Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...