Homeಕರ್ನಾಟಕಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿತ್ತು. ಈಗ ಬಿಜೆಪಿ ತುರ್ತುಪರಿಸ್ಥಿತಿ ಘೋಷಿಸದೆ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ.

- Advertisement -
- Advertisement -

ಕೇಂದ್ರ-ರಾಜ್ಯ ಸರ್ಕಾರಗಳ ರೈತ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಹರಿಯಾಣ- ಪಂಜಾಬ್ ದಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆ ಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತ, ದಲಿತ ಮುಖಂಡರು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ರೈತರ ಪ್ರತಿಭಟನೆಗಳನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಸಿ.ಯತಿರಾಜು “ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿತ್ತು. ಈಗ ಬಿಜೆಪಿ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಣೆ ಮಾಡದೆಯೇ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಕಾಂಗ್ರೆಸ್‌ನ ತುರ್ತುಪರಿಸ್ಥಿತಿಯನ್ನು ಟೀಕಿಸುವ ಬಿಜೆಪಿ ಅದೇ ಕೆಲಸವನ್ನು ಮಾಡುತ್ತಿದೆ. ಬಿಜೆಪಿಯ ಕ್ರೂರ ನಡೆಗಳು ಜನವಿರೋಧಿಯಾಗಿವೆ” ಎಂದು ಆರೋಪಿಸಿದರು.

ಬಿಜೆಪಿ ಪಕ್ಷವು ರೈತರು ಮತ್ತು ಕಾರ್ಮಿಕರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸುಗ್ರೀವಾಜ್ಞೆಗಳನ್ನು, ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು. ಇಲ್ಲದೇ ಇದ್ದರೆ ಕಾಂಗ್ರೆಸ್ ಗೆ ಕಲಿಸಿದ ಪಾಠವನ್ನೇ ಬಿಜೆಪಿಗೂ ಕಲಿಸುತ್ತಾರೆ ಎಂಬುದನ್ನು ಮರೆಯಬಾರದು. ದೇಶದ ಜನ ಸರ್ಕಾರದ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕೊಡುವುದಾಗಿ ಹೇಳುತ್ತಿದೆ. ಇದು ಕೇವಲ ಶೇ.6ರಷ್ಟು ರೈತರಿಗೆ ಮಾತ್ರ ಸಿಗುತ್ತಿದೆ. ಉಳಿದ 94ರಷ್ಟು ಮಂದಿ ರೈತರಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ದೊರೆಯುತ್ತಿಲ್ಲ. ಅಷ್ಟೇ ಅಲ್ಲ ಕೇವಲ 24ರಷ್ಟು ಬೆಳೆಗಳಿಗೆ ಮಾತ್ರ ಬೆಂಬಲ ಬೆಲೆ ನಿಗದಿ ಮಾಡಿದೆ. ಉಳಿದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿಲ್ಲ ಎಂದು ದೂರಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಿಂದ ಧಾನ್ಯಗಳನ್ನು ತಂದು ಮಾರಾಟ ಮಾಡಲಾಗುತ್ತಿದೆ. ವ್ಯಾಪಾರಿಗಳು ಕೇವಲ 800 ರೂಪಾಯಿಗೆ ಕ್ವಿಂಟಾಲ್ ಭತ್ತವನ್ನು ಖರೀಧಿ ಮಾಡುತ್ತಿದ್ದು ಸಾಕಷ್ಟು ಲಾಭ ಗಳಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಒಂದು ಕ್ವಿಂಟಾಲ್ ಭತ್ತದ ಬೆಂಬಲ ಬೆಲೆ 1880 ರೂಪಾಯಿ ನಿಗದಿ ಮಾಡಿದೆ. ಆದರೆ ಭತ್ತವನ್ನು ಬೆಂಬಲ ಬೆಲೆಗೆ ಖರೀದಿ ಮಾಡದೇ ಇರುವುದರಿಂದ ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳಿಗೆ ಲಾಭದ ಅಂಶ ಹೋಗುತ್ತಿದೆ. ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

“ಕೇಂದ್ರ ಸರ್ಕಾರ ರೈತ-ದಲಿತ ಪರ ಇದ್ದೇವೆಂದು ಅಧಿಕಾರಕ್ಕೆ ಬಂದವು. ಅಧಿಕಾರ ಭದ್ರಪಡಿಸಿಕೊಂಡ ಮೇಲೆ ರೈತರು ಮತ್ತು ದಲಿತರಿಗೆ ದ್ರೋಹ ಬಗೆಯುತ್ತಿವೆ. ರೈತರಿಗೆ ಸಂಕಷ್ಟ ತರುವ ಕಾನೂನುಗಳನ್ನು ಜಾರಿಗೆ ತರುತ್ತಿದೆ. ವಿದ್ಯುತ್, ವಿಮಾನ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಖಾಸಗೀಕರಣ ಮಾಡಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಬಂಡವಾಳಗಾರರು ರೈತರ ತಲೆಯ ಮೇಲೆ ಕಾಲಿಟ್ಟು ತುಳಿಯುತ್ತಿದ್ದಾರೆ. ಇದನ್ನು ತಡೆಯಲು ಹೋರಾಟ ಅನಿವಾರ್ಯವಾಗಿದೆ ಎಂದರು.


ಇದನ್ನೂ ಓದಿ: ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...