Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...