Homeಮುಖಪುಟಉತ್ತರ ಪ್ರದೇಶದ ಪತ್ರಕರ್ತ ರಾಕೇಶ್ ಸಿಂಗ್ ಹತ್ಯೆ ಪ್ರಕರಣ, ಮೂವರ ಬಂಧನ

ಉತ್ತರ ಪ್ರದೇಶದ ಪತ್ರಕರ್ತ ರಾಕೇಶ್ ಸಿಂಗ್ ಹತ್ಯೆ ಪ್ರಕರಣ, ಮೂವರ ಬಂಧನ

ಆರೋಪಿ ಕೇಶವಾನಂದ್ ಮಿಶ್ರಾ ಅವರ ತಾಯಿ ಹಳ್ಳಿಯ ಮುಖ್ಯಸ್ಥರಾಗಿದ್ದು, ಹಣವನ್ನು ಅಕ್ರಮವಾಗಿ ಬಳಸುತ್ತಿರುವುದನ್ನು ಪತ್ರಕರ್ತ ರಾಕೇಶ್ ಸಿಂಗ್ ಬಹಿರಂಗಪಡಿಸಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದ್ದ 35 ವರ್ಷದ ಪತ್ರಕರ್ತ ಮತ್ತು ಆತನ ಸ್ನೇಹಿತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಬಲರಾಂಪುರ ಪೊಲೀಸರು ತಿಳಿಸಿದ್ದಾರೆ.

ಪತ್ರಕರ್ತ ರಾಕೇಶ್ ಸಿಂಗ್ ಮತ್ತು ಅವರ ಸ್ನೇಹಿತ ಪಿಂಟು ಸಾಹು ಅವರನ್ನು ಬಹದ್ದೂರ್‌ಪುರ ಕ್ರಾಸಿಂಗ್ ಬಳಿ ಕೊಲೆ ಮಾಡಲಾಗಿತ್ತು. ಆರೋಪಿಗಳಾದ ಲಲಿತ್ ಮಿಶ್ರಾ, ಕೇಶವಾನಂದ್ ಮಿಶ್ರಾ ಅಲಿಯಾಸ್ ರಿಂಕು ಮತ್ತು ಅಕ್ರಮ್ ಅಲಿ ಅವರನ್ನು ಬಂಧಿಸಲಾಗಿದೆ. ಈ ಮೂವರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ   ಎಂದು ಬಲರಾಂಪುರದ ಪೊಲೀಸ್ ವರಿಷ್ಠಾಧಿಕಾರಿ ದೇವರಂಜನ್ ವರ್ಮಾ ತಿಳಿಸಿದ್ದಾರೆ.

ಆರೋಪಿ ಕೇಶವಾನಂದ್ ಮಿಶ್ರಾ ಅವರ ತಾಯಿ ಹಳ್ಳಿಯ ಮುಖ್ಯಸ್ಥರಾಗಿದ್ದು, ಹಳ್ಳಿಯ ಹಣವನ್ನು ಅಕ್ರಮವಾಗಿ ಬಳಸುತ್ತಿರುವುದನ್ನು ಪತ್ರಕರ್ತ ರಾಕೇಶ್ ಸಿಂಗ್ ಬಹಿರಂಗಪಡಿಸಿದ್ದಾರೆ ಎಂದು ದೇವರಂಜನ್ ವರ್ಮಾ ಹೇಳಿದ್ದಾರೆ.

ಈ ಘಟನೆಯಿಂದ ದ್ವೇಷ ಸಾಧಿಸುತ್ತಿದ್ದ ಆರೋಪಿಗಳು, ಮಾತುಕತೆಯ ನೆಪದಲ್ಲಿ ಪತ್ರಕರ್ತರ ಮನೆಗೆ ಹೋಗಿದ್ದಾರೆ. ನಂತರ ಆರೋಪಿಗಳು ರಾಕೇಶ್ ಸಿಂಗ್ ಮತ್ತು ಅವರ ಸ್ನೇಹಿತ ಪಿಂಟು ಸಾಹುರನ್ನು ಮದ್ಯ ಸೇವಿಸುವಂತೆ ಮಾಡಿ, ತದನಂತರ ಹತ್ಯೆ ಮಾಡಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ಹತ್ಯೆ ಮಾಡಿದ ನಂತರ ಮನೆಯನ್ನು ಸುಟ್ಟುಹಾಕಲು ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಅನ್ನು ಬಳಸಲಾಗಿದ್ದು, ಇದರಿಂದಾಗಿ ಕೊಲೆ  ಆಕಸ್ಮಿಕ ಅಪಘಾತದಂತೆ ಕಾಣುತ್ತದೆ ಎಂದು ಆರೋಪಿಗಳು ಯೋಜನೆ ಹಾಕಿಕೊಂಡಿದ್ದು.

“ರಾಸಾಯನಿಕ ಬಳಸಿ ಮನೆ ಸುಡಲು, ಲಲಿತ್ ಮಿಶ್ರಾ ಮತ್ತು ಕೇಶವಾನಂದ್ ಮಿಶ್ರಾ ಈ ರೀತಿಯ ಘಟನೆಗಳನ್ನು ನಿರ್ವಹಿಸುವಲ್ಲಿ ಪರಿಣತರಾಗಿರುವ ಅಕ್ರಮ್ ಅಲಿ ಸಹಾಯ ಪಡೆದಿದ್ದರು” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಲರಾಂಪುರ ಜಿಲ್ಲಾಡಳಿತ ಪತ್ರಕರ್ತನ ಪತ್ನಿಗೆ ಪರಿಹಾರವಾಗಿ 5 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸಿತ್ತು. ಚೆಕ್ ಅನ್ನು ಸಂತ್ರಸ್ತ ಕುಟುಂಬಕ್ಕೆ ಶಾಸಕ ಪಾಲ್ತುರಾಮ್ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪತ್ರಕರ್ತ ರಾಕೇಶ್ ಸಿಂಗ್ ಪತ್ನಿ ವಿಶಾ ಸಿಂಗ್ ಅವರಿಗೆ ಉದ್ಯೋಗ ನೀಡುವುದಾಗಿ ಬಲರಾಂಪುರ್ ಚಿನಿ ಮಿಲ್ಸ್‌ನ ಆಡಳಿತವು ಜಿಲ್ಲಾಡಳಿತಕ್ಕೆ ಭರವಸೆ ನೀಡಿದೆ. ಜೊತೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಆಡಳಿತ ಹೇಳಿದೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...