Homeಮುಖಪುಟದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹಿಸಿ ದೆಹಲಿಯಲ್ಲಿ ದೇಶದ ರೈತರು ನಡೆಸುತ್ತಿರುವ ಪ್ರತಿಭಟನೆ 6 ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ಪ್ರತಿಭಟನೆ ಉಗ್ರ ರೂಪ ಪಡೆದುಕೊಳ್ಳುತ್ತಿದ್ದು ಕೇಂದ್ರದ ಮಾತುಕತೆ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಮೂರು ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದಲ್ಲಿ ದೆಹಲಿ ಪ್ರವೇಶಿಸುವ ಮೂರು ಮುಖ್ಯ ಸ್ಥಳಗಳನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ. ಸರ್ಕಾರ ನಮ್ಮ ಪ್ರತಿಭಟನೆಯನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರೆ ದೆಹಲಿ ಪ್ರವೇಶಿಸುವ 5 ಮುಖ್ಯ ಸ್ಥಳಗಳನ್ನು ಬಂದ್ ಮಾಡುವ ಮೂಲಕ ಬಿಸಿ ಮುಟ್ಟಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಬುರಾರಿ ಮೈದಾನದಲ್ಲಿ ಪ್ರತಿಭಟನೆ ನಡೆಸಿ ಎಂದು ಹೇಳುತ್ತಿದೆ. ಆದರೆ ಅದೊಂದು ಬಹಿರಂಗ ಬಂಧಿಖಾನೆ ಅಷ್ಟೇ. ನಾವು ಆ ಮೈದಾನ ಪ್ರವೇಶಿಸಿದರೆ ನಮ್ಮನ್ನು ಬಂಧಿಸಿ ಕಿರುಕುಳ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಹಾಗಾಗಿ ನಾವು ಆ ಮೈದಾನಕ್ಕೆ ಹೋಗುವುದಿಲ್ಲ. ಬದಲಿಗೆ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡಲಿ. ಇಲ್ಲದಿದ್ದಲ್ಲಿ ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬುರಾರಿ ಮೈದಾನಕ್ಕೆ ಕಳಿಸಿ ಅದನ್ನು ಜೈಲಾಗಿ ಪರಿವರ್ತನೆ ಮಾಡಲು ಪೊಲೀಸರು ಕುತಂತ್ರ ನಡೆಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಎಷ್ಟು ದಿನವಾದರೂ ಸರಿಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಕೇಂದ್ರ ಸಮಿತಿ ನಿರ್ಣಯ ತೆಗೆದುಕೊಳ್ಳುತ್ತದೆ. ನಮ್ಮ ಚಿತ್ತವೇನಿದ್ದರೂ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮಾತ್ರ ಎಂದು ರೈತರು ತಿಳಿಸಿದ್ದಾರೆ.

ರೈತರು ಮಾತುಕತೆ ಪ್ರಸ್ತಾಪ ತಿರಸ್ಕರಿಸಿದ ನಂತರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಹಿರಿಯ ಬಿಜೆಪಿ ಮುಖಂಡರ ಸಭೆ ನಡೆಸಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾರವರ ಮನೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ್ ಭಾಗವಹಿಸಿದ್ದರು ಎನ್ನಲಾಗಿದೆ. ಸಭೆಯಲ್ಲಿ ಏನು ತೀರ್ಮಾನವಾಗಿದೆ ಎಂಬುದು ತಿಳಿದುಬಂದಿಲ್ಲ.

ನವೆಂಬರ್ 25 ರಂದು ರೈತರು ದೆಹಲಿ ಚಲೋ ನಡೆಸಲು ದೆಹಲಿ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಅಲ್ಲಿಂದ ಈ ಐದು ದಿನಗಳಲ್ಲಿ ನೂರಾರು ಬಾರಿ ರೈತರ ಮೇಲೆ ಲಾಠೀಚಾರ್ಜ್ ಮಾಡಲಾಗಿದೆ. ಜಲಫಿರಂಗಿ, ಅಶ್ರುವಾಯು ಸಿಡಿಸಲಾಗಿದೆ. ನೂರಾರು ಕಡೆ ರೈತರನ್ನು ತಡೆಯಲಾಗಿದೆ. ಮಾತ್ರವಲ್ಲದೇ ಇಡೀ ಬಿಜೆಪಿ ಮತ್ತು ಹಲವು ಮಾಧ್ಯಮಗಳು ಇದು ಕಾಂಗ್ರೆಸ್ ರೈತರ ಹೋರಾಟ, ಇವರೆಲ್ಲಾ ರೈತರಲ್ಲ ಎಂದು ಪ್ರಚಾರ ಮಾಡುವ ಮೂಲಕ ಅವಮಾನಿಸಲಾಗಿದೆ. ಆದರೆ ರೈತರು ಮಾತ್ರ ಎದೆಗುಂದಿಲ್ಲ. ಈ ಹೋರಾಟವನ್ನು ಜೀವನ್ಮರಣದ ಪ್ರಶ್ನೆಯನ್ನಾಗಿ ರೈತರು ಭಾವಿಸಿದ್ದಾರೆ. ಹಾಗಾಗಿ ಈ ಕಾಯ್ದೆಗಳನ್ನು ವಾಪಸ್ ಕಳಿಸಿಯೇ ಮನೆಗೆ ತೆರಳುವ ಶಪಥ ಮಾಡಿದ್ದಾರೆ.

ಮಹಿಳಾ ರೈತರು ಹೋರಾಟದಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಾರೆ. ಟ್ರಾಕ್ಟರ್‌ಗಳಲ್ಲಿ ಮಲಗಿ, ರಸ್ತೆ ಬದಿಯೇ ಸ್ನಾನ ಮಾಡಿದರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರ ಆರಂಭದಲ್ಲಿ ಈ ರೈತರ ಹೋರಾಟವನ್ನು ದಮನ ಮಾಡಲು ಯತ್ನಿಸಿತು. ಆದರೆ ಪಂಜಾಬ್, ಹರಿಯಾಣದ ರೈತರು ಸಾಕಷ್ಟು ಸಂಖ್ಯೆಯಲ್ಲಿ ದೆಹಲಿ ಪ್ರವೇಶಿಸಿ ಹೋರಾಟವನ್ನು ತೀವ್ರಗೊಳಿಸಿದರು. ಈಗ ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ. ಆದರೆ ರೈತರು ದೆಹಲಿ ಬಿಟ್ಟು ಕದಲುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಈ ಹೋರಾಟ ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...