Homeಚಳವಳಿನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

- Advertisement -
- Advertisement -

ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಐತಿಹಾಸಿಕ ’ದೆಹಲಿ ಚಲೋ’ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ತಿರಸ್ಕರಿಸಿದ್ದಾರೆ. ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿರುವ ರೈತರು, ಅದೊಂದು ಕ್ರೀಡಾಂಗಣವಲ್ಲ, ತೆರೆದ ಬಂಧಿಖಾನೆಯೆಂದು ನಮಗೆ ತಿಳಿದೆ ಎಂದಿದ್ದಾರೆ.

ರೈತರ ಈ ಚಳವಳಿಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಕೂಡಾ ಭಾಗವಹಿಸಿದ್ದು, ಕರ್ನಾಟಕ ಜನಶಕ್ತಿ ಸಂಘಟನೆಯ “ಶಿವಕುಮಾರ್ ಎಸ್ ಗುಳಘಟ್ಟ” ಹೋರಾಟದ ಬಗೆಗಿನ ತಮ್ಮ ಸಾಕ್ಷಾತ್ ಅನುಭವವನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

’ನಡೆದಷ್ಟು ಟ್ರಾಕ್ಟರ್‌ಗಳ ಸಾಲು’

ಕಳೆದ  3-4 ದಿನಗಳಿಂದ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಗೆ ಹಲವು ರಾಜ್ಯಗಳಿಂದ ರೈತ ಹೋರಾಟಗಾರರು, ಜನಪರ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಬಂದು ಸೇರುತ್ತಿದ್ದಾರೆ. ಅದರೆ ದೆಹಲಿಯೊಳಗಡೆ ದೆಹಲಿ ಪೋಲಿಸರು ರೈತರನ್ನೂ ರೈತ ಹೋರಾಟಗಾರರನ್ನೂ ಪ್ರವೇಶಿಸಲು ಬಿಡುತ್ತಿಲ್ಲ. ಆದ ಕಾರಣ ಜನರು ರಸ್ತೆಯಲ್ಲೆ ಪ್ರತಿಭಟನೆ ನಿರತರಾಗಿದ್ದಾರೆ. ಅದೂ ದೆಹಲಿ ಒಳಗೆ ಬರುವ ಐದು ಕಡೆ ಹೆದ್ದಾರಿಯಲ್ಲೂ ಕೂಡ ಜನರು ರಸ್ತೆಯಲ್ಲೆ ಪ್ರತಿಭಟನೆಯ ಕೂಗು ಮೊಳಗಿಸುತ್ತಿದ್ದಾರೆ. ಅದೂ ಕೂಡ ದೊಡ್ಡ ಪ್ರಮಾಣದಲ್ಲಿ!

ರಸ್ತೆಯಲ್ಲೆ ಅಡುಗೆ ಮಾಡಿಕೊಂಡು ಅಲ್ಲೆ ಮಲಗಿಕೊಂಡು ಕಳೆದ ನಾಲ್ಕು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ.

ನಾವೂ ಕೂಡ ಈ ಹೋರಾಟದ ಭಾಗವಾಗಿ ಇದೇ ತಿಂಗಳು 22 ರಂದು ಬೆಂಗಳೂರಿನಿಂದ ಹೊರಟು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಪ್ರಚಾರ, ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನೂ ನಡೆಸಿ 27 ರ ಮಧ್ಯರಾತ್ರಿ ದೆಹಲಿಯ ನಿರಂಕಾರಿ ಮೈದಾನವನ್ನೂ ತಲುಪಿದೆವು. ಪ್ರತಿಭಟನೆಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಬರುವ ಪ್ರತಿಭಟನಾಕಾರರಿಗೆ ಆಹಾರ, ಔಷಧ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿಯ ಸಿಂಗೂ ಬಾರ್ಡರ್‌ನಲ್ಲಿ ದೊಡ್ಡಪ್ರಮಾಣದಲ್ಲಿ ಅಂದರೆ ಕನಿಷ್ಠ 60-80 ಸಾವಿರ ಜನರು ಟ್ರಾಕ್ಟರ್‌ಗಳ ಮೂಲಕ ಜಮಾಯಿಸಿದ್ದಾರೆ. ಅದೂ ಯಾವ ಪ್ರಮಾಣದಲ್ಲಿ ಅಂದರೆ ಸುಮಾರು ಆರು ಕಿ.ಮೀ ತನಕ ಟ್ರಾಕ್ಟರ್‌ಗಳು! ಕನಿಷ್ಠವೆಂದರೂ ಐದು ಸಾವಿರಕ್ಕೂ ಹೆಚ್ವು ಟ್ರಾಕ್ಟರ್‌ಗಳು ಉದ್ದಕ್ಕೂ ರಸ್ತೆಯ ಎರಡು ಬದಿಗಳಲ್ಲೂ ನಿಂತಿವೆ. ಅಲ್ಲೆ ರೈತರು ಒಂದೊಂದು ಕಡೆ ಪ್ರತಿಭಟನೆ, ಧರಣಿ, ಮಾತುಕತೆ, ಹೋರಾಟದ ಹಾಡುಗಳು, ಈ ಮೂರು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಅಲ್ಲೇ ವೈದ್ಯರುಗಳು ಆರೋಗ್ಯ ತಪಾಸಣೆಯನ್ನೂ ಮಾಡಿ ಔಷಧೋಪಾಚಾರಗಳ ವ್ಯವಸ್ಥೆಯನ್ನು ಸಹಾ ಮಾಡುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಗಳು ನಡೆಸುತ್ತಿವೆ. ಆದರೆ ಇದು ರೈತ ಕುಲದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕಾರಣ ಅದೂ ಅಷ್ಟು ಸುಲಭವಾಗಿ ಚಳುವಳಿಯನ್ನೂ ಹತ್ತಿಕ್ಕಲು ಸಾದ್ಯವಿಲ್ಲ.

ಸದ್ಯದ ಮಟ್ಟಿಗೆ ಈ ಚಳುವಳಿಯ ಸಂದರ್ಭದಲ್ಲಿ ಗಮನಿಸಬೇಕಾದ ಹಾಗೂ ಮನನ ಮಾಡಿಕೊಳ್ಳಲೇಬೇಕಾದ ಅಂಶವೆಂದರೆ ಹೆಣ್ಣುಮಕ್ಕಳು, ರೈತ ಮಹಿಳೆಯರು ಕಾಣದಿರುವುದು ದೊಡ್ಡ ದುರಂತವೇ ಸರಿ. ಪುರುಷನಷ್ಟೆ ಸರಿ ಸಮನಾಗಿ ಹೊಲಗದ್ದೆಗಳಲ್ಲಿ ದುಡಿಯುವ ಮಹಿಳೆಯರನ್ನೂ ಚಳುವಳಿಗಳಿಗೆ ಕರೆತರುವಲ್ಲಿ ವಿಫಲವಾಗಿರುವ ರೈತ ಚಳುವಳಿಗಳಿಗೆ ಬಹುಶಃ ಭವಿಷ್ಯ ಇಲ್ಲವೇನೋ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಹೆಣ್ಣುಮಕ್ಕಳನ್ನೂ, ಮಹಿಳೆಯರನ್ನೂ ಹೊರತಾದ ಯಾವುದೇ ಚಳುವಳಿ ದೀರ್ಘಕಾಲ ಉಳಿದು ಬೆಳೆಯದು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...