Homeಮುಖಪುಟಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ದಿಢೀರ್ ಸ್ಥಾಪನೆಯಾದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಇನ್ನೂ ಪೂರ್ಣವಾಗಿ ಅಸ್ತಿತ್ವಕ್ಕೆ ಬಂದಿಲ್ಲ. ಸಂಪುಟ ಸಭೆ ಒಪ್ಪಿಗೆಯನ್ನೂ ಪಡೆದುಕೊಂಡಿಲ್ಲ. ಅನುದಾನವನ್ನೂ ನಿಗದಿ ಮಾಡಿಲ್ಲ. ಆದರೆ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಹಲವರ ನಡುವೆ ತೆರೆಮರೆಯಲ್ಲೇ ಪೈಪೋಟಿ ಎದ್ದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಬಿಜೆಪಿ ಬೆಂಬಲಿಗರನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಸಾಧ್ಯವಿಲ್ಲದ ಮಾತು. ಹಾಗಾಗಿ ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು  ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಪೈಪೋಟಿ ನಡೆಯುತ್ತಿದೆ.

ನಿವೃತ್ತ ಐಎಫ್ಎಸ್ ಅಧಿಕಾರಿ ಚಿಕ್ಕಪ್ಪಯ್ಯ, ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ನಿವೃತ್ತ ತಹಶೀಲ್ದಾರ್ ಜಿ.ಎಂ. ಸಣ್ಣಮುದ್ದಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚಂದ್ರಶೇಖರಗೌಡ, ಚಿಕ್ಕಣ್ಣಸ್ವಾಮಿ, ದೇವಾಲಯದ ಪೂಜಾರಿ ಪಾಪಣ್ಣ, ಶ್ರೀರಂಗ ಯಾದವ್ ಮೊದಲಾದವರು ಆಕಾಂಕ್ಷಿಗಳಾಗಿದ್ದಾರೆ. ಸಣ್ಣಮುದ್ದಯ್ಯ ವಿರುದ್ದ ಸಾಕಷ್ಟು ದೂರುಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಸಣ್ಣಮುದ್ದಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬಾರದು ಎಂಬ ದೂರುಗಳು ಬಿಜೆಪಿ ಮುಖಂಡರಿಗೆ ರವಾನೆಯಾಗಿವೆ.

ಇನ್ನೊಂದೆಡೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆಗೆ ಒತ್ತಾಯ ವ್ಯಕ್ತವಾಗುತ್ತಿದೆ. ಇದಕ್ಕೆ  ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ನೇತೃತ್ವ ವಹಿಸಿದ್ದಾರೆ. ಹೆಸರು ಬದಲಾದರೆ ತಾನೇ ಅಧ್ಯಕ್ಷ ಎಂದು ಹೇಳಿಕೊಂಡು ಒಡಾಡುತ್ತಿದ್ದಾರೆ. ಹೀಗಾಗಿ ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ. ಹಾಗಾಗಿ ಬಿಜೆಪಿ ದಾಳ ಉರುಳಿಸುತ್ತಲೇ ಇದೆ. ಇದನ್ನು ಅರ್ಥ ಮಾಡಿಕೊಳ್ಳದ ಕಾಡುಗೊಲ್ಲ ಸಮುದಾಯ ವ್ಯರ್ಥ ಕಸರತ್ತು ನಡೆಸುತ್ತಿದೆ ಎಂಬ ವಿಶ್ಲೇಷಣೆ ನಡಯುತ್ತಿದೆ.

ಯಾದವರು ಒಂದು ಕಡೆ ಸಭೆ ನಡೆಸಿದರೆ, ಕಾಡುಗೊಲ್ಲರು ಮತ್ತೊಂದು ಕಡೆ ಸಭೆ ನಡೆಸಿ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಯಾದವ (ಗೊಲ್ಲ) ಸಂಘದ ರಾಜ್ಯಧ್ಯಕ್ಷ, ಮಾಜಿ ಸಚಿವ ಎ.ಕೃಷ್ಣಪ್ಪ ಅಳಿಯ ಮತ್ತು ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ ಡಿಸೆಂಬರ್ 6ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದು, ಕಾಡುಗೊಲ್ಲ ಎಂಬುದನ್ನು ಗೊಲ್ಲ ಅಭಿವೃದ್ಧಿ ನಿಗಮವಾಗಿ ಬದಲಾಯಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ತಯಾರಿ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದೇ ಕಾರಣವನ್ನು ಮುಂದಿಟ್ಟುಕೊಂಡು ನವೆಂಬರ್ 29 ರಂದು ತುಮಕೂರಿನಲ್ಲಿ ರಾಜ್ಯಮಟ್ಟದ ಕಾಡುಗೊಲ್ಲ ಸಮುದಾಯದ ಮುಖಂಡರ ಸಭೆ ನಡೆದಿದೆ. ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಕಾಡುಗೊಲ್ಲ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ಪ್ರಮುಖರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ನಾನುಗೌರಿ.ಕಾಂಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚೆಂಗಾವರ ಕರಿಯಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಸಭೆಯಲ್ಲಿ ಪಾಲ್ಗೊಂಡು ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ನೀಡಿದರು. ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿದ್ದು ಸಂಘವನ್ನು ಬಿಜೆಪಿಗೆ ಒತ್ತೆ ಇಟ್ಟರೆ ಹೇಗೆ? ಜನಾಂಗದ ಸಮಸ್ಯೆಗಳನ್ನು ಪರಿಹರಿಸುವುದು ಹೇಗೆ ಎಂಬ ಪ್ರಶ್ನೆಯೂ ವ್ಯಕ್ತವಾಯಿತು. ಇದಕ್ಕೆ ಮುಖಂಡರು ಪಕ್ಷವೇ ಬೇರೆ, ಸಂಘವೇ ಬೇರೆ ಎಂಬ ಉತ್ತರ ನೀಡಿದರು ಎಂದು ಹೇಳಲಾಗಿದೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯವಾಗಿದೆ. ಅದು ಕಾನೂನುಬದ್ದವಾಗಿಲ್ಲ. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿಲ್ಲ. ನಿಗಮ ಊರ್ಜಿತವಾಗುತ್ತದೆಯೇ ಎಂಬ ಪ್ರಶ್ನೆ ಸಮುದಾಯದ ಕೆಲ ಮುಖಂಡರನ್ನು ಕಾಡತೊಡಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡುಗೊಲ್ಲರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...