Homeಮುಖಪುಟಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿರುವುದು ವಿಶೇಷವಾಗಿದೆ.

- Advertisement -
- Advertisement -

ಡಿಸೆಂಬರ್‌ 1 ರಂದು ನಡೆಯಲಿರುವ ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ.‌ ಇತ್ತೀಚೆಗೆ ತಮಿಳುನಾಡು, ಮಹರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ ಉಂಟಾಗಿದ್ದ ಭಾರಿ ಪ್ರವಾಹದ ಸಂದರ್ಭದಲ್ಲಿ ಎಲ್ಲಿಯೂ ಕಾಣದ, ಅವುಗಳ ಬಗ್ಗೆ ತುಟಿಪಿಟಿಕ್ ಎನ್ನದ ಬಿಜೆಪಿ ನೇತೃತ್ವದ ಕೇಂದ್ರದ ನಾಯಕರು ಇದೀಗ ಕೇವಲ ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಸಮಯ ಹೊಂದಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವೆಂಬರ್ 28 ರಂದು ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದರ ಮರುದಿನವೇ ಗೃಹ ಸಚಿವ ಅಮಿತ್​ ಶಾ ಸಹ ರೋಡ್​ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯಿದೆ. ನವೆಂಬರ್​ 28 ರಂದು ಪ್ರಧಾನಿ ಮೋದಿ ಸಹ ಭಾರತ್ ಬಯೋಟೆಕ್​ ಭೇಟಿಗಾಗಿ ಹೈದ್ರಾಬಾದ್​ಗೆ ಆಗಮಿಸಲಿದ್ದು, ಅವರೂ ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ! 

ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದಾರೆ. ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷ ವನತಿ ಶ್ರೀನಿವಾಸನ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಕಂದರಾಬಾದ್‌ನ ಲೋಕಸಭಾ ಸದಸ್ಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈಗಾಗಲೇ ಬಿಜೆಪಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ನೆರೆ ಬಂದಾಗ ಕಾಣದಿದ್ದ ಇವರೆಲ್ಲರೂ ಈ ಮೂಲಕ ಅಧಿಕಾರ ಮಾತ್ರವೆ ತಮ್ಮ ಆದ್ಯತೆ, ಉತ್ತಮ ಆಡಳಿತವಲ್ಲ ಎಂದು ಪದೇ ಪದೇ ನಿರೂಪಿಸುತ್ತಿದ್ದಾರೆ. ನಿಜಕ್ಕೂ ಇದರ ಹಿಂದಿನ ಮರ್ಮವೇನು? ಒಂದು ಪಾಲಿಕೆಗೆ ಬಿಜೆಪಿ ಈ ರೀತಿಯ ಸಮಯ ಹೊಂದಿಸಿಕೊಳ್ಳುತ್ತಿರುವುದೇಕೆ?

ಜಿನ್ನಾ

ಈಗಾಗಲೆ ಚುನಾವಣೆಯ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಅದಲ್ಲದೆ ಹೈದರಾಬಾದ್‌ನಲ್ಲಿ ಹಿಡಿತವಿರುವ ಅಸಾದುದ್ದೀನ್ ಒವೈಸಿ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂಬಂತೆ ಬಿಂಬಿಸುವಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚುನಾವಣೆಯ ನಂತರ ತಮಿಳುನಾಡು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದನ್ನು ಬಳಸಿಕೊಂಡು ಬಿಜೆಪಿ ತಮ್ಮ ಮತದಾರರನ್ನು ಸೆಳೆಯುತ್ತಿದೆ ಎಂಬ ಅನುಮಾನ ಕೂಡಾ ಕಾಡುತ್ತಿದೆ.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಈ ಅನುಮಾನವನ್ನು ಗಟ್ಟಿಗೊಳಿಸುವಂತೆ ಸಂಸದ ತೇಜಸ್ವಿ ಸೂರ್ಯ, ಒವೈಸಿಯನ್ನು ’ಜಿನ್ನಾ ಅವತಾರ’ ಎಂದಿದ್ದು, ರೋಹಿಂಗ್ಯ ವಿಚಾರವನ್ನು ಮುನ್ನಲೆಗೆ ತಂದಿರುವುದು, ಒವೈಸಿಗೆ ಮತ ಹಾಕಿ ಹೈದರಾಬಾದ್‌‌ನಲ್ಲಿ ಗೆದ್ದರೆ ಅವರು ಭಾರತದ ಇತರ ರಾಜ್ಯಗಳ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಗೆಲ್ಲುತ್ತಾರೆಂದು ಹೇಳುತ್ತಾ ಒಂದು ವರ್ಗದಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಇವುಗಳನ್ನು ರಾಷ್ಟ್ರೀಯ ಮಾಧ್ಯಮಗಳು ಕೂಡಾ ನಿಯ್ಯತ್ತಿನಿಂದ ವರದಿ ಮಾಡುತ್ತಿದೆ. ತೆಲಂಗಾಣದ ಪಾಲಿಕೆಯೊಂದರ ಚುನಾವಣೆಯನ್ನು ರಾಷ್ಟ್ರೀಯ ಸುದ್ದಿಯನ್ನಾಗಿ ಮಾಡಿ ಮತದಾರರನ್ನು ದ್ರುವಿಕರಣ ಮಾಡುತ್ತಿದ್ದಾರೆ. ಈ ಚುನಾವಣೆಯನ್ನು ಹಿಂದೂ-ಮುಸ್ಲಿಂ ಹೋರಾಟ ಎನ್ನುವ ಮಟ್ಟಿಗೆ ಬಿಜೆಪಿ ಪ್ರಚಾರ ಮಾಡುತ್ತಿದೆ. ಹಾಗಾಗಿಯೆ ತೇಜಸ್ವಿ ಬಿಜೆಪಿಗೆ ನೀಡುವ ಮತ ಹಿಂದುತ್ವಕ್ಕೆ ನೀಡುವ ಮತ ಎಂದು ಒತ್ತಿ ಹೇಳುತ್ತಿರುವುದು.

ಹಾಗೆ ನೋಡಿದರೆ ಬಿಜೆಪಿಯು 150 ಸದಸ್ಯ ಬಲವಿರುವ ಹೈದರಾಬಾದ್ ಪಾಲಿಕೆಯ 2016 ರ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. 2018 ರಲ್ಲಿ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿತ್ತು. ಒಟ್ಟಿನಲ್ಲಿ ಬಿಜೆಪಿಯವರಿಂದ ಹಿಂದೂ ವಿರೋಧಿ ಎಂದು ಕರೆಯಲ್ಪಡುತ್ತಿರುವ ಒವೈಸಿಯನ್ನು ಜಾಸ್ತಿ ಮಾತಾಡಿಸಿ, ಹೈದರಾಬಾದ್ ಪಾಲಿಕೆಯ ನೆಪದಲ್ಲಿ ಹಿಂದೂ ಮತಗಳನ್ನು ದ್ರುವೀಕರಣ ಮಾಡುತ್ತಾ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕಡೆ ಮುಖ ಮಾಡುತ್ತಿದೆ. ಅದಕ್ಕೆಂದೆ ತಿಂಗಳ ಹಿಂದೆಯಷ್ಟೇ ನೆರೆ ಬಂದು ಮುಳುಗಿದ್ದ ಹೈದರಾಬಾದ್‌ ಬಗ್ಗೆ ತಲೆಕೆಡಿಸಿ ಕೊಳ್ಳದ ಬಿಜೆಪಿಯ ನಾಯಕರು ಈಗ ಆದ್ಯತೆಯ ಮೇಲೆ ಭೇಟಿ ನೀಡುತ್ತಿದ್ದಾರೆ, ಅದೂ ಯಕಶ್ಚಿತ್‌ ಪಾಲಿಕೆಯೊಂದರ ಚುನಾವಣೆಗೆ!

ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...