Homeಕರ್ನಾಟಕಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿತ್ತು. ಈಗ ಬಿಜೆಪಿ ತುರ್ತುಪರಿಸ್ಥಿತಿ ಘೋಷಿಸದೆ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ.

- Advertisement -
- Advertisement -

ಕೇಂದ್ರ-ರಾಜ್ಯ ಸರ್ಕಾರಗಳ ರೈತ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಹರಿಯಾಣ- ಪಂಜಾಬ್ ದಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆ ಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತ, ದಲಿತ ಮುಖಂಡರು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ರೈತರ ಪ್ರತಿಭಟನೆಗಳನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಸಿ.ಯತಿರಾಜು “ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿತ್ತು. ಈಗ ಬಿಜೆಪಿ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಣೆ ಮಾಡದೆಯೇ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಕಾಂಗ್ರೆಸ್‌ನ ತುರ್ತುಪರಿಸ್ಥಿತಿಯನ್ನು ಟೀಕಿಸುವ ಬಿಜೆಪಿ ಅದೇ ಕೆಲಸವನ್ನು ಮಾಡುತ್ತಿದೆ. ಬಿಜೆಪಿಯ ಕ್ರೂರ ನಡೆಗಳು ಜನವಿರೋಧಿಯಾಗಿವೆ” ಎಂದು ಆರೋಪಿಸಿದರು.

ಬಿಜೆಪಿ ಪಕ್ಷವು ರೈತರು ಮತ್ತು ಕಾರ್ಮಿಕರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸುಗ್ರೀವಾಜ್ಞೆಗಳನ್ನು, ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು. ಇಲ್ಲದೇ ಇದ್ದರೆ ಕಾಂಗ್ರೆಸ್ ಗೆ ಕಲಿಸಿದ ಪಾಠವನ್ನೇ ಬಿಜೆಪಿಗೂ ಕಲಿಸುತ್ತಾರೆ ಎಂಬುದನ್ನು ಮರೆಯಬಾರದು. ದೇಶದ ಜನ ಸರ್ಕಾರದ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕೊಡುವುದಾಗಿ ಹೇಳುತ್ತಿದೆ. ಇದು ಕೇವಲ ಶೇ.6ರಷ್ಟು ರೈತರಿಗೆ ಮಾತ್ರ ಸಿಗುತ್ತಿದೆ. ಉಳಿದ 94ರಷ್ಟು ಮಂದಿ ರೈತರಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ದೊರೆಯುತ್ತಿಲ್ಲ. ಅಷ್ಟೇ ಅಲ್ಲ ಕೇವಲ 24ರಷ್ಟು ಬೆಳೆಗಳಿಗೆ ಮಾತ್ರ ಬೆಂಬಲ ಬೆಲೆ ನಿಗದಿ ಮಾಡಿದೆ. ಉಳಿದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿಲ್ಲ ಎಂದು ದೂರಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಿಂದ ಧಾನ್ಯಗಳನ್ನು ತಂದು ಮಾರಾಟ ಮಾಡಲಾಗುತ್ತಿದೆ. ವ್ಯಾಪಾರಿಗಳು ಕೇವಲ 800 ರೂಪಾಯಿಗೆ ಕ್ವಿಂಟಾಲ್ ಭತ್ತವನ್ನು ಖರೀಧಿ ಮಾಡುತ್ತಿದ್ದು ಸಾಕಷ್ಟು ಲಾಭ ಗಳಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಒಂದು ಕ್ವಿಂಟಾಲ್ ಭತ್ತದ ಬೆಂಬಲ ಬೆಲೆ 1880 ರೂಪಾಯಿ ನಿಗದಿ ಮಾಡಿದೆ. ಆದರೆ ಭತ್ತವನ್ನು ಬೆಂಬಲ ಬೆಲೆಗೆ ಖರೀದಿ ಮಾಡದೇ ಇರುವುದರಿಂದ ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳಿಗೆ ಲಾಭದ ಅಂಶ ಹೋಗುತ್ತಿದೆ. ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

“ಕೇಂದ್ರ ಸರ್ಕಾರ ರೈತ-ದಲಿತ ಪರ ಇದ್ದೇವೆಂದು ಅಧಿಕಾರಕ್ಕೆ ಬಂದವು. ಅಧಿಕಾರ ಭದ್ರಪಡಿಸಿಕೊಂಡ ಮೇಲೆ ರೈತರು ಮತ್ತು ದಲಿತರಿಗೆ ದ್ರೋಹ ಬಗೆಯುತ್ತಿವೆ. ರೈತರಿಗೆ ಸಂಕಷ್ಟ ತರುವ ಕಾನೂನುಗಳನ್ನು ಜಾರಿಗೆ ತರುತ್ತಿದೆ. ವಿದ್ಯುತ್, ವಿಮಾನ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಖಾಸಗೀಕರಣ ಮಾಡಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಬಂಡವಾಳಗಾರರು ರೈತರ ತಲೆಯ ಮೇಲೆ ಕಾಲಿಟ್ಟು ತುಳಿಯುತ್ತಿದ್ದಾರೆ. ಇದನ್ನು ತಡೆಯಲು ಹೋರಾಟ ಅನಿವಾರ್ಯವಾಗಿದೆ ಎಂದರು.


ಇದನ್ನೂ ಓದಿ: ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...