Homeಚಳವಳಿನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

- Advertisement -
- Advertisement -

ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಐತಿಹಾಸಿಕ ’ದೆಹಲಿ ಚಲೋ’ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ತಿರಸ್ಕರಿಸಿದ್ದಾರೆ. ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿರುವ ರೈತರು, ಅದೊಂದು ಕ್ರೀಡಾಂಗಣವಲ್ಲ, ತೆರೆದ ಬಂಧಿಖಾನೆಯೆಂದು ನಮಗೆ ತಿಳಿದೆ ಎಂದಿದ್ದಾರೆ.

ರೈತರ ಈ ಚಳವಳಿಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಕೂಡಾ ಭಾಗವಹಿಸಿದ್ದು, ಕರ್ನಾಟಕ ಜನಶಕ್ತಿ ಸಂಘಟನೆಯ “ಶಿವಕುಮಾರ್ ಎಸ್ ಗುಳಘಟ್ಟ” ಹೋರಾಟದ ಬಗೆಗಿನ ತಮ್ಮ ಸಾಕ್ಷಾತ್ ಅನುಭವವನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

’ನಡೆದಷ್ಟು ಟ್ರಾಕ್ಟರ್‌ಗಳ ಸಾಲು’

ಕಳೆದ  3-4 ದಿನಗಳಿಂದ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಗೆ ಹಲವು ರಾಜ್ಯಗಳಿಂದ ರೈತ ಹೋರಾಟಗಾರರು, ಜನಪರ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಬಂದು ಸೇರುತ್ತಿದ್ದಾರೆ. ಅದರೆ ದೆಹಲಿಯೊಳಗಡೆ ದೆಹಲಿ ಪೋಲಿಸರು ರೈತರನ್ನೂ ರೈತ ಹೋರಾಟಗಾರರನ್ನೂ ಪ್ರವೇಶಿಸಲು ಬಿಡುತ್ತಿಲ್ಲ. ಆದ ಕಾರಣ ಜನರು ರಸ್ತೆಯಲ್ಲೆ ಪ್ರತಿಭಟನೆ ನಿರತರಾಗಿದ್ದಾರೆ. ಅದೂ ದೆಹಲಿ ಒಳಗೆ ಬರುವ ಐದು ಕಡೆ ಹೆದ್ದಾರಿಯಲ್ಲೂ ಕೂಡ ಜನರು ರಸ್ತೆಯಲ್ಲೆ ಪ್ರತಿಭಟನೆಯ ಕೂಗು ಮೊಳಗಿಸುತ್ತಿದ್ದಾರೆ. ಅದೂ ಕೂಡ ದೊಡ್ಡ ಪ್ರಮಾಣದಲ್ಲಿ!

ರಸ್ತೆಯಲ್ಲೆ ಅಡುಗೆ ಮಾಡಿಕೊಂಡು ಅಲ್ಲೆ ಮಲಗಿಕೊಂಡು ಕಳೆದ ನಾಲ್ಕು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ.

ನಾವೂ ಕೂಡ ಈ ಹೋರಾಟದ ಭಾಗವಾಗಿ ಇದೇ ತಿಂಗಳು 22 ರಂದು ಬೆಂಗಳೂರಿನಿಂದ ಹೊರಟು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಪ್ರಚಾರ, ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನೂ ನಡೆಸಿ 27 ರ ಮಧ್ಯರಾತ್ರಿ ದೆಹಲಿಯ ನಿರಂಕಾರಿ ಮೈದಾನವನ್ನೂ ತಲುಪಿದೆವು. ಪ್ರತಿಭಟನೆಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಬರುವ ಪ್ರತಿಭಟನಾಕಾರರಿಗೆ ಆಹಾರ, ಔಷಧ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿಯ ಸಿಂಗೂ ಬಾರ್ಡರ್‌ನಲ್ಲಿ ದೊಡ್ಡಪ್ರಮಾಣದಲ್ಲಿ ಅಂದರೆ ಕನಿಷ್ಠ 60-80 ಸಾವಿರ ಜನರು ಟ್ರಾಕ್ಟರ್‌ಗಳ ಮೂಲಕ ಜಮಾಯಿಸಿದ್ದಾರೆ. ಅದೂ ಯಾವ ಪ್ರಮಾಣದಲ್ಲಿ ಅಂದರೆ ಸುಮಾರು ಆರು ಕಿ.ಮೀ ತನಕ ಟ್ರಾಕ್ಟರ್‌ಗಳು! ಕನಿಷ್ಠವೆಂದರೂ ಐದು ಸಾವಿರಕ್ಕೂ ಹೆಚ್ವು ಟ್ರಾಕ್ಟರ್‌ಗಳು ಉದ್ದಕ್ಕೂ ರಸ್ತೆಯ ಎರಡು ಬದಿಗಳಲ್ಲೂ ನಿಂತಿವೆ. ಅಲ್ಲೆ ರೈತರು ಒಂದೊಂದು ಕಡೆ ಪ್ರತಿಭಟನೆ, ಧರಣಿ, ಮಾತುಕತೆ, ಹೋರಾಟದ ಹಾಡುಗಳು, ಈ ಮೂರು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಅಲ್ಲೇ ವೈದ್ಯರುಗಳು ಆರೋಗ್ಯ ತಪಾಸಣೆಯನ್ನೂ ಮಾಡಿ ಔಷಧೋಪಾಚಾರಗಳ ವ್ಯವಸ್ಥೆಯನ್ನು ಸಹಾ ಮಾಡುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಗಳು ನಡೆಸುತ್ತಿವೆ. ಆದರೆ ಇದು ರೈತ ಕುಲದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕಾರಣ ಅದೂ ಅಷ್ಟು ಸುಲಭವಾಗಿ ಚಳುವಳಿಯನ್ನೂ ಹತ್ತಿಕ್ಕಲು ಸಾದ್ಯವಿಲ್ಲ.

ಸದ್ಯದ ಮಟ್ಟಿಗೆ ಈ ಚಳುವಳಿಯ ಸಂದರ್ಭದಲ್ಲಿ ಗಮನಿಸಬೇಕಾದ ಹಾಗೂ ಮನನ ಮಾಡಿಕೊಳ್ಳಲೇಬೇಕಾದ ಅಂಶವೆಂದರೆ ಹೆಣ್ಣುಮಕ್ಕಳು, ರೈತ ಮಹಿಳೆಯರು ಕಾಣದಿರುವುದು ದೊಡ್ಡ ದುರಂತವೇ ಸರಿ. ಪುರುಷನಷ್ಟೆ ಸರಿ ಸಮನಾಗಿ ಹೊಲಗದ್ದೆಗಳಲ್ಲಿ ದುಡಿಯುವ ಮಹಿಳೆಯರನ್ನೂ ಚಳುವಳಿಗಳಿಗೆ ಕರೆತರುವಲ್ಲಿ ವಿಫಲವಾಗಿರುವ ರೈತ ಚಳುವಳಿಗಳಿಗೆ ಬಹುಶಃ ಭವಿಷ್ಯ ಇಲ್ಲವೇನೋ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಹೆಣ್ಣುಮಕ್ಕಳನ್ನೂ, ಮಹಿಳೆಯರನ್ನೂ ಹೊರತಾದ ಯಾವುದೇ ಚಳುವಳಿ ದೀರ್ಘಕಾಲ ಉಳಿದು ಬೆಳೆಯದು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...