Homeಚಳವಳಿ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ರೈತರು ಎತ್ತಿರುವ ಸಮಸ್ಯೆಗಳು ಮಾನ್ಯವಾಗಿವೆ ಮತ್ತು ಅವು ದೇಶದ ಗಮನ ಸೆಳೆಯುವಲ್ಲಿ ಅರ್ಹವಾಗಿವೆ" ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕಳೆದ 6 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆಗೆ ರಾಜಕೀಯ ಪಕ್ಷಗಳು ತಮ್ಮ ಬೆಂಬಲ ಸೂಚಿಸಿವೆ. ಕೇರಳದ ಪಿಣರಾಯಿ ವಿಜಯನ್ ನೇತೃತ್ವ ಸರ್ಕಾರವು ರೈತಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ರೈತರು ದೇಶದ ಜೀವನಾಡಿ, ನಾವೇಲ್ಲರೂ ಅವರೊಂದಿಗೆ ನಿಲ್ಲುವ ಸಮಯ ಇದು ಎಂದಿದ್ದಾರೆ.

ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮಾತನ್ನು ಆಲಿಸಿ ಮತ್ತು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇರಳ ಮುಖ್ಯಮಂತ್ರಿ, ರೈತರನ್ನು ದೇಶದ “ಜೀವನಾಡಿ” ಎಂದು ಬಣ್ಣಿಸಿದ್ದು,  ಅವರೊಂದಿಗೆ ನಿಲ್ಲುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

“ನಮ್ಮ ರೈತರೊಂದಿಗೆ ನಿಲ್ಲುವ ಸಮಯ ಇದು. ಪ್ರತಿಭಟನೆ ನಡೆಸುತ್ತಿರುವ ರೈತರ ಮಾತುಗಳನ್ನು ಆಲಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ನಾವು ಭಾರತ ಸರ್ಕಾರವನ್ನು ಕೋರುತ್ತೇವೆ. ನಮ್ಮ ಇಡೀ ದೇಶವು ಈಗ ಒಗ್ಗೂಡಬೇಕಾಗಿದೆ. ಏಕೆಂದರೆ ರೈತರು ಈ ದೇಶದ ಜೀವನಾಡಿ” ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

ಕೇರಳ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ಕೂಡ, ರೈತರು ಎತ್ತಿರುವ ಸಮಸ್ಯೆಗಳು ಮಾನ್ಯ ಮಾಡುವಂತಹವುಗಳು ಮತ್ತು ಅವು ದೇಶದ ಗಮನ ಸೆಳೆಯಲು ಅರ್ಹವಾಗಿವೆ. ಹಾಗಾಗಿ ರೈತರೊಂದಿಗೆ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕೃಷಿ ಮಸೂದೆಯನ್ನು ವಿರೋಧಿಸುತ್ತಿರುವ ರೈತರಿಗೆ ನಮ್ಮ ಬೆಂಬಲವಿದೆ. ರೈತರೊಂದಿಗೆ ಮಾತುಕತೆ ನಡೆಸಿ ಅವರ ಕಳವಳಗಳನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ಆಲಿಸುವಂತೆ ನಾವು ಭಾರತ ಸರ್ಕಾರವನ್ನು ಕೋರುತ್ತೇವೆ. ರೈತರು ಎತ್ತಿರುವ ಸಮಸ್ಯೆಗಳು ಮಾನ್ಯವಾಗಿವೆ ಮತ್ತು ಅವು ದೇಶದ ಗಮನ ಸೆಳೆಯುವಲ್ಲಿ ಅರ್ಹವಾಗಿವೆ” ಎಂದು ಟ್ವೀಟ್ ಮಾಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ನು, ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. “ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಬದಲಾಗಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಈ ಹೋರಾಟದಲ್ಲಿ ಅನ್ನದಾತರ ಜೊತೆ ನಾವಿದ್ದೇವೆ” ಎಂದು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...