Homeಚಳವಳಿವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ 'ಹೀರೋ' ಮೇಲೆ ಕೊಲೆಯತ್ನದ ಕೇಸು!

ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ನಡೆಸಿದ ’ದೆಹಲಿ ಚಲೋ’ ಪ್ರತಿಭಟನಾ ಜಾಥಾದಲ್ಲಿ ರೈತರ ಮೇಲೆ ದಾಳಿ ಮಾಡುತ್ತಿದ್ದ ವಾಟರ್‌ ಜೆಟ್‌ ಅನ್ನು ಅತ್ಯಂತ ಸಾಹಸಿಕವಾಗಿ ನಿಲ್ಲಿಸಿದ ಹರಿಯಾಣದ ಅಂಬಾಲದ ಯುವ ರೈತನ ಮೇಲೆ ಪೊಲೀಸರು ಕೊಲೆ ಯತ್ನ ಕೇಸು ದಾಖಲಿಸಿದ್ದಾರೆ.

ಘಟನೆಯ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, 26 ವರ್ಷದ ನವದೀಪ್ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ’ಹೀರೋ’ ಆಗಿ ಮಿಂಚಿದರು. ಉತ್ತರ ಭಾರತದ ಕಠಿಣ ಚಳಿಯನ್ನು ಲೆಕ್ಕಿಸದೆ ದೆಹಲಿ ಚಲೋಗೆ ಹೊರಟಿದ್ದ ರೈತರ ಜಾಥಾದ ಮೇಲೆ ಪೊಲೀಸರು ವಾಟರ್‌ ಜೆಟ್‌‌ ದಾಳಿ ಮಾಡಿದ್ದರು. ಇದನ್ನು ನಿಲ್ಲಿಸಲು ವಾಟರ್‌ ಜೆಟ್ ವಾಹನವನ್ನು ಹತ್ತಿದೆ ಯುವ ರೈತ ಅದನ್ನು ನಿಲ್ಲಿಸಿ ವಾಪಾಸು ತಮ್ಮ ವಾಹನಕ್ಕೆ ಹಾರಿ ಜಾಥಾವನ್ನು ಸೇರಿಕೊಂಡಿದ್ದರು.

ಇದನ್ನೂ ಓದಿ: ದೆಹಲಿ ಚಲೋ: ತಾತ್ಕಾಲಿಕ ಜೈಲು ಮಾಡಲು ಕ್ರೀಡಾಂಗಣ ನೀಡುವುದಿಲ್ಲ ಎಂದ AAP ಸರ್ಕಾರ

ರೈತ ಸಂಘದ ಮುಖಂಡ ಜೈ ಸಿಂಗ್ ಅವರ ಪುತ್ರನಾಗಿರುವ ನವದೀಪ್ ವಿರುದ್ಧ ಜೀವಾವಧಿವರೆಗೆ ಶಿಕ್ಷೆ ನೀಡಬಹುದಾದ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಅಲ್ಲದೆ ಗಲಭೆ ಮತ್ತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಕೇಸುಗಳನ್ನು ಕೂಡಾ ದಾಖಲಿಸಲಾಗಿದೆ.

“ನನ್ನ ಓದಿನ ನಂತರ ನನ್ನ ತಂದೆಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ನಾನು ಯಾವತ್ತೂ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿಲ್ಲ. ಪ್ರತಿಭಟನಾ ನಿರತ ರೈತರಿಗೆ ವಾಹನ ಹತ್ತಲು ಮತ್ತು ಅವರ ವಿರುದ್ದ ದಾಳಿ ಮಾಡುತ್ತಿದ್ದ ಪಿರಂಗಿಯ ಟ್ಯಾಪ್ ಆಫ್ ಮಾಡಿದ್ದೇನೆ” ಎಂದು ನವದೀಪ್ ಸಿಂಗ್ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ತಿಳಿಸಿದ್ದಾರೆ.

“ಶಾಂತಿಯುತವಾಗಿ ಪ್ರತಿಭಟಿಸಲು ನಾವು ದೆಹಲಿಗೆ ಹೋಗಬೇಕೆಂದು ಹೊರಟಿದ್ದೆವು ಆದರೆ ಪೊಲೀಸರು ನಮ್ಮನ್ನು ನಿರ್ಬಂಧಿಸಿದರು. ಸರ್ಕಾರವನ್ನು ಪ್ರಶ್ನಿಸಲು ಮತ್ತು ಯಾವುದೇ ಜನ ವಿರೋಧಿ ಕಾನೂನುಗಳು ಜಾರಿಗೆ ಬಂದರೆ ಪ್ರತಿಭಟಿಸಲು ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಳ್ವಿಕೆಯ ಹರಿಯಾಣದ ಮತ್ತು ದೆಹಲಿಯ ಪೊಲೀಸರು ಕೃಷಿ ನೀತಿಗಳ ವಿರುದ್ದ ಜಾಥಾ ಹೊರಟಿದ್ದ ರೈತರ ಮೇಲೆ ಭಾರೀ ಪ್ರಮಾಣದ ದಬ್ಬಾಳಿಕೆ ನಡೆಸಿದ್ದಾರೆ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕಾನೂನುಗಳನ್ನು ವಿರೋಧಿಸಿ ಅಂತಿಮವಾಗಿ ದೆಹಲಿ ತಲುಪಲು ಯಶಸ್ವಿಯಾದ ರೈತರ ಮೇಲೆ ಮೂರನೇ ದಿನವು ಪೊಲೀಸರು ಅಶ್ರುವಾಯು ಮತ್ತು ನೀರಿನ ಫಿರಂಗಿಯನ್ನು ಹಾರಿಸಿದರು.

ಇದನ್ನೂ ಓದಿ: ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಅಷ್ಟೇ ಅಲ್ಲದೆ ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...