Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...