Homeಚಳವಳಿಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಮಾಧ್ಯಮಗಳು ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಿರುವುದು ಹೋರಾಟಗಾರರ ಆಕ್ರೋಶವನ್ನು ಹೆಚ್ಚಿಸಿದೆ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ’ದೆಹಲಿ ಚಲೋ’ ಆಂದೋಲನ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಹಿಂದಿ ಮಾಧ್ಯಮ ’ಆಜ್‌ತಕ್’ ರೈತ ಹೋರಾಟಗಾರರನ್ನು ಮಾತನಾಡಿಸಲು ಹೋಗಿ ’ಗೋದಿ ಮಿಡಿಯಾ’ ಎಂದು ಬೈಸಿಕೊಂಡಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಕೇಂದ್ರ ಸರ್ಕಾರ ತಂದಿರುವ ಕಾನೂನಿನ ವಿರುದ್ದ ಸೆಪ್ಟೆಂಬರ್‌ನಿಂದಲೂ ರೈತರು ಹೋರಾಟ ನಡೆಸುತ್ತಿದ್ದು ಮಾಧ್ಯಮಗಳು ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಲೇ ಬಂದಿದೆ. ಪ್ರಸ್ತುತ ’ದೆಹಲಿ ಚಲೋ’ ಹೋರಟದ ಬಗ್ಗೆ ನಕರತ್ಮಕವಾಗಿ ಬಿಂಬಿಸಿರುವುದು ಕೂಡಾ ರೈತರ ಆಕ್ರೋಶವನ್ನು ಇನ್ನೂ ಹೆಚ್ಚಿಸಿದೆ.

ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ಇದೀಗ ಹಿಂದಿ ಸುದ್ದಿ ಮಾಧ್ಯಮ ಆಜ್‌ತಕ್ ವರದಿಗಾರರೊಬ್ಬರು ಹೋರಾಟ ನಿರತ ರೈತರೊಬ್ಬರನ್ನು ಮಾತನಾಡಿಸಿದಾಗ, “ಸತ್‌ಸ್ರೀ ಅಕಾಲ್ ಗೋದಿ ಮೀಡಿಯಾ” ಎಂದು ಅವರನ್ನು ಸ್ವಾಗತಿಸಿದ್ದಾರೆ. ವಿಡಿಯೋದಲ್ಲಿ, “ನಾವು ಪಂಜಾಬ್‌‌ನಲ್ಲಿ ಎರಡು ತಿಂಗಳಿನಿಂದ ಪ್ರತಿಭನೆ ಮಾಡುತ್ತಿದ್ದೇವೆ ನೀವು ಎಲ್ಲಿ ಹೋಗಿದ್ದೀರಿ” ಎಂದು ಪ್ರಶ್ನಿಸಿದ್ದು ಇದರಿಂದ ಮುಜುಗರಕ್ಕೊಳಗಾದ ಅವರು ಅಲ್ಲಿಂದ ತೆರಳಿದ್ದಾರೆ. ಜೊತೆಗೆ “ಗೋದಿ ಮೀಡಿಯಾ ಮುರ್ದಾಬಾದ್” ಎಂದು ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ಪರವಾಗಿ ನಿಂತು ನಿರಂತರ ಹೊಗಳುವ ಮಾಧ್ಯಮಗಳಿಗೆ ಬಳಸುವ ಪದವಾಗಿ ’ಗೋದಿ ಮೀಡಿಯಾ’ ಪದವನ್ನು ಬಳಸಲಾಗುತ್ತಿದೆ. ಈ ಹಿಂದೆ ಜೆಎನ್‌ಯುನಲ್ಲಿ ಕೂಡಾ ಕೇಂದ್ರ ಸರ್ಕಾರದ ಪರವಾಗಿರುವ ಮಾಧ್ಯಮಗಳನ್ನು ಇದೇ ರೀತಿ ಕರೆಯಲಾಗಿತ್ತು. ಸಿಎಎ ವಿರುದ್ದದ ಹೋರಾಟದ ಪ್ರತಿಭಟನಾಕಾರರು ಕೂಡಾ ”ಗೋದಿ ಮೀಡಿಯಾ” ಎಂದು ಕರೆದು ಹೋರಾಟವನ್ನು ನಿರ್ಲಕ್ಷ್ಯವಹಿಸುತ್ತಿರುವುದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ದೆಹಲಿಯ ಗಡಿಗಳಲ್ಲಿ ಜಮಾಯಿಸಿದ್ದರಾದರೂ ಹಲವು ರಾಷ್ಟ್ರೀಯ ಮಾಧ್ಯಮಗಳು ಆಂದೋಲನವನ್ನು ಗಣನೆಗೆ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ. ಅದನ್ನೂ ಮೀರಿ ದೇಶದ ಹಲವು ರಾಜ್ಯದ ರೈತರು ದೆಹಲಿ ಚಲೋಗೆ ಹೊರಟಿದ್ದಾರೆ. ಚಳುವಳಿ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ನಿನ್ನೆ ತಿರಸ್ಕರಿಸಿದ ಹೋರಾಟಗಾರರು, ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...