Homeಚಳವಳಿರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತವಷ್ಟೇ ಅಲ್ಲದೆ ವಿದೇಶಗಳ ಹಲವು ರಾಜಕೀಯ ನಾಯಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಯುನೈಟೆಡ್ ಕಿಂಗ್‌ಡಮ್, ಕೆನಡಾ ಮತ್ತು ಅಮೆರಿಕಾದ ಹಲವಾರು ರಾಜಕೀಯ ಮುಖಂಡರು ರೈತರೊಂದಿಗೆ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪ್ರತಿಭಟನೆಗಳನ್ನು ಮೋದಿ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡ್ “ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಬೆಂಬಲಿಸುತ್ತದೆ. ಆದರೆ ಭಾರತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾಧ್ಯವಿರುವ ಎಲ್ಲಾ ಮಾರ್ಗಗಳ ಮೂಲಕ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತೇನೆ” ಎಂದಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ಲೇಬರ್‌ ಪಾರ್ಟಿ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ದೆಹಲಿ ಚಲೋ ಪ್ರತಿಭಟನೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ’ಖಾಸಗೀಕರಣದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಪಂಜಾಬ್ ಮತ್ತು ಭಾರತದ ಇತರ ಭಾಗಗಳ ರೈತರೊಂದಿಗೆ ನಾನು, ನಮ್ಮ ಕುಟುಂಬ ಮತ್ತು ಸ್ನೇಹಿತರು ನಿಲ್ಲುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಮತ್ತೊಬ್ಬ ಲೇಬರ್‌ ಪಾರ್ಟಿ ಸಂಸದ ಜಾನ್ ಮೆಕ್‌ಡೊನೆಲ್ ಅವರು “ನಾನು ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರ ಮಾತುಗಳನ್ನು ಒಪ್ಪುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಕೆನಡಾದ ಜಗ್ಮೀತ್ ಸಿಂಗ್ ನೇತೃತ್ವದ ನ್ಯೂ ಡೆಮಾಕ್ರಟಿಕ್ ಪಕ್ಷದಿಂದ ರೈತರಿಗೆ ಬೆಂಬಲ ವ್ಯಕ್ತವಾಗಿದೆ.

“ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ವಿರುದ್ಧ ಭಾರತೀಯ ಸರ್ಕಾರ ನಡೆಸುತ್ತಿರುವ ಹಿಂಸಾಚಾರವು ಭೀಕರವಾಗಿದೆ. ನಾನು ಪಂಜಾಬ್ ಮತ್ತು ಭಾರತದಾದ್ಯಂತದ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸುತ್ತೇನೆ. ಹಿಂಸಾಚಾರಕ್ಕಿಂತ ಶಾಂತಿಯುತ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾನು ಭಾರತೀಯ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ಒಂಟಾರಿಯೊ ಪ್ರಾಂತೀಯ ಸಂಸತ್ತಿನಲ್ಲಿ ಬ್ರಾಂಪ್ಟನ್ ಪೂರ್ವವನ್ನು ಪ್ರತಿನಿಧಿಸುವ ಗುರ್‌ರತನ್ ಸಿಂಗ್ ಅವರು ಸದನದಲ್ಲಿ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.

“ಭಾರತದಲ್ಲಿ ರೈತರು ಸರ್ಕಾರದಿಂದ ಆಕ್ರಮಣಕ್ಕೊಳಗಾಗಿದ್ದಾರೆ. ಅದಕ್ಕಾಗಿಯೇ ಭಾರತ ಸರ್ಕಾರವು ಈ ಅನ್ಯಾಯದ ಕಾನೂನುಗಳ ವಿರುದ್ಧ ರೈತರೊಂದಿಗೆ ನಿಲ್ಲುವಂತೆ ನಾನು ಈ ಸದನವನ್ನು ಕೇಳುತ್ತಿದ್ದೇನೆ” ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಂಸದ ಗುರ್‌ರತನ್ ಸಿಂಗ್, ರೈತರ ಮೇಲೆ ಪೊಲಿಸರು ನಡೆಸಿದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ  “ಈ ಚಿತ್ರಗಳು ಭಯಾನಕವಾಗಿವೆ. ನಾನು ರೈತರ ಕುಟುಂಬದಿಂದ ಬಂದವನು. ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುವ ಕಾನೂನುಗಳನ್ನು ವಿರೋಧಿಸುವ ರೈತರ ನೋವು ಮತ್ತು ಹೋರಾಟವನ್ನು ನಾನು ಅನುಭವಿಸುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸರ್ಕಾರ ದಾಳಿ ನಡೆಸುತ್ತಿದೆ. ನಾನು ರೈತರ ಜೊತೆ ಇದ್ದೇನೆ ಎಂದು ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಮೆರಿಕಾದಲ್ಲಿ ಇಲ್ಲಿಯವರೆಗೆ ಪ್ರತಿಭಟನೆಗೆ ಬಹಿರಂಗವಾಗಿ ತಮ್ಮ ಪ್ರತಿಕ್ರಿಯೆಯನ್ನು ಹೇಳಿದವರು ಕಡಿಮೆಯೇ. ಆದರೆ, ವಕೀಲರು ಮತ್ತು ರಿಪಬ್ಲಿಕನ್ ಪಕ್ಷದ ಅಧಿಕಾರಿ ಹರ್ಮೀತ್ ಕೆ ಧಿಲ್ಲಾನ್ ಮಾತ್ರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

“ಪಂಜಾಬ್ ಮೂಲದ ರೈತರ ವಂಶಸ್ಥರಾಗಿ, ಪಂಜಾಬಿ ರೈತರು ತಮ್ಮ ಹೊಲಗಳು, ಜೀವನ ವಿಧಾನ ಮತ್ತು ಸಂಸ್ಕೃತಿಯನ್ನು ನಾಶಪಡಿಸುವ ಭಾರತೀಯ ಸರ್ಕಾರದ ದೊಡ್ಡ-ಕಾರ್ಪೊರೇಷನ್ ಪರ ಕೃಷಿ ಮಸೂದೆಯನ್ನು ಪ್ರತಿಭಟಿಸಿದ್ದಕ್ಕಾಗಿ ಹಲ್ಲೆಗೊಳಗಾಗಿದ್ದನ್ನು ನೋಡಲು ನನಗೆ ನೋವಾಗುತ್ತಿದೆ. ಪ್ರಧಾನಿ ಮೋದಿಯವರೇ ರೈತರ ಸಮಸ್ಯೆಗಳನ್ನು ಆಲಿಸಿ, ಅವರನ್ನು ಭೇಟಿ ಮಾಡಿ, ಮತ್ತು ರಾಜಿ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ಜಗ್ಮೀತ್ ಸಿಂಗ್ ಮತ್ತು ತನ್ಮನ್‌ಜೀತ್ ಸಿಂಗ್ ಧೇಸಿ ಅವರಂತಹ ನಾಯಕರು ಈ ಹಿಂದೆಯೂ ಮೋದಿ ಸರ್ಕಾರವನ್ನು, ಕಾಶ್ಮೀರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಮತ್ತು ಪ್ರತಿಭಟನೆಯನ್ನು ಮೋದಿ ಸರ್ಕಾರ ನಿಭಾಯಿಸುತ್ತಿರುವ ಕುರಿತ ಟೀಕೆಗಳು ಕೇವಲ ಪಂಜಾಬ್ ಮೂಲದ ರಾಜಕಾರಣಿಗಳಾದ ಧೇಸಿ, ಗಿಲ್, ಜಗ್ಮೀತ್ ಸಿಂಗ್, ಗುರಾರತನ್ ಸಿಂಗ್ ಮತ್ತು ಸಾರಾ ಸಿಂಗ್ ಅವರಿಂದ ಮಾತ್ರ ಬಂದಿಲ್ಲ. ಜ್ಯಾಕ್, ಹ್ಯಾರಿಸ್, ಜಾನ್ ಮೆಕ್‌ಡೊನೆಲ್, ಕೆವಿನ್ ಯಾರ್ಡ್ ಮತ್ತು ಆಂಡ್ರಿಯಾ ಹೊರ್ವಾತ್ ಕೂಡ ತಮ್ಮ ಪ್ರತಿರೋಧ ನೀಡಿದ್ದಾರೆ.

ಭಾರತದ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿರುವ ಬಹುತೇಕ ಎಲ್ಲಾ ರಾಜಕೀಯ ನಾಯಕರು ಆಯಾ ದೇಶಗಳೊಳಗಿನ ವಿರೋಧ ಪಕ್ಷಗಳ ನಾಯಕರು. ಇದು ಮೋದಿ ಸರ್ಕಾರದ ಮೇಲೆ ಅಂತರರಾಷ್ಟ್ರೀಯ ಒತ್ತಡಕ್ಕೆ ಕಾರಣವಾಗುವ ಸಂಭವವಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...