Homeಚಳವಳಿರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತವಷ್ಟೇ ಅಲ್ಲದೆ ವಿದೇಶಗಳ ಹಲವು ರಾಜಕೀಯ ನಾಯಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಯುನೈಟೆಡ್ ಕಿಂಗ್‌ಡಮ್, ಕೆನಡಾ ಮತ್ತು ಅಮೆರಿಕಾದ ಹಲವಾರು ರಾಜಕೀಯ ಮುಖಂಡರು ರೈತರೊಂದಿಗೆ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪ್ರತಿಭಟನೆಗಳನ್ನು ಮೋದಿ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡ್ “ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಬೆಂಬಲಿಸುತ್ತದೆ. ಆದರೆ ಭಾರತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾಧ್ಯವಿರುವ ಎಲ್ಲಾ ಮಾರ್ಗಗಳ ಮೂಲಕ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತೇನೆ” ಎಂದಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ಲೇಬರ್‌ ಪಾರ್ಟಿ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ದೆಹಲಿ ಚಲೋ ಪ್ರತಿಭಟನೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ’ಖಾಸಗೀಕರಣದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಪಂಜಾಬ್ ಮತ್ತು ಭಾರತದ ಇತರ ಭಾಗಗಳ ರೈತರೊಂದಿಗೆ ನಾನು, ನಮ್ಮ ಕುಟುಂಬ ಮತ್ತು ಸ್ನೇಹಿತರು ನಿಲ್ಲುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಮತ್ತೊಬ್ಬ ಲೇಬರ್‌ ಪಾರ್ಟಿ ಸಂಸದ ಜಾನ್ ಮೆಕ್‌ಡೊನೆಲ್ ಅವರು “ನಾನು ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರ ಮಾತುಗಳನ್ನು ಒಪ್ಪುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಕೆನಡಾದ ಜಗ್ಮೀತ್ ಸಿಂಗ್ ನೇತೃತ್ವದ ನ್ಯೂ ಡೆಮಾಕ್ರಟಿಕ್ ಪಕ್ಷದಿಂದ ರೈತರಿಗೆ ಬೆಂಬಲ ವ್ಯಕ್ತವಾಗಿದೆ.

“ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ವಿರುದ್ಧ ಭಾರತೀಯ ಸರ್ಕಾರ ನಡೆಸುತ್ತಿರುವ ಹಿಂಸಾಚಾರವು ಭೀಕರವಾಗಿದೆ. ನಾನು ಪಂಜಾಬ್ ಮತ್ತು ಭಾರತದಾದ್ಯಂತದ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸುತ್ತೇನೆ. ಹಿಂಸಾಚಾರಕ್ಕಿಂತ ಶಾಂತಿಯುತ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾನು ಭಾರತೀಯ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ಒಂಟಾರಿಯೊ ಪ್ರಾಂತೀಯ ಸಂಸತ್ತಿನಲ್ಲಿ ಬ್ರಾಂಪ್ಟನ್ ಪೂರ್ವವನ್ನು ಪ್ರತಿನಿಧಿಸುವ ಗುರ್‌ರತನ್ ಸಿಂಗ್ ಅವರು ಸದನದಲ್ಲಿ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.

“ಭಾರತದಲ್ಲಿ ರೈತರು ಸರ್ಕಾರದಿಂದ ಆಕ್ರಮಣಕ್ಕೊಳಗಾಗಿದ್ದಾರೆ. ಅದಕ್ಕಾಗಿಯೇ ಭಾರತ ಸರ್ಕಾರವು ಈ ಅನ್ಯಾಯದ ಕಾನೂನುಗಳ ವಿರುದ್ಧ ರೈತರೊಂದಿಗೆ ನಿಲ್ಲುವಂತೆ ನಾನು ಈ ಸದನವನ್ನು ಕೇಳುತ್ತಿದ್ದೇನೆ” ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಂಸದ ಗುರ್‌ರತನ್ ಸಿಂಗ್, ರೈತರ ಮೇಲೆ ಪೊಲಿಸರು ನಡೆಸಿದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ  “ಈ ಚಿತ್ರಗಳು ಭಯಾನಕವಾಗಿವೆ. ನಾನು ರೈತರ ಕುಟುಂಬದಿಂದ ಬಂದವನು. ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುವ ಕಾನೂನುಗಳನ್ನು ವಿರೋಧಿಸುವ ರೈತರ ನೋವು ಮತ್ತು ಹೋರಾಟವನ್ನು ನಾನು ಅನುಭವಿಸುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸರ್ಕಾರ ದಾಳಿ ನಡೆಸುತ್ತಿದೆ. ನಾನು ರೈತರ ಜೊತೆ ಇದ್ದೇನೆ ಎಂದು ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಮೆರಿಕಾದಲ್ಲಿ ಇಲ್ಲಿಯವರೆಗೆ ಪ್ರತಿಭಟನೆಗೆ ಬಹಿರಂಗವಾಗಿ ತಮ್ಮ ಪ್ರತಿಕ್ರಿಯೆಯನ್ನು ಹೇಳಿದವರು ಕಡಿಮೆಯೇ. ಆದರೆ, ವಕೀಲರು ಮತ್ತು ರಿಪಬ್ಲಿಕನ್ ಪಕ್ಷದ ಅಧಿಕಾರಿ ಹರ್ಮೀತ್ ಕೆ ಧಿಲ್ಲಾನ್ ಮಾತ್ರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

“ಪಂಜಾಬ್ ಮೂಲದ ರೈತರ ವಂಶಸ್ಥರಾಗಿ, ಪಂಜಾಬಿ ರೈತರು ತಮ್ಮ ಹೊಲಗಳು, ಜೀವನ ವಿಧಾನ ಮತ್ತು ಸಂಸ್ಕೃತಿಯನ್ನು ನಾಶಪಡಿಸುವ ಭಾರತೀಯ ಸರ್ಕಾರದ ದೊಡ್ಡ-ಕಾರ್ಪೊರೇಷನ್ ಪರ ಕೃಷಿ ಮಸೂದೆಯನ್ನು ಪ್ರತಿಭಟಿಸಿದ್ದಕ್ಕಾಗಿ ಹಲ್ಲೆಗೊಳಗಾಗಿದ್ದನ್ನು ನೋಡಲು ನನಗೆ ನೋವಾಗುತ್ತಿದೆ. ಪ್ರಧಾನಿ ಮೋದಿಯವರೇ ರೈತರ ಸಮಸ್ಯೆಗಳನ್ನು ಆಲಿಸಿ, ಅವರನ್ನು ಭೇಟಿ ಮಾಡಿ, ಮತ್ತು ರಾಜಿ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ಜಗ್ಮೀತ್ ಸಿಂಗ್ ಮತ್ತು ತನ್ಮನ್‌ಜೀತ್ ಸಿಂಗ್ ಧೇಸಿ ಅವರಂತಹ ನಾಯಕರು ಈ ಹಿಂದೆಯೂ ಮೋದಿ ಸರ್ಕಾರವನ್ನು, ಕಾಶ್ಮೀರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಮತ್ತು ಪ್ರತಿಭಟನೆಯನ್ನು ಮೋದಿ ಸರ್ಕಾರ ನಿಭಾಯಿಸುತ್ತಿರುವ ಕುರಿತ ಟೀಕೆಗಳು ಕೇವಲ ಪಂಜಾಬ್ ಮೂಲದ ರಾಜಕಾರಣಿಗಳಾದ ಧೇಸಿ, ಗಿಲ್, ಜಗ್ಮೀತ್ ಸಿಂಗ್, ಗುರಾರತನ್ ಸಿಂಗ್ ಮತ್ತು ಸಾರಾ ಸಿಂಗ್ ಅವರಿಂದ ಮಾತ್ರ ಬಂದಿಲ್ಲ. ಜ್ಯಾಕ್, ಹ್ಯಾರಿಸ್, ಜಾನ್ ಮೆಕ್‌ಡೊನೆಲ್, ಕೆವಿನ್ ಯಾರ್ಡ್ ಮತ್ತು ಆಂಡ್ರಿಯಾ ಹೊರ್ವಾತ್ ಕೂಡ ತಮ್ಮ ಪ್ರತಿರೋಧ ನೀಡಿದ್ದಾರೆ.

ಭಾರತದ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿರುವ ಬಹುತೇಕ ಎಲ್ಲಾ ರಾಜಕೀಯ ನಾಯಕರು ಆಯಾ ದೇಶಗಳೊಳಗಿನ ವಿರೋಧ ಪಕ್ಷಗಳ ನಾಯಕರು. ಇದು ಮೋದಿ ಸರ್ಕಾರದ ಮೇಲೆ ಅಂತರರಾಷ್ಟ್ರೀಯ ಒತ್ತಡಕ್ಕೆ ಕಾರಣವಾಗುವ ಸಂಭವವಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...