂ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...