Homeಮುಖಪುಟಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿರುವುದು ವಿಶೇಷವಾಗಿದೆ.

- Advertisement -
- Advertisement -

ಡಿಸೆಂಬರ್‌ 1 ರಂದು ನಡೆಯಲಿರುವ ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ.‌ ಇತ್ತೀಚೆಗೆ ತಮಿಳುನಾಡು, ಮಹರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ ಉಂಟಾಗಿದ್ದ ಭಾರಿ ಪ್ರವಾಹದ ಸಂದರ್ಭದಲ್ಲಿ ಎಲ್ಲಿಯೂ ಕಾಣದ, ಅವುಗಳ ಬಗ್ಗೆ ತುಟಿಪಿಟಿಕ್ ಎನ್ನದ ಬಿಜೆಪಿ ನೇತೃತ್ವದ ಕೇಂದ್ರದ ನಾಯಕರು ಇದೀಗ ಕೇವಲ ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಸಮಯ ಹೊಂದಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವೆಂಬರ್ 28 ರಂದು ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದರ ಮರುದಿನವೇ ಗೃಹ ಸಚಿವ ಅಮಿತ್​ ಶಾ ಸಹ ರೋಡ್​ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯಿದೆ. ನವೆಂಬರ್​ 28 ರಂದು ಪ್ರಧಾನಿ ಮೋದಿ ಸಹ ಭಾರತ್ ಬಯೋಟೆಕ್​ ಭೇಟಿಗಾಗಿ ಹೈದ್ರಾಬಾದ್​ಗೆ ಆಗಮಿಸಲಿದ್ದು, ಅವರೂ ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ! 

ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದಾರೆ. ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷ ವನತಿ ಶ್ರೀನಿವಾಸನ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಕಂದರಾಬಾದ್‌ನ ಲೋಕಸಭಾ ಸದಸ್ಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈಗಾಗಲೇ ಬಿಜೆಪಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ನೆರೆ ಬಂದಾಗ ಕಾಣದಿದ್ದ ಇವರೆಲ್ಲರೂ ಈ ಮೂಲಕ ಅಧಿಕಾರ ಮಾತ್ರವೆ ತಮ್ಮ ಆದ್ಯತೆ, ಉತ್ತಮ ಆಡಳಿತವಲ್ಲ ಎಂದು ಪದೇ ಪದೇ ನಿರೂಪಿಸುತ್ತಿದ್ದಾರೆ. ನಿಜಕ್ಕೂ ಇದರ ಹಿಂದಿನ ಮರ್ಮವೇನು? ಒಂದು ಪಾಲಿಕೆಗೆ ಬಿಜೆಪಿ ಈ ರೀತಿಯ ಸಮಯ ಹೊಂದಿಸಿಕೊಳ್ಳುತ್ತಿರುವುದೇಕೆ?

ಜಿನ್ನಾ

ಈಗಾಗಲೆ ಚುನಾವಣೆಯ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಅದಲ್ಲದೆ ಹೈದರಾಬಾದ್‌ನಲ್ಲಿ ಹಿಡಿತವಿರುವ ಅಸಾದುದ್ದೀನ್ ಒವೈಸಿ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂಬಂತೆ ಬಿಂಬಿಸುವಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚುನಾವಣೆಯ ನಂತರ ತಮಿಳುನಾಡು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದನ್ನು ಬಳಸಿಕೊಂಡು ಬಿಜೆಪಿ ತಮ್ಮ ಮತದಾರರನ್ನು ಸೆಳೆಯುತ್ತಿದೆ ಎಂಬ ಅನುಮಾನ ಕೂಡಾ ಕಾಡುತ್ತಿದೆ.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಈ ಅನುಮಾನವನ್ನು ಗಟ್ಟಿಗೊಳಿಸುವಂತೆ ಸಂಸದ ತೇಜಸ್ವಿ ಸೂರ್ಯ, ಒವೈಸಿಯನ್ನು ’ಜಿನ್ನಾ ಅವತಾರ’ ಎಂದಿದ್ದು, ರೋಹಿಂಗ್ಯ ವಿಚಾರವನ್ನು ಮುನ್ನಲೆಗೆ ತಂದಿರುವುದು, ಒವೈಸಿಗೆ ಮತ ಹಾಕಿ ಹೈದರಾಬಾದ್‌‌ನಲ್ಲಿ ಗೆದ್ದರೆ ಅವರು ಭಾರತದ ಇತರ ರಾಜ್ಯಗಳ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಗೆಲ್ಲುತ್ತಾರೆಂದು ಹೇಳುತ್ತಾ ಒಂದು ವರ್ಗದಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಇವುಗಳನ್ನು ರಾಷ್ಟ್ರೀಯ ಮಾಧ್ಯಮಗಳು ಕೂಡಾ ನಿಯ್ಯತ್ತಿನಿಂದ ವರದಿ ಮಾಡುತ್ತಿದೆ. ತೆಲಂಗಾಣದ ಪಾಲಿಕೆಯೊಂದರ ಚುನಾವಣೆಯನ್ನು ರಾಷ್ಟ್ರೀಯ ಸುದ್ದಿಯನ್ನಾಗಿ ಮಾಡಿ ಮತದಾರರನ್ನು ದ್ರುವಿಕರಣ ಮಾಡುತ್ತಿದ್ದಾರೆ. ಈ ಚುನಾವಣೆಯನ್ನು ಹಿಂದೂ-ಮುಸ್ಲಿಂ ಹೋರಾಟ ಎನ್ನುವ ಮಟ್ಟಿಗೆ ಬಿಜೆಪಿ ಪ್ರಚಾರ ಮಾಡುತ್ತಿದೆ. ಹಾಗಾಗಿಯೆ ತೇಜಸ್ವಿ ಬಿಜೆಪಿಗೆ ನೀಡುವ ಮತ ಹಿಂದುತ್ವಕ್ಕೆ ನೀಡುವ ಮತ ಎಂದು ಒತ್ತಿ ಹೇಳುತ್ತಿರುವುದು.

ಹಾಗೆ ನೋಡಿದರೆ ಬಿಜೆಪಿಯು 150 ಸದಸ್ಯ ಬಲವಿರುವ ಹೈದರಾಬಾದ್ ಪಾಲಿಕೆಯ 2016 ರ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. 2018 ರಲ್ಲಿ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿತ್ತು. ಒಟ್ಟಿನಲ್ಲಿ ಬಿಜೆಪಿಯವರಿಂದ ಹಿಂದೂ ವಿರೋಧಿ ಎಂದು ಕರೆಯಲ್ಪಡುತ್ತಿರುವ ಒವೈಸಿಯನ್ನು ಜಾಸ್ತಿ ಮಾತಾಡಿಸಿ, ಹೈದರಾಬಾದ್ ಪಾಲಿಕೆಯ ನೆಪದಲ್ಲಿ ಹಿಂದೂ ಮತಗಳನ್ನು ದ್ರುವೀಕರಣ ಮಾಡುತ್ತಾ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕಡೆ ಮುಖ ಮಾಡುತ್ತಿದೆ. ಅದಕ್ಕೆಂದೆ ತಿಂಗಳ ಹಿಂದೆಯಷ್ಟೇ ನೆರೆ ಬಂದು ಮುಳುಗಿದ್ದ ಹೈದರಾಬಾದ್‌ ಬಗ್ಗೆ ತಲೆಕೆಡಿಸಿ ಕೊಳ್ಳದ ಬಿಜೆಪಿಯ ನಾಯಕರು ಈಗ ಆದ್ಯತೆಯ ಮೇಲೆ ಭೇಟಿ ನೀಡುತ್ತಿದ್ದಾರೆ, ಅದೂ ಯಕಶ್ಚಿತ್‌ ಪಾಲಿಕೆಯೊಂದರ ಚುನಾವಣೆಗೆ!

ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...