Homeಚಳವಳಿವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ 'ಹೀರೋ' ಮೇಲೆ ಕೊಲೆಯತ್ನದ ಕೇಸು!

ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ನಡೆಸಿದ ’ದೆಹಲಿ ಚಲೋ’ ಪ್ರತಿಭಟನಾ ಜಾಥಾದಲ್ಲಿ ರೈತರ ಮೇಲೆ ದಾಳಿ ಮಾಡುತ್ತಿದ್ದ ವಾಟರ್‌ ಜೆಟ್‌ ಅನ್ನು ಅತ್ಯಂತ ಸಾಹಸಿಕವಾಗಿ ನಿಲ್ಲಿಸಿದ ಹರಿಯಾಣದ ಅಂಬಾಲದ ಯುವ ರೈತನ ಮೇಲೆ ಪೊಲೀಸರು ಕೊಲೆ ಯತ್ನ ಕೇಸು ದಾಖಲಿಸಿದ್ದಾರೆ.

ಘಟನೆಯ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, 26 ವರ್ಷದ ನವದೀಪ್ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ’ಹೀರೋ’ ಆಗಿ ಮಿಂಚಿದರು. ಉತ್ತರ ಭಾರತದ ಕಠಿಣ ಚಳಿಯನ್ನು ಲೆಕ್ಕಿಸದೆ ದೆಹಲಿ ಚಲೋಗೆ ಹೊರಟಿದ್ದ ರೈತರ ಜಾಥಾದ ಮೇಲೆ ಪೊಲೀಸರು ವಾಟರ್‌ ಜೆಟ್‌‌ ದಾಳಿ ಮಾಡಿದ್ದರು. ಇದನ್ನು ನಿಲ್ಲಿಸಲು ವಾಟರ್‌ ಜೆಟ್ ವಾಹನವನ್ನು ಹತ್ತಿದೆ ಯುವ ರೈತ ಅದನ್ನು ನಿಲ್ಲಿಸಿ ವಾಪಾಸು ತಮ್ಮ ವಾಹನಕ್ಕೆ ಹಾರಿ ಜಾಥಾವನ್ನು ಸೇರಿಕೊಂಡಿದ್ದರು.

ಇದನ್ನೂ ಓದಿ: ದೆಹಲಿ ಚಲೋ: ತಾತ್ಕಾಲಿಕ ಜೈಲು ಮಾಡಲು ಕ್ರೀಡಾಂಗಣ ನೀಡುವುದಿಲ್ಲ ಎಂದ AAP ಸರ್ಕಾರ

ರೈತ ಸಂಘದ ಮುಖಂಡ ಜೈ ಸಿಂಗ್ ಅವರ ಪುತ್ರನಾಗಿರುವ ನವದೀಪ್ ವಿರುದ್ಧ ಜೀವಾವಧಿವರೆಗೆ ಶಿಕ್ಷೆ ನೀಡಬಹುದಾದ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಅಲ್ಲದೆ ಗಲಭೆ ಮತ್ತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಕೇಸುಗಳನ್ನು ಕೂಡಾ ದಾಖಲಿಸಲಾಗಿದೆ.

“ನನ್ನ ಓದಿನ ನಂತರ ನನ್ನ ತಂದೆಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ನಾನು ಯಾವತ್ತೂ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿಲ್ಲ. ಪ್ರತಿಭಟನಾ ನಿರತ ರೈತರಿಗೆ ವಾಹನ ಹತ್ತಲು ಮತ್ತು ಅವರ ವಿರುದ್ದ ದಾಳಿ ಮಾಡುತ್ತಿದ್ದ ಪಿರಂಗಿಯ ಟ್ಯಾಪ್ ಆಫ್ ಮಾಡಿದ್ದೇನೆ” ಎಂದು ನವದೀಪ್ ಸಿಂಗ್ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ತಿಳಿಸಿದ್ದಾರೆ.

“ಶಾಂತಿಯುತವಾಗಿ ಪ್ರತಿಭಟಿಸಲು ನಾವು ದೆಹಲಿಗೆ ಹೋಗಬೇಕೆಂದು ಹೊರಟಿದ್ದೆವು ಆದರೆ ಪೊಲೀಸರು ನಮ್ಮನ್ನು ನಿರ್ಬಂಧಿಸಿದರು. ಸರ್ಕಾರವನ್ನು ಪ್ರಶ್ನಿಸಲು ಮತ್ತು ಯಾವುದೇ ಜನ ವಿರೋಧಿ ಕಾನೂನುಗಳು ಜಾರಿಗೆ ಬಂದರೆ ಪ್ರತಿಭಟಿಸಲು ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಳ್ವಿಕೆಯ ಹರಿಯಾಣದ ಮತ್ತು ದೆಹಲಿಯ ಪೊಲೀಸರು ಕೃಷಿ ನೀತಿಗಳ ವಿರುದ್ದ ಜಾಥಾ ಹೊರಟಿದ್ದ ರೈತರ ಮೇಲೆ ಭಾರೀ ಪ್ರಮಾಣದ ದಬ್ಬಾಳಿಕೆ ನಡೆಸಿದ್ದಾರೆ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕಾನೂನುಗಳನ್ನು ವಿರೋಧಿಸಿ ಅಂತಿಮವಾಗಿ ದೆಹಲಿ ತಲುಪಲು ಯಶಸ್ವಿಯಾದ ರೈತರ ಮೇಲೆ ಮೂರನೇ ದಿನವು ಪೊಲೀಸರು ಅಶ್ರುವಾಯು ಮತ್ತು ನೀರಿನ ಫಿರಂಗಿಯನ್ನು ಹಾರಿಸಿದರು.

ಇದನ್ನೂ ಓದಿ: ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಅಷ್ಟೇ ಅಲ್ಲದೆ ಪೊಲೀಸರು ದೆಹಲಿಗೆ ಪ್ರವೇಶಿಸುವ ವಿವಿಧ ಕೇಂದ್ರಗಳಲ್ಲಿ ಮರಳು ತುಂಬಿದ ಲಾರಿ, ಮುಳ್ಳುತಂತಿ ಮತ್ತು ಕಾಂಕ್ರೀಟ್ ಬ್ಲಾಕ್ಗಳು ಸೇರಿದಂತೆ ಕೆಲವೆಡೆ ರಸ್ತೆಯನ್ನೇ ಅಗೆದು ಹಾಕಿದ್ದರು.

ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...