Homeಮುಖಪುಟದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹಿಸಿ ದೆಹಲಿಯಲ್ಲಿ ದೇಶದ ರೈತರು ನಡೆಸುತ್ತಿರುವ ಪ್ರತಿಭಟನೆ 6 ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ಪ್ರತಿಭಟನೆ ಉಗ್ರ ರೂಪ ಪಡೆದುಕೊಳ್ಳುತ್ತಿದ್ದು ಕೇಂದ್ರದ ಮಾತುಕತೆ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಮೂರು ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದಲ್ಲಿ ದೆಹಲಿ ಪ್ರವೇಶಿಸುವ ಮೂರು ಮುಖ್ಯ ಸ್ಥಳಗಳನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ. ಸರ್ಕಾರ ನಮ್ಮ ಪ್ರತಿಭಟನೆಯನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರೆ ದೆಹಲಿ ಪ್ರವೇಶಿಸುವ 5 ಮುಖ್ಯ ಸ್ಥಳಗಳನ್ನು ಬಂದ್ ಮಾಡುವ ಮೂಲಕ ಬಿಸಿ ಮುಟ್ಟಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಬುರಾರಿ ಮೈದಾನದಲ್ಲಿ ಪ್ರತಿಭಟನೆ ನಡೆಸಿ ಎಂದು ಹೇಳುತ್ತಿದೆ. ಆದರೆ ಅದೊಂದು ಬಹಿರಂಗ ಬಂಧಿಖಾನೆ ಅಷ್ಟೇ. ನಾವು ಆ ಮೈದಾನ ಪ್ರವೇಶಿಸಿದರೆ ನಮ್ಮನ್ನು ಬಂಧಿಸಿ ಕಿರುಕುಳ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಹಾಗಾಗಿ ನಾವು ಆ ಮೈದಾನಕ್ಕೆ ಹೋಗುವುದಿಲ್ಲ. ಬದಲಿಗೆ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡಲಿ. ಇಲ್ಲದಿದ್ದಲ್ಲಿ ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬುರಾರಿ ಮೈದಾನಕ್ಕೆ ಕಳಿಸಿ ಅದನ್ನು ಜೈಲಾಗಿ ಪರಿವರ್ತನೆ ಮಾಡಲು ಪೊಲೀಸರು ಕುತಂತ್ರ ನಡೆಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಎಷ್ಟು ದಿನವಾದರೂ ಸರಿಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಕೇಂದ್ರ ಸಮಿತಿ ನಿರ್ಣಯ ತೆಗೆದುಕೊಳ್ಳುತ್ತದೆ. ನಮ್ಮ ಚಿತ್ತವೇನಿದ್ದರೂ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮಾತ್ರ ಎಂದು ರೈತರು ತಿಳಿಸಿದ್ದಾರೆ.

ರೈತರು ಮಾತುಕತೆ ಪ್ರಸ್ತಾಪ ತಿರಸ್ಕರಿಸಿದ ನಂತರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಹಿರಿಯ ಬಿಜೆಪಿ ಮುಖಂಡರ ಸಭೆ ನಡೆಸಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾರವರ ಮನೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ್ ಭಾಗವಹಿಸಿದ್ದರು ಎನ್ನಲಾಗಿದೆ. ಸಭೆಯಲ್ಲಿ ಏನು ತೀರ್ಮಾನವಾಗಿದೆ ಎಂಬುದು ತಿಳಿದುಬಂದಿಲ್ಲ.

ನವೆಂಬರ್ 25 ರಂದು ರೈತರು ದೆಹಲಿ ಚಲೋ ನಡೆಸಲು ದೆಹಲಿ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಅಲ್ಲಿಂದ ಈ ಐದು ದಿನಗಳಲ್ಲಿ ನೂರಾರು ಬಾರಿ ರೈತರ ಮೇಲೆ ಲಾಠೀಚಾರ್ಜ್ ಮಾಡಲಾಗಿದೆ. ಜಲಫಿರಂಗಿ, ಅಶ್ರುವಾಯು ಸಿಡಿಸಲಾಗಿದೆ. ನೂರಾರು ಕಡೆ ರೈತರನ್ನು ತಡೆಯಲಾಗಿದೆ. ಮಾತ್ರವಲ್ಲದೇ ಇಡೀ ಬಿಜೆಪಿ ಮತ್ತು ಹಲವು ಮಾಧ್ಯಮಗಳು ಇದು ಕಾಂಗ್ರೆಸ್ ರೈತರ ಹೋರಾಟ, ಇವರೆಲ್ಲಾ ರೈತರಲ್ಲ ಎಂದು ಪ್ರಚಾರ ಮಾಡುವ ಮೂಲಕ ಅವಮಾನಿಸಲಾಗಿದೆ. ಆದರೆ ರೈತರು ಮಾತ್ರ ಎದೆಗುಂದಿಲ್ಲ. ಈ ಹೋರಾಟವನ್ನು ಜೀವನ್ಮರಣದ ಪ್ರಶ್ನೆಯನ್ನಾಗಿ ರೈತರು ಭಾವಿಸಿದ್ದಾರೆ. ಹಾಗಾಗಿ ಈ ಕಾಯ್ದೆಗಳನ್ನು ವಾಪಸ್ ಕಳಿಸಿಯೇ ಮನೆಗೆ ತೆರಳುವ ಶಪಥ ಮಾಡಿದ್ದಾರೆ.

ಮಹಿಳಾ ರೈತರು ಹೋರಾಟದಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಾರೆ. ಟ್ರಾಕ್ಟರ್‌ಗಳಲ್ಲಿ ಮಲಗಿ, ರಸ್ತೆ ಬದಿಯೇ ಸ್ನಾನ ಮಾಡಿದರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರ ಆರಂಭದಲ್ಲಿ ಈ ರೈತರ ಹೋರಾಟವನ್ನು ದಮನ ಮಾಡಲು ಯತ್ನಿಸಿತು. ಆದರೆ ಪಂಜಾಬ್, ಹರಿಯಾಣದ ರೈತರು ಸಾಕಷ್ಟು ಸಂಖ್ಯೆಯಲ್ಲಿ ದೆಹಲಿ ಪ್ರವೇಶಿಸಿ ಹೋರಾಟವನ್ನು ತೀವ್ರಗೊಳಿಸಿದರು. ಈಗ ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ. ಆದರೆ ರೈತರು ದೆಹಲಿ ಬಿಟ್ಟು ಕದಲುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಈ ಹೋರಾಟ ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...