Homeಚಳವಳಿನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

- Advertisement -
- Advertisement -

ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಐತಿಹಾಸಿಕ ’ದೆಹಲಿ ಚಲೋ’ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ತಿರಸ್ಕರಿಸಿದ್ದಾರೆ. ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿರುವ ರೈತರು, ಅದೊಂದು ಕ್ರೀಡಾಂಗಣವಲ್ಲ, ತೆರೆದ ಬಂಧಿಖಾನೆಯೆಂದು ನಮಗೆ ತಿಳಿದೆ ಎಂದಿದ್ದಾರೆ.

ರೈತರ ಈ ಚಳವಳಿಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಕೂಡಾ ಭಾಗವಹಿಸಿದ್ದು, ಕರ್ನಾಟಕ ಜನಶಕ್ತಿ ಸಂಘಟನೆಯ “ಶಿವಕುಮಾರ್ ಎಸ್ ಗುಳಘಟ್ಟ” ಹೋರಾಟದ ಬಗೆಗಿನ ತಮ್ಮ ಸಾಕ್ಷಾತ್ ಅನುಭವವನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

’ನಡೆದಷ್ಟು ಟ್ರಾಕ್ಟರ್‌ಗಳ ಸಾಲು’

ಕಳೆದ  3-4 ದಿನಗಳಿಂದ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಗೆ ಹಲವು ರಾಜ್ಯಗಳಿಂದ ರೈತ ಹೋರಾಟಗಾರರು, ಜನಪರ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಬಂದು ಸೇರುತ್ತಿದ್ದಾರೆ. ಅದರೆ ದೆಹಲಿಯೊಳಗಡೆ ದೆಹಲಿ ಪೋಲಿಸರು ರೈತರನ್ನೂ ರೈತ ಹೋರಾಟಗಾರರನ್ನೂ ಪ್ರವೇಶಿಸಲು ಬಿಡುತ್ತಿಲ್ಲ. ಆದ ಕಾರಣ ಜನರು ರಸ್ತೆಯಲ್ಲೆ ಪ್ರತಿಭಟನೆ ನಿರತರಾಗಿದ್ದಾರೆ. ಅದೂ ದೆಹಲಿ ಒಳಗೆ ಬರುವ ಐದು ಕಡೆ ಹೆದ್ದಾರಿಯಲ್ಲೂ ಕೂಡ ಜನರು ರಸ್ತೆಯಲ್ಲೆ ಪ್ರತಿಭಟನೆಯ ಕೂಗು ಮೊಳಗಿಸುತ್ತಿದ್ದಾರೆ. ಅದೂ ಕೂಡ ದೊಡ್ಡ ಪ್ರಮಾಣದಲ್ಲಿ!

ರಸ್ತೆಯಲ್ಲೆ ಅಡುಗೆ ಮಾಡಿಕೊಂಡು ಅಲ್ಲೆ ಮಲಗಿಕೊಂಡು ಕಳೆದ ನಾಲ್ಕು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ.

ನಾವೂ ಕೂಡ ಈ ಹೋರಾಟದ ಭಾಗವಾಗಿ ಇದೇ ತಿಂಗಳು 22 ರಂದು ಬೆಂಗಳೂರಿನಿಂದ ಹೊರಟು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಪ್ರಚಾರ, ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನೂ ನಡೆಸಿ 27 ರ ಮಧ್ಯರಾತ್ರಿ ದೆಹಲಿಯ ನಿರಂಕಾರಿ ಮೈದಾನವನ್ನೂ ತಲುಪಿದೆವು. ಪ್ರತಿಭಟನೆಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಬರುವ ಪ್ರತಿಭಟನಾಕಾರರಿಗೆ ಆಹಾರ, ಔಷಧ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿಯ ಸಿಂಗೂ ಬಾರ್ಡರ್‌ನಲ್ಲಿ ದೊಡ್ಡಪ್ರಮಾಣದಲ್ಲಿ ಅಂದರೆ ಕನಿಷ್ಠ 60-80 ಸಾವಿರ ಜನರು ಟ್ರಾಕ್ಟರ್‌ಗಳ ಮೂಲಕ ಜಮಾಯಿಸಿದ್ದಾರೆ. ಅದೂ ಯಾವ ಪ್ರಮಾಣದಲ್ಲಿ ಅಂದರೆ ಸುಮಾರು ಆರು ಕಿ.ಮೀ ತನಕ ಟ್ರಾಕ್ಟರ್‌ಗಳು! ಕನಿಷ್ಠವೆಂದರೂ ಐದು ಸಾವಿರಕ್ಕೂ ಹೆಚ್ವು ಟ್ರಾಕ್ಟರ್‌ಗಳು ಉದ್ದಕ್ಕೂ ರಸ್ತೆಯ ಎರಡು ಬದಿಗಳಲ್ಲೂ ನಿಂತಿವೆ. ಅಲ್ಲೆ ರೈತರು ಒಂದೊಂದು ಕಡೆ ಪ್ರತಿಭಟನೆ, ಧರಣಿ, ಮಾತುಕತೆ, ಹೋರಾಟದ ಹಾಡುಗಳು, ಈ ಮೂರು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಅಲ್ಲೇ ವೈದ್ಯರುಗಳು ಆರೋಗ್ಯ ತಪಾಸಣೆಯನ್ನೂ ಮಾಡಿ ಔಷಧೋಪಾಚಾರಗಳ ವ್ಯವಸ್ಥೆಯನ್ನು ಸಹಾ ಮಾಡುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಗಳು ನಡೆಸುತ್ತಿವೆ. ಆದರೆ ಇದು ರೈತ ಕುಲದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕಾರಣ ಅದೂ ಅಷ್ಟು ಸುಲಭವಾಗಿ ಚಳುವಳಿಯನ್ನೂ ಹತ್ತಿಕ್ಕಲು ಸಾದ್ಯವಿಲ್ಲ.

ಸದ್ಯದ ಮಟ್ಟಿಗೆ ಈ ಚಳುವಳಿಯ ಸಂದರ್ಭದಲ್ಲಿ ಗಮನಿಸಬೇಕಾದ ಹಾಗೂ ಮನನ ಮಾಡಿಕೊಳ್ಳಲೇಬೇಕಾದ ಅಂಶವೆಂದರೆ ಹೆಣ್ಣುಮಕ್ಕಳು, ರೈತ ಮಹಿಳೆಯರು ಕಾಣದಿರುವುದು ದೊಡ್ಡ ದುರಂತವೇ ಸರಿ. ಪುರುಷನಷ್ಟೆ ಸರಿ ಸಮನಾಗಿ ಹೊಲಗದ್ದೆಗಳಲ್ಲಿ ದುಡಿಯುವ ಮಹಿಳೆಯರನ್ನೂ ಚಳುವಳಿಗಳಿಗೆ ಕರೆತರುವಲ್ಲಿ ವಿಫಲವಾಗಿರುವ ರೈತ ಚಳುವಳಿಗಳಿಗೆ ಬಹುಶಃ ಭವಿಷ್ಯ ಇಲ್ಲವೇನೋ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಹೆಣ್ಣುಮಕ್ಕಳನ್ನೂ, ಮಹಿಳೆಯರನ್ನೂ ಹೊರತಾದ ಯಾವುದೇ ಚಳುವಳಿ ದೀರ್ಘಕಾಲ ಉಳಿದು ಬೆಳೆಯದು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...