Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...