Homeಚಳವಳಿಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘದಿಂದ ರೈತ ಹೋರಾಟಕ್ಕೆ ಬೆಂಬಲ

ಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘದಿಂದ ರೈತ ಹೋರಾಟಕ್ಕೆ ಬೆಂಬಲ

ರೈತ ಹೋರಾಟದ ವಿವಿಧ ಹಂತಗಳಲ್ಲಿ ಪೊಲೀಸರು ರೈತರ ಮೇಲೆ ಅಮಾನವೀಯವಾಗಿ ವರ್ತಿಸುವುದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ತೀವ್ರವಾಗಿ ವಿರೋಧಿಸಿದ ರಾಜ್ಯವೆಂದರೆ ಪಂಜಾಬ್ ಮತ್ತು ಹರಿಯಾಣ. ಪಂಜಾಬಿನ ರೈತರು ಕಾಯ್ದೆ ಜಾರಿಯಾದಾಗಿನಿಂದಲೂ ತೀವ್ರತರದ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ದೆಹಲಿ ಚಲೋ ನಡೆಯಲು ಮೂಲ ಕಾರಣ ಪಂಜಾಬಿನ ರೈತರು.

ಪಂಜಾಬ್‌ನ ರೈತರೆಲ್ಲರೂ ತಮ್ಮ ಹಕ್ಕುಗಳಿಗಾಗಿ ರಸ್ತೆಗಿಳಿದ ಕಾರಣ, ಬಂಜಾಬಿನ ಹಲವು ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ರೈತರಿಗೆ ಸಾಥ್ ನೀಡಿವೆ. ಈಗ ಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘ (ಡಿಎಸ್ಎಪಿ) ದಿಂದ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ.

“2020ರ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಪಂಜಾಬ್ ಮತ್ತು ಇಡೀ ದೇಶದ ರೈತ ಸಂಘಗಳ ಜೊತೆಗೆ ಡಿಎಸ್ಎಪಿ ಕೂಡ ನಿಂತಿದೆ. ಈ ಕಾನೂನುಗಳು ಜಾರಿಗೆ ಬಂದರೆ ಪಂಜಾಬ್ ಕೃಷಿ ರಾಜ್ಯವಾಗಿರುವುದರಿಂದ ತೀವ್ರ ಕೆಟ್ಟ ಮಟ್ಟದಲ್ಲಿ ಹೊಡೆತ ಬೀಳುತ್ತದೆ. ವಾಸ್ತವದಲ್ಲಿ ಈ ಕಾನೂನುಗಳು ದೇಶದಲ್ಲಿ ಕೃಷಿಯನ್ನು ಖಾಸಗೀಕರಣಗೊಳಿಸುವ ಸಾಧನಗಳಾಗಿವೆ” ಎಂದು ಡಿಎಸ್ಎಪಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು

“ಭಾರತದ ಕೃಷಿ ಮತ್ತು ರೈತರನ್ನು ಕಾರ್ಪೋರೆಟ್ ಶಕ್ತಿಗಳಿಂದ ರಕ್ಷಿಸಲು ಸಮಾಜದ ಎಲ್ಲಾ ವರ್ಗದವರು ರೈತರ ಹೋರಾಟದಲ್ಲಿ ಕೈಜೋಡಿಸಬೇಕಾಗಿದೆ. ರೈತರ ಹಕ್ಕುಗಳು ಮತ್ತು ಜೀವನೋಪಾಯಕ್ಕಾಗಿ ನಡೆಸುತ್ತಿರುವ ಈ ಹೋರಾಟಕ್ಕೆ ಸೇರಲು ನಾವು ಪ್ರತಿಯೊಬ್ಬರಲ್ಲೂ ಮನವಿ ಮಾಡುತ್ತೇವೆ” ಎಂದಿದ್ದಾರೆ.

ರೈತ ಹೋರಾಟದ ವಿವಿಧ ಹಂತಗಳಲ್ಲಿ ಪೊಲೀಸರು ರೈತರ ಮೇಲೆ ಅಮಾನವೀಯವಾಗಿ ವರ್ತಿಸುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ರೈತರ ದೆಹಲಿ ಚಲೋಗೆ ಈಗಾಗಲೇ ದೇಶಾದ್ಯಂತ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹಲವು ರಾಜ್ಯಗಳಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯಾರ್ಥಿ ಸಂಘಟನೆಗಳು, ದಲಿತ, ಕಾರ್ಮಿಕ ಸಂಘಟನೆಗಳು ರೈತರ ಪರವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿವೆ.


ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...