Homeಚಳವಳಿನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

- Advertisement -
- Advertisement -

ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಐತಿಹಾಸಿಕ ’ದೆಹಲಿ ಚಲೋ’ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ತಿರಸ್ಕರಿಸಿದ್ದಾರೆ. ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿರುವ ರೈತರು, ಅದೊಂದು ಕ್ರೀಡಾಂಗಣವಲ್ಲ, ತೆರೆದ ಬಂಧಿಖಾನೆಯೆಂದು ನಮಗೆ ತಿಳಿದೆ ಎಂದಿದ್ದಾರೆ.

ರೈತರ ಈ ಚಳವಳಿಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಕೂಡಾ ಭಾಗವಹಿಸಿದ್ದು, ಕರ್ನಾಟಕ ಜನಶಕ್ತಿ ಸಂಘಟನೆಯ “ಶಿವಕುಮಾರ್ ಎಸ್ ಗುಳಘಟ್ಟ” ಹೋರಾಟದ ಬಗೆಗಿನ ತಮ್ಮ ಸಾಕ್ಷಾತ್ ಅನುಭವವನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

’ನಡೆದಷ್ಟು ಟ್ರಾಕ್ಟರ್‌ಗಳ ಸಾಲು’

ಕಳೆದ  3-4 ದಿನಗಳಿಂದ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಗೆ ಹಲವು ರಾಜ್ಯಗಳಿಂದ ರೈತ ಹೋರಾಟಗಾರರು, ಜನಪರ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಬಂದು ಸೇರುತ್ತಿದ್ದಾರೆ. ಅದರೆ ದೆಹಲಿಯೊಳಗಡೆ ದೆಹಲಿ ಪೋಲಿಸರು ರೈತರನ್ನೂ ರೈತ ಹೋರಾಟಗಾರರನ್ನೂ ಪ್ರವೇಶಿಸಲು ಬಿಡುತ್ತಿಲ್ಲ. ಆದ ಕಾರಣ ಜನರು ರಸ್ತೆಯಲ್ಲೆ ಪ್ರತಿಭಟನೆ ನಿರತರಾಗಿದ್ದಾರೆ. ಅದೂ ದೆಹಲಿ ಒಳಗೆ ಬರುವ ಐದು ಕಡೆ ಹೆದ್ದಾರಿಯಲ್ಲೂ ಕೂಡ ಜನರು ರಸ್ತೆಯಲ್ಲೆ ಪ್ರತಿಭಟನೆಯ ಕೂಗು ಮೊಳಗಿಸುತ್ತಿದ್ದಾರೆ. ಅದೂ ಕೂಡ ದೊಡ್ಡ ಪ್ರಮಾಣದಲ್ಲಿ!

ರಸ್ತೆಯಲ್ಲೆ ಅಡುಗೆ ಮಾಡಿಕೊಂಡು ಅಲ್ಲೆ ಮಲಗಿಕೊಂಡು ಕಳೆದ ನಾಲ್ಕು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ.

ನಾವೂ ಕೂಡ ಈ ಹೋರಾಟದ ಭಾಗವಾಗಿ ಇದೇ ತಿಂಗಳು 22 ರಂದು ಬೆಂಗಳೂರಿನಿಂದ ಹೊರಟು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಪ್ರಚಾರ, ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನೂ ನಡೆಸಿ 27 ರ ಮಧ್ಯರಾತ್ರಿ ದೆಹಲಿಯ ನಿರಂಕಾರಿ ಮೈದಾನವನ್ನೂ ತಲುಪಿದೆವು. ಪ್ರತಿಭಟನೆಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಬರುವ ಪ್ರತಿಭಟನಾಕಾರರಿಗೆ ಆಹಾರ, ಔಷಧ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿಯ ಸಿಂಗೂ ಬಾರ್ಡರ್‌ನಲ್ಲಿ ದೊಡ್ಡಪ್ರಮಾಣದಲ್ಲಿ ಅಂದರೆ ಕನಿಷ್ಠ 60-80 ಸಾವಿರ ಜನರು ಟ್ರಾಕ್ಟರ್‌ಗಳ ಮೂಲಕ ಜಮಾಯಿಸಿದ್ದಾರೆ. ಅದೂ ಯಾವ ಪ್ರಮಾಣದಲ್ಲಿ ಅಂದರೆ ಸುಮಾರು ಆರು ಕಿ.ಮೀ ತನಕ ಟ್ರಾಕ್ಟರ್‌ಗಳು! ಕನಿಷ್ಠವೆಂದರೂ ಐದು ಸಾವಿರಕ್ಕೂ ಹೆಚ್ವು ಟ್ರಾಕ್ಟರ್‌ಗಳು ಉದ್ದಕ್ಕೂ ರಸ್ತೆಯ ಎರಡು ಬದಿಗಳಲ್ಲೂ ನಿಂತಿವೆ. ಅಲ್ಲೆ ರೈತರು ಒಂದೊಂದು ಕಡೆ ಪ್ರತಿಭಟನೆ, ಧರಣಿ, ಮಾತುಕತೆ, ಹೋರಾಟದ ಹಾಡುಗಳು, ಈ ಮೂರು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಅಲ್ಲೇ ವೈದ್ಯರುಗಳು ಆರೋಗ್ಯ ತಪಾಸಣೆಯನ್ನೂ ಮಾಡಿ ಔಷಧೋಪಾಚಾರಗಳ ವ್ಯವಸ್ಥೆಯನ್ನು ಸಹಾ ಮಾಡುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಗಳು ನಡೆಸುತ್ತಿವೆ. ಆದರೆ ಇದು ರೈತ ಕುಲದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕಾರಣ ಅದೂ ಅಷ್ಟು ಸುಲಭವಾಗಿ ಚಳುವಳಿಯನ್ನೂ ಹತ್ತಿಕ್ಕಲು ಸಾದ್ಯವಿಲ್ಲ.

ಸದ್ಯದ ಮಟ್ಟಿಗೆ ಈ ಚಳುವಳಿಯ ಸಂದರ್ಭದಲ್ಲಿ ಗಮನಿಸಬೇಕಾದ ಹಾಗೂ ಮನನ ಮಾಡಿಕೊಳ್ಳಲೇಬೇಕಾದ ಅಂಶವೆಂದರೆ ಹೆಣ್ಣುಮಕ್ಕಳು, ರೈತ ಮಹಿಳೆಯರು ಕಾಣದಿರುವುದು ದೊಡ್ಡ ದುರಂತವೇ ಸರಿ. ಪುರುಷನಷ್ಟೆ ಸರಿ ಸಮನಾಗಿ ಹೊಲಗದ್ದೆಗಳಲ್ಲಿ ದುಡಿಯುವ ಮಹಿಳೆಯರನ್ನೂ ಚಳುವಳಿಗಳಿಗೆ ಕರೆತರುವಲ್ಲಿ ವಿಫಲವಾಗಿರುವ ರೈತ ಚಳುವಳಿಗಳಿಗೆ ಬಹುಶಃ ಭವಿಷ್ಯ ಇಲ್ಲವೇನೋ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಹೆಣ್ಣುಮಕ್ಕಳನ್ನೂ, ಮಹಿಳೆಯರನ್ನೂ ಹೊರತಾದ ಯಾವುದೇ ಚಳುವಳಿ ದೀರ್ಘಕಾಲ ಉಳಿದು ಬೆಳೆಯದು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...