Homeಚಳವಳಿದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ನೀತಿಗಳ ವಿರುದ್ದ ದೇಶದಾದ್ಯಂತ ರೈತರು ನಡೆಸುತ್ತಿರುವ ಐತಿಹಾಸಿಕ ಹೋರಾಟದಲ್ಲಿ ನೂರಾರು ಮಹಿಳಾ ರೈತರು ಕೂಡಾ ಭಾಗವಹಿಸಿದ್ದಾರೆ. ಹೋರಾಟವು ಐದನೇ ದಿನಕ್ಕೆ ಕಾಲಿಟ್ಟಿದ್ದು ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ನರೆದಿದ್ದು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ತಮ್ಮ ಆಹಾರವನ್ನು ತಯಾರಿ ಮಾಡಿ ಅದನ್ನು ಇತರರಿಗೂ ಹಂಚುವ ಮೂಲಕ ಮಹಿಳೆಯರು ಈ ಹೋರಾಟಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಪಟಿಯಾಲ ಮೂಲದ 70 ವರ್ಷದ ಮಹಿಳೆ ಗುರುದೇವ್ ಕೌರ್ ಕಳೆದ ಮೂರು ದಿನಗಳಿಂದ ದೆಹಲಿ ಸಿಂಗೂ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. “ನನ್ನ ಆರೋಗ್ಯದ ಕಾಳಜಿ ವಹಿಸಲು ಕುಟುಂಬ ಸದಸ್ಯರಿಂದ ಪ್ರತಿ ಎರಡು ಗಂಟೆಗಳಿಗೊಮ್ಮೆ ಕರೆ ಬರುತ್ತದೆ. ಪಂಜಾಬ್‌ನಲ್ಲಿ ಕಳೆದ ಎರಡು ತಿಂಗಳಿನಿಂದ ನಾವು ಪ್ರತಿದಿನ ನಮ್ಮ ಕ್ರಿಯಾ ಯೋಜನೆ ಕುರಿತು ಸಭೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕೊನೆಯ ಉಸಿರಾಟದವರೆಗೂ ನಾವು ಆಂದೋಲನವನ್ನು ಬೆಂಬಲಿಸಲು ಸಿದ್ಧರಿದ್ದೇವೆ” ಎಂದು ಅವರು ಹೇಳಿದ್ದಾರೆ.

 

“ನನಗೆ ತುಂಬಾ ವಯಸ್ಸಾದ ಕಾರಣ ನನ್ನ ಬಗ್ಗೆ ಚಿಂತಿತರಾಗಿದ್ದಾರೆ. ಆದರೆ ನಾನು ಒಬ್ಬಂಟಿಯಾಗಿಲ್ಲ. ಕಾರಣ ನನ್ನ ಬಗ್ಗೆ ಕಾಳಜಿ ವಹಿಸಲು ಇಲ್ಲಿ ನೂರಾರು ಮಹಿಳೆಯರು ಇದ್ದಾರೆ ಮತ್ತು ನಾವು ಪರಸ್ಪರ ಸಹಕಾರದಿಂದ ಇದ್ದೇವೆ. ನಮ್ಮ ದೈನಂದಿನ ಔಷಧಿಗಳು ಮತ್ತು ಇತರ ಅವಶ್ಯಕತೆಗಳನ್ನು ನಮ್ಮೊಂದಿಗೆ ತಂದಿದ್ದೇವೆ ” ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ಪ್ರತಿಭಟನಾಕಾರರಾದ 50 ವರ್ಷದ ಚರಣಜೀತ್ ಕೌರ್ ಅವರು ಹೇಳುವಂತೆ, “ತಮ್ಮ ಟ್ರಾಕ್ಟರ್ ಮುಖ್ಯ ಪ್ರತಿಭಟನಾ ಸ್ಥಳದಿಂದ ಕನಿಷ್ಠ ನಾಲ್ಕು ಕಿಲೋಮೀಟರ್ ದೂರದಲ್ಲಿದೆ. ಮಧ್ಯಾಹ್ನ ನಮ್ಮ ರೈತ ನಾಯಕರು ಭಾಷಣಗಳನ್ನು ಮಾಡುವ ಸ್ಥಳಕ್ಕೆ ಹೋಗಿ ನಾವು ಕುಳಿತುಕೊಳ್ಳುತ್ತೇವೆ. ಕೃಷಿ ಕಾನೂನುಗಳಿಗೆ ವಿರುದ್ಧವಾಗಿ ಘೋಷಣೆಗಳನ್ನು ಕೂಗುತ್ತೇವೆ. ಸಂಜೆಯ ಹೊತ್ತಿಗೆ, ನಾವು ನಮ್ಮ ಟ್ರಾಕ್ಟರ್ ಟ್ರಾಲಿಗಳಿಗೆ ಹಿಂತಿರುಗುತ್ತೇವೆ, ಅದು ಈಗ ನಮ್ಮ ಮನೆಯಾಗಿದೆ” ಎಂದು ಹೇಳಿದ್ದಾರೆ.

“ನಾವು ಪಡಿತರವನ್ನು ಹೇರಳವಾಗಿ ತಂದಿದ್ದೇವೆ. ನಮಗೆ 5-6 ತಿಂಗಳುಗಳ ಕಾಲ ಉಳಿಯಲು ಆಹಾರವಿದೆ. ನಾವು ದೆಹಲಿಗೆ ತೆರಳಲು ನಿರ್ಧರಿಸಿದಾಗಲೆ ಪ್ರತಿಯೊಬ್ಬರೂ ವಿಭಿನ್ನ ವಸ್ತುಗಳನ್ನು ನೀಡಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿದಾಗ ಮಾತ್ರ ಮರಳುತ್ತೇವೆ” ಎಂದು ಪಟಿಯಾಲಕ್ಕೆ ಹತ್ತಿರವಿರುವ ಫತೇಘಡ್‌ನ ಇನ್ನೊಬ್ಬ ರೈತ ಮಹಿಳೆ 62 ವರ್ಷದ ಬಾಲ್ ದೇವ್ ಕೌರ್ ಹೇಳಿದ್ದಾರೆ.

ಲಕ್ಷಾಂತರ ರೈತರು ದೆಹಲಿಯ ಸಿಂಗು ಗಡಿಯನ್ನು ತಲುಪಿ ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ, ಆದರೆ  ರಾಜಧಾನಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ದೆಹಲಿ ಪೊಲೀಸರು ಬುರಾರಿಯಲ್ಲಿರುವ ಸಂತ ನಿರಂಕರಿ ಮೈದಾನವನ್ನು ರೈತರಿಗೆ ತಮ್ಮ ಆಂದೋಲನವನ್ನು ಮುಂದುವರೆಸಲು ಕೇಳಿಕೊಂಡಿದ್ದರಾದರೂ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...