Homeಚಳವಳಿನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

- Advertisement -
- Advertisement -

ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಐತಿಹಾಸಿಕ ’ದೆಹಲಿ ಚಲೋ’ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ತಿರಸ್ಕರಿಸಿದ್ದಾರೆ. ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿರುವ ರೈತರು, ಅದೊಂದು ಕ್ರೀಡಾಂಗಣವಲ್ಲ, ತೆರೆದ ಬಂಧಿಖಾನೆಯೆಂದು ನಮಗೆ ತಿಳಿದೆ ಎಂದಿದ್ದಾರೆ.

ರೈತರ ಈ ಚಳವಳಿಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಕೂಡಾ ಭಾಗವಹಿಸಿದ್ದು, ಕರ್ನಾಟಕ ಜನಶಕ್ತಿ ಸಂಘಟನೆಯ “ಶಿವಕುಮಾರ್ ಎಸ್ ಗುಳಘಟ್ಟ” ಹೋರಾಟದ ಬಗೆಗಿನ ತಮ್ಮ ಸಾಕ್ಷಾತ್ ಅನುಭವವನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

’ನಡೆದಷ್ಟು ಟ್ರಾಕ್ಟರ್‌ಗಳ ಸಾಲು’

ಕಳೆದ  3-4 ದಿನಗಳಿಂದ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಗೆ ಹಲವು ರಾಜ್ಯಗಳಿಂದ ರೈತ ಹೋರಾಟಗಾರರು, ಜನಪರ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಬಂದು ಸೇರುತ್ತಿದ್ದಾರೆ. ಅದರೆ ದೆಹಲಿಯೊಳಗಡೆ ದೆಹಲಿ ಪೋಲಿಸರು ರೈತರನ್ನೂ ರೈತ ಹೋರಾಟಗಾರರನ್ನೂ ಪ್ರವೇಶಿಸಲು ಬಿಡುತ್ತಿಲ್ಲ. ಆದ ಕಾರಣ ಜನರು ರಸ್ತೆಯಲ್ಲೆ ಪ್ರತಿಭಟನೆ ನಿರತರಾಗಿದ್ದಾರೆ. ಅದೂ ದೆಹಲಿ ಒಳಗೆ ಬರುವ ಐದು ಕಡೆ ಹೆದ್ದಾರಿಯಲ್ಲೂ ಕೂಡ ಜನರು ರಸ್ತೆಯಲ್ಲೆ ಪ್ರತಿಭಟನೆಯ ಕೂಗು ಮೊಳಗಿಸುತ್ತಿದ್ದಾರೆ. ಅದೂ ಕೂಡ ದೊಡ್ಡ ಪ್ರಮಾಣದಲ್ಲಿ!

ರಸ್ತೆಯಲ್ಲೆ ಅಡುಗೆ ಮಾಡಿಕೊಂಡು ಅಲ್ಲೆ ಮಲಗಿಕೊಂಡು ಕಳೆದ ನಾಲ್ಕು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ.

ನಾವೂ ಕೂಡ ಈ ಹೋರಾಟದ ಭಾಗವಾಗಿ ಇದೇ ತಿಂಗಳು 22 ರಂದು ಬೆಂಗಳೂರಿನಿಂದ ಹೊರಟು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಪ್ರಚಾರ, ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನೂ ನಡೆಸಿ 27 ರ ಮಧ್ಯರಾತ್ರಿ ದೆಹಲಿಯ ನಿರಂಕಾರಿ ಮೈದಾನವನ್ನೂ ತಲುಪಿದೆವು. ಪ್ರತಿಭಟನೆಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಬರುವ ಪ್ರತಿಭಟನಾಕಾರರಿಗೆ ಆಹಾರ, ಔಷಧ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿಯ ಸಿಂಗೂ ಬಾರ್ಡರ್‌ನಲ್ಲಿ ದೊಡ್ಡಪ್ರಮಾಣದಲ್ಲಿ ಅಂದರೆ ಕನಿಷ್ಠ 60-80 ಸಾವಿರ ಜನರು ಟ್ರಾಕ್ಟರ್‌ಗಳ ಮೂಲಕ ಜಮಾಯಿಸಿದ್ದಾರೆ. ಅದೂ ಯಾವ ಪ್ರಮಾಣದಲ್ಲಿ ಅಂದರೆ ಸುಮಾರು ಆರು ಕಿ.ಮೀ ತನಕ ಟ್ರಾಕ್ಟರ್‌ಗಳು! ಕನಿಷ್ಠವೆಂದರೂ ಐದು ಸಾವಿರಕ್ಕೂ ಹೆಚ್ವು ಟ್ರಾಕ್ಟರ್‌ಗಳು ಉದ್ದಕ್ಕೂ ರಸ್ತೆಯ ಎರಡು ಬದಿಗಳಲ್ಲೂ ನಿಂತಿವೆ. ಅಲ್ಲೆ ರೈತರು ಒಂದೊಂದು ಕಡೆ ಪ್ರತಿಭಟನೆ, ಧರಣಿ, ಮಾತುಕತೆ, ಹೋರಾಟದ ಹಾಡುಗಳು, ಈ ಮೂರು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಅಲ್ಲೇ ವೈದ್ಯರುಗಳು ಆರೋಗ್ಯ ತಪಾಸಣೆಯನ್ನೂ ಮಾಡಿ ಔಷಧೋಪಾಚಾರಗಳ ವ್ಯವಸ್ಥೆಯನ್ನು ಸಹಾ ಮಾಡುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಗಳು ನಡೆಸುತ್ತಿವೆ. ಆದರೆ ಇದು ರೈತ ಕುಲದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕಾರಣ ಅದೂ ಅಷ್ಟು ಸುಲಭವಾಗಿ ಚಳುವಳಿಯನ್ನೂ ಹತ್ತಿಕ್ಕಲು ಸಾದ್ಯವಿಲ್ಲ.

ಸದ್ಯದ ಮಟ್ಟಿಗೆ ಈ ಚಳುವಳಿಯ ಸಂದರ್ಭದಲ್ಲಿ ಗಮನಿಸಬೇಕಾದ ಹಾಗೂ ಮನನ ಮಾಡಿಕೊಳ್ಳಲೇಬೇಕಾದ ಅಂಶವೆಂದರೆ ಹೆಣ್ಣುಮಕ್ಕಳು, ರೈತ ಮಹಿಳೆಯರು ಕಾಣದಿರುವುದು ದೊಡ್ಡ ದುರಂತವೇ ಸರಿ. ಪುರುಷನಷ್ಟೆ ಸರಿ ಸಮನಾಗಿ ಹೊಲಗದ್ದೆಗಳಲ್ಲಿ ದುಡಿಯುವ ಮಹಿಳೆಯರನ್ನೂ ಚಳುವಳಿಗಳಿಗೆ ಕರೆತರುವಲ್ಲಿ ವಿಫಲವಾಗಿರುವ ರೈತ ಚಳುವಳಿಗಳಿಗೆ ಬಹುಶಃ ಭವಿಷ್ಯ ಇಲ್ಲವೇನೋ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಹೆಣ್ಣುಮಕ್ಕಳನ್ನೂ, ಮಹಿಳೆಯರನ್ನೂ ಹೊರತಾದ ಯಾವುದೇ ಚಳುವಳಿ ದೀರ್ಘಕಾಲ ಉಳಿದು ಬೆಳೆಯದು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...